ಆ್ಯಪ್ನಗರ

‘ಅಭಿವೃದ್ಧಿ ಪರ ಕಾಂಗ್ರೆಸ್‌ಗೆ ಬೆಂಬಲಿಸಿ’

ನಗರಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕಾಂಗ್ರೆಸ್‌ಗೆ ನಗರಸಭೆ ಚುನಾವಣೆಯಲ್ಲಿ ಮತದಾರರು ಬೆಂಬಲಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

Vijaya Karnataka 28 Aug 2018, 5:00 am
ಸಿಂಧನೂರು : ನಗರಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕಾಂಗ್ರೆಸ್‌ಗೆ ನಗರಸಭೆ ಚುನಾವಣೆಯಲ್ಲಿ ಮತದಾರರು ಬೆಂಬಲಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.
Vijaya Karnataka Web RAC-RCH27SND6


ನಗರದ ವೆಂಕಟೇಶ್ವರ ಕಾಲೊನಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಸೋಮವಾರ ಪ್ರಚಾರ ನಡೆಸಿ ಅವರು ಮಾತನಾಡಿದರು. ಬೀದಿ ದೀಪ, ರಸ್ತೆ, ನೀರು, ಚರಂಡಿ ಸೇರಿ ಎಲ್ಲ ಸೌಕರ್ಯಗಳನ್ನು ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಒದಗಿಸಲಾಗಿದೆ. ಈಗಾಗಲೇ ನಗರಸಭೆಯಲ್ಲಿ ಕಾಂಗ್ರೆಸ್‌ನಿಂದ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದು, ಇನ್ನುಳಿದ ವಾರ್ಡುಗಳಲ್ಲಿಯೂ ಜಯಭೇರಿ ಬಾರಿಸುವ ನಿರೀಕ್ಷೆ ಇದೆ. ಕೇಂದ್ರದಲ್ಲಿರುವ ಬಿಜೆಪಿ ಸರಕಾರವನ್ನು ಮುಂದಿನ ಚುನಾವಣೆಯಲ್ಲಿ ಬದಲಿಸಬೇಕು. ದೇಶಕ್ಕಾಗಿ ಪ್ರಾಣ ತೆತ್ತ ಇಂದಿರಾಗಾಂಧಿ ಹಾಗೂ ರಾಜೀವ್‌ ಗಾಂಧಿಯವರ ಕುಟುಂಬದ ಕುಡಿಯಾಗಿರುವ ರಾಹುಲ್‌ ಗಾಂಧಿ ಅವರು ಈ ದೇಶದ ಪ್ರಧಾನಿಯಾಗಬೇಕು. ಕಾಂಗ್ರೆಸ್‌ ಜನಪರ ಕೆಲಸಗಳನ್ನು ಮಾಡುತ್ತ ಬಂದಿದೆ ಎಂದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ, ಕೆಪಿಸಿಸಿ ಕಾರ್ಯದರ್ಶಿ ಕೆ.ಕರಿಯಪ್ಪ, ಶಾಹಿನ್‌, ಶಾಮೀದ್‌ಸಾಬ್‌, ಅಭ್ಯರ್ಥಿ ಟಿ.ಸುಬ್ಬಾರಾವ್‌ ಸೇರಿ ಹಲವರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ