ರಾಯಚೂರು: ನಗರದ ಇನ್ಫೆಂಟ್ ಜೀಸಸ್ ಶಾಲೆಯಲ್ಲಿ ಮಂಗಳವಾರ ನಡೆದ ಮತಗಳ ಎಣಿಕೆ ವೇಳೆ, ಲಿಂಗಸುಗೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿದ್ದು ಬಂಡಿ ಅವರು, ಕೊನೆಯ ಸುತ್ತಿನ ಮತಗಳ ಎಣಿಕೆ ವೇಳೆ ತಲೆಸುತ್ತು ಹಿನ್ನೆಲೆಯಲ್ಲಿ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಭಾರಿ ತುರುಸಿನ ಸ್ಪರ್ಧೆ ಏರ್ಪಟ್ಟಿತ್ತು. ಆರಂಭದಿಂದಲೂ ಎರಡೂ ಪಕ್ಷಗಳ ಅಭ್ಯರ್ಥಿಗಳು ಪರಸ್ಪರ ಹಿಂದಿಕ್ಕುತ್ತ ಕುತೂಹಲ ಮೂಡಿಸಿದ್ದರು. ಆದರೆ, ಕೊನೆಯ ಸುತ್ತಿನ ಮತಗಳ ಎಣಿಕೆ ಸಂದರ್ಭದಲ್ಲಿ ಮತ ಎಣಿಕೆ ಕೇಂದ್ರದ ಕೊಠಡಿಯಿಂದ ಹೊರಬಂದ ಸಿದ್ದು ಬಂಡಿ ಅವರು ದಿಢೀರ್ ಕುಸಿದು ಬಿದ್ದರು. ಸ್ಥಳದಲ್ಲಿದ್ದ ವೈದ್ಯರು ಅವರ ಆರೋಗ್ಯ ತಪಾಸಣೆ ನಡೆಸಿ, ತಕ್ಷಣ ಜಿಲ್ಲಾ ಆರೋಗ್ಯ ಇಲಾಖೆಯ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದರು. ಅವರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಭಾರಿ ತುರುಸಿನ ಸ್ಪರ್ಧೆ ಏರ್ಪಟ್ಟಿತ್ತು. ಆರಂಭದಿಂದಲೂ ಎರಡೂ ಪಕ್ಷಗಳ ಅಭ್ಯರ್ಥಿಗಳು ಪರಸ್ಪರ ಹಿಂದಿಕ್ಕುತ್ತ ಕುತೂಹಲ ಮೂಡಿಸಿದ್ದರು. ಆದರೆ, ಕೊನೆಯ ಸುತ್ತಿನ ಮತಗಳ ಎಣಿಕೆ ಸಂದರ್ಭದಲ್ಲಿ ಮತ ಎಣಿಕೆ ಕೇಂದ್ರದ ಕೊಠಡಿಯಿಂದ ಹೊರಬಂದ ಸಿದ್ದು ಬಂಡಿ ಅವರು ದಿಢೀರ್ ಕುಸಿದು ಬಿದ್ದರು. ಸ್ಥಳದಲ್ಲಿದ್ದ ವೈದ್ಯರು ಅವರ ಆರೋಗ್ಯ ತಪಾಸಣೆ ನಡೆಸಿ, ತಕ್ಷಣ ಜಿಲ್ಲಾ ಆರೋಗ್ಯ ಇಲಾಖೆಯ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದರು. ಅವರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.