ಆ್ಯಪ್ನಗರ

ಪಂಚಾಯಿತಿಗೆ ಗ್ರಾಮಸ್ಥರ ಮುತ್ತಿಗೆ

ತಾಲೂಕು ಸಮೀಪದ ಹೀರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ ಕೂಲಿಕಾರರಿಗೆ ಉದ್ಯೋಗ ಖಾತರಿಯಡಿ ಕೂಲಿ ಕೆಲಸವನ್ನು ತಕ್ಷ ಣ ಕೊಡಬೇಕು. 2 ದಿನ ಕೆಲಸ ಮಾಡಿದ ಹಣ ನೀಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಹಾಗೂ ಮಹಿಳೆಯರು ಪಂಚಾಯಿತಿಗೆ ಶನಿವಾರ ಮುತ್ತಿಗೆ ಹಾಕಿ ಧರಣಿ ನಡೆಸಿದರು.

Vijaya Karnataka 16 Jun 2019, 5:00 am
ಸಿರವಾರ : ತಾಲೂಕು ಸಮೀಪದ ಹೀರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ ಕೂಲಿಕಾರರಿಗೆ ಉದ್ಯೋಗ ಖಾತರಿಯಡಿ ಕೂಲಿ ಕೆಲಸವನ್ನು ತಕ್ಷ ಣ ಕೊಡಬೇಕು. 2 ದಿನ ಕೆಲಸ ಮಾಡಿದ ಹಣ ನೀಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಹಾಗೂ ಮಹಿಳೆಯರು ಪಂಚಾಯಿತಿಗೆ ಶನಿವಾರ ಮುತ್ತಿಗೆ ಹಾಕಿ ಧರಣಿ ನಡೆಸಿದರು.
Vijaya Karnataka Web the siege of the villagers for the panchayat
ಪಂಚಾಯಿತಿಗೆ ಗ್ರಾಮಸ್ಥರ ಮುತ್ತಿಗೆ


ಗ್ರಾಮದ ಶಿವರಾಜ್‌ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಿಯೂ ಸಮರ್ಪಕವಾಗಿ ಉದ್ಯೋಗ ಖಾತರಿ ಯೋಜನೆ ಜಾರಿಯಾಗುತ್ತಿಲ್ಲ. ಈ ಮೊದಲು ಹೋರಾಟದ ಒತ್ತಾಯಕ್ಕೆ ಮಣಿದು 2 ದಿನಗಳ ಕೆಲಸ ನೀಡಿದರು. ಆದರೆ ಕೂಲಿ ವೇತನ 15 ದಿನವಾದರೂ ಪಾವತಿಯಾಗಿಲ್ಲ. ಉದ್ಯೋಗ ಖಾತರಿ ಕೆಲಸಕ್ಕಾಗಿ ಕೂಲಿಕಾರರು ಅರ್ಜಿ ಸಲ್ಲಿಸಿದ್ದರೂ ಪಿಡಿಒ ಕೆಲಸ ನೀಡದೆ ಸತ್ತಾಯಿಸುತ್ತಿದ್ದಾರೆ. ಇದರಿಂದ ಉದ್ಯೋಗ ನೀಡದೇ ಯೋಜನೆಯನ್ನು ದುರುಪಯೋಗಮಾಡಿಕೊಂಡು ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಅದಕ್ಕಾಗಿ ತಾಲೂಕು ಹಾಗೂ ಜಿಲ್ಲಾ ಅಧಿಕಾರಿಗಳು ಪಿಡಿಒ ಮೇಲೆ ಕಾನೂನು ಕ್ರಮ ಜರುಗಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಖಂಡನೆ: ಹೋರಾಟ ಬೆಂಬಲಿಸಿ ಗ್ರಾಮದ ಕೆಂಚಣ್ಣ ಯಾದವ್‌ ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ತನಿಖೆ ನಡೆಸಿ ಸಂಬಂಧಪಟ್ಟವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. 20 ವರ್ಷದಿಂದ ಇಲ್ಲಿನ ಜನಪ್ರತಿನಿಧಿಗಳು ಕೆಲಸ ಕೊಡುವ ಬಗ್ಗೆಯಾಗಲಿ ಇದುವರೆಗೂ ಯಾವುದೇ ರೀತಿಯ ಸಾಮಾನ್ಯ ಮಾಹಿತಿ ನೀಡಿಲ್ಲ. ಜಾಬ್‌ಕಾರ್ಡ್‌ಗಳನ್ನು ಬಳಸಿಕೊಂಡು ಹಣ ಲಪಟಾಯಿಸುವ ವ್ಯವಸ್ಥೆ ನಡೆಯುತ್ತಿರುವುದು ಖಂಡನೀಯ ಎಂದರು.

ಸ್ಥಳಕ್ಕೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಕಾಂತ ಆಗಮಿಸಿ, ಬುಧವಾರದೊಳಗೆ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು.

ಪ್ರತಿಭಟನೆಯ ನೇತೃತ್ವವನ್ನು ದುರುಗಪ್ಪ, ಹನ್ಮಂತಪ್ಪ, ಬಸ್ಸಪ್ಪ, ಯಲ್ಲಪ್ಪ, ಹನ್ಮಂತಿ, ಹುಸೇನಪ್ಪ, ಕಲ್ಲಮ್ಮ, ಮಾರೆಮ್ಮ ಹರಿಜನ, ಹೀರಮ್ಮ ವಾಡಿ ಮುಂತಾದವರು ಪಾಲ್ಗೊಂಡಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ