ಆ್ಯಪ್ನಗರ

‘ಅಕ್ರಮ ಮರಂ ಸಾಗಣೆ ವಿರುದ್ಧ ಕ್ರಮಕೈಗೊಳ್ಳಿ’

ಅಕ್ರಮ ಮರಳು ಸಾಗಣೆ ಆರೋಪ ಎದುರಿಸುತ್ತಿರುವ ಆರ್‌.ಕೆ.ಕನ್ಸ್‌ಟ್ರಕ್ಷನ್‌ ಕಂಪನಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಗಣಿ ಮತ್ತು ಭೂವಿಜ್ಞಾನಿ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯ ತಹಸಿಲ್ದಾರ್‌, ಇತ್ತೀಚೆಗೆ ಪತ್ರ ಬರೆದಿದ್ದಾರೆ.

Vijaya Karnataka 9 Jan 2020, 3:36 pm
ಮಸ್ಕಿ; ಅಕ್ರಮ ಮರಳು ಸಾಗಣೆ ಆರೋಪ ಎದುರಿಸುತ್ತಿರುವ ಆರ್‌.ಕೆ.ಕನ್ಸ್‌ಟ್ರಕ್ಷನ್‌ ಕಂಪನಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಗಣಿ ಮತ್ತು ಭೂವಿಜ್ಞಾನಿ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯ ತಹಸಿಲ್ದಾರ್‌, ಇತ್ತೀಚೆಗೆ ಪತ್ರ ಬರೆದಿದ್ದಾರೆ.
Vijaya Karnataka Web take action against illegal marine shipping
‘ಅಕ್ರಮ ಮರಂ ಸಾಗಣೆ ವಿರುದ್ಧ ಕ್ರಮಕೈಗೊಳ್ಳಿ’


ಇಲ್ಲಿನ ಕರವೇ ಕಾರ್ಯಕರ್ತರು ನೀಡಿದ ದೂರು ಆಧರಿಸಿ, ತಹಸೀಲ್ದಾರ್‌ ಈ ಪತ್ರ ಬರೆದಿದ್ದಾರೆ. ''ಆರ್‌.ಕೆ ಕನ್ಸ್‌ಟ್ರಕ್ಷನ್‌ ಕಂಪನಿಯವರು ಅನಧಿಕೃತವಾಗಿ ಮರಂ ಕ್ವಾರಿಗಳನ್ನು ನಡೆಸುತ್ತಿದ್ದಾರೆ. ಕ್ವಾರಿಯ ಧೂಳಿನಿಂದ ಸುತ್ತಲಿನ ರೈತರ ಜಮೀನುಗಳಿಗೆ ವ್ಯತಿರಿಕ್ತ ಪರಿಣಾಮ ಬೀರಿ ಬೆಳೆಗಳು ನಾಶವಾಗುತ್ತಿವೆ. ಕಂದಾಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿದಾಗ ಮೆದಿಕಿನಾಳ ಗ್ರಾಮದ ಜಮೀನೊಂದರಲ್ಲಿಯಾವುದೇ ಪರವಾನಗಿ ಪಡೆಯದೇ ಪಟ್ಟಾದಾರರು ಆರ್‌.ಕೆ.ಕನ್ಸ್‌ಟ್ರಕ್ಷನ್‌ ಕಂಪನಿ ಜತೆ ಸೇರಿ ಅನಧಿಕೃತವಾಗಿ ಮರಂ ಕ್ವಾರಿ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕಂದಾಯ ನಿರೀಕ್ಷಕರು ವರದಿ ಸಲ್ಲಿಸಿದ್ದಾರೆ. ಸ್ಥಳಕ್ಕೆ ಭೇಟಿನೀಡಿ ತನಿಖೆ ಕೈಗೊಳ್ಳಬೇಕು. ತಪ್ಪಿತಸ್ಥ ಕಂಪನಿ ವಿರುದ್ಧ ದಂಡ ವಿಧಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು'' ಎಂದು ಹಿರಿಯ ಭೂವಿಜ್ಞಾನಿ ಗಣಿ ಮತ್ತು ಭೂವಿಜ್ಞಾನಿ ಇಲಾಖೆ ಅಧಿಕಾರಿಗಳಿಗೆ ಕೋರಿದ್ದಾರೆ.

..

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ