ಆ್ಯಪ್ನಗರ

ಸುಪ್ರೀಂಕೋರ್ಟ್ ತೀರ್ಪು ಅನರ್ಹ ಶಾಸಕರ ಪರ ಬರಲಿದೆ: ಬಿ ಸಿ ಪಾಟೀಲ್ ವಿಶ್ವಾಸ

ಕಾಂಗ್ರೆಸ್ ಜೆಡಿಎಸ್ ಪಕ್ಷದ ಅನರ್ಹ ಶಾಸಕರ ಪರವೇ ಸುಪ್ರೀಂಕೋರ್ಟ್ ತೀರ್ಪು ಬರಲಿದೆ ಎಂದು ಬಿ ಸಿ ಪಾಟೀಲ್ ಹೇಳಿದರು.

Vijaya Karnataka Web 10 Sep 2019, 1:28 pm
ರಾಯಚೂರು: ಸುಪ್ರೀಂಕೋರ್ಟ್‌ ತೀರ್ಪು ಅನರ್ಹ ಶಾಸಕರ ಪರ ಬರುವ ವಿಶ್ವಾಸ ಇದೆ ಎಂದು ಅನರ್ಹ ಶಾಸಕ ಬಿ ಸಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Vijaya Karnataka Web b c patil


ಕುಟುಂಬ ಸಮೇತ ಮಂತ್ರಾಲಯಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಸುಪ್ರೀಂಕೋರ್ಟ್‌ನಲ್ಲಿ ಅಯೋಧ್ಯೆ ವಿಚಾರಣೆ ನಡೆಯುತ್ತಿರುವ ಕಾರಣ ನ್ಯಾಯಾಧೀಶರು ಕಾಂಗ್ರೆಸ್-ಜೆಡಿಎಸ್ ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಂದೂಡುತ್ತಿದ್ದಾರೆ. ಹೀಗಾಗಿ ಸ್ಪೀಕರ್ ರಮೇಶ್ ಕುಮಾರ್ ಕ್ರಮ ಪ್ರಶ್ನಿಸಿ ಅನರ್ಹ ಶಾಸಕರು ಸಲ್ಲಿಸಿರುವ ದೂರಿನ ವಿಚಾರಣೆ ತಡವಾಗುತ್ತಿದೆ ಎಂದು ಅವರು ತಿಳಿಸಿದರು.

ಸೆಪ್ಟೆಂಬರ್ 18ರಂದು ಡಾ ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರು ಅಭಿನಯದ ನಿಷ್ಕರ್ಷ ಚಿತ್ರದ ಮರು ಬಿಡುಗಡೆ ಮಾಡಲಾಗುತ್ತಿದೆ. ಸೆ.20ರಂದು ರಾಜ್ಯಾದ್ಯಂತ ನಿಷ್ಕರ್ಷ ಚಲನಚಿತ್ರ ಬಿಡುಗಡೆ ನಿಗದಿಯಾಗಿದೆ ಎಂದು ತಿಳಿಸಿದರು.

ಡಿಜಿಟಲ್ ತಂತ್ರಜ್ಞಾನ ಬಳಸಿ ಕೆಲವೊಂದು ಎಫೆಕ್ಟ್ ಗಳನ್ನು ಚಿತ್ರಕ್ಕೆ ನೀಡಿ ಹೊಸತನ ಮೂಡಿಸಲಾಗಿದೆ.

25 ವರ್ಷಗಳ ಹಿಂದೆ ನಿಷ್ಕರ್ಷ ಚಿತ್ರ ಬಿಡುಗಡೆ ಯಾಗಿತ್ತು. ಇದೀಗ ಮತ್ತೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಬಿ ಸಿ ಪಾಟೀಲ್ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ