ರಾಯಚೂರು : ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ವಸತಿ ನಿಲಯಗಳ ಕಾರ್ಮಿಕರ ಸಂಘದ ಪದಾಧಿಕಾರಿಗಳು, ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಪುಟ್ಟರಂಗಶೆಟ್ಟಿ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮನವಿ ಸಲ್ಲಿಸಿದ ಪದಾಧಿಕಾರಿಗಳು, ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನದ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಬಾಕಿ ವೇತನ ಪಾವತಿಸಬೇಕು.
ನಿಯಮಬಾಹಿರವಾಗಿ ಕೆಲಸದಿಂದ ಹೊರಹಾಕಿರುವ ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳಬೇಕು. ಕಳೆದ 8 ತಿಂಗಳ ವೇತನ ಇಲ್ಲದೇ ಕಾರ್ಮಿಕರ ಕುಟುಂಬ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೂಡಲೇ ಬಾಕಿ ವೇತನ ಪಾವತಿಸಬೇಕು. ಗುತ್ತಿಗೆ ಪದ್ಧತಿ ನಿಷೇಧಿಸಬೇಕು. ಕಾರ್ಮಿಕರಿಗೆ ಭವಿಷ್ಯನಿಧಿ ಸೌಲಭ್ಯ ನೀಡಬೇಕು ಎಂಬುದು ಸೇರಿ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿ.ಪಂ. ಸಿಇಒ ನಳಿನ್ ಅತುಲ್, ಕಾರ್ಮಿಕ ಸಂಘಟನೆ ಪದಾಧಿಕಾರಿಗಳಾದ ಜಿ.ಅಮರೇಶ, ರವಿ ದಾದಸ್, ಅಡಿವೆಪ್ಪ, ರಮೇಶ ಮಡಿವಾಳ, ರಂಗನಾಥ, ಖೈಸರ್ ಅಹ್ಮದ್ ಸೇರಿ ಇತರರಿದ್ದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮನವಿ ಸಲ್ಲಿಸಿದ ಪದಾಧಿಕಾರಿಗಳು, ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನದ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಬಾಕಿ ವೇತನ ಪಾವತಿಸಬೇಕು.
ನಿಯಮಬಾಹಿರವಾಗಿ ಕೆಲಸದಿಂದ ಹೊರಹಾಕಿರುವ ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳಬೇಕು. ಕಳೆದ 8 ತಿಂಗಳ ವೇತನ ಇಲ್ಲದೇ ಕಾರ್ಮಿಕರ ಕುಟುಂಬ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೂಡಲೇ ಬಾಕಿ ವೇತನ ಪಾವತಿಸಬೇಕು. ಗುತ್ತಿಗೆ ಪದ್ಧತಿ ನಿಷೇಧಿಸಬೇಕು. ಕಾರ್ಮಿಕರಿಗೆ ಭವಿಷ್ಯನಿಧಿ ಸೌಲಭ್ಯ ನೀಡಬೇಕು ಎಂಬುದು ಸೇರಿ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿ.ಪಂ. ಸಿಇಒ ನಳಿನ್ ಅತುಲ್, ಕಾರ್ಮಿಕ ಸಂಘಟನೆ ಪದಾಧಿಕಾರಿಗಳಾದ ಜಿ.ಅಮರೇಶ, ರವಿ ದಾದಸ್, ಅಡಿವೆಪ್ಪ, ರಮೇಶ ಮಡಿವಾಳ, ರಂಗನಾಥ, ಖೈಸರ್ ಅಹ್ಮದ್ ಸೇರಿ ಇತರರಿದ್ದರು.