ಆ್ಯಪ್ನಗರ

ಇದು ಹೆಸರಿಗಷ್ಟೇ ಬಸ್ ನಿಲ್ದಾಣ !

ಪಟ್ಟಣದ ಗಾಂಧಿ ನಗರದಲ್ಲಿರುವ ಈಶಾನ್ಯ ಸಾರಿಗೆ ಬಸ್ ನಿಲ್ದಾಣವನ್ನು ಲಕ್ಷಾಂತರ ರೂ.ವೆಚ್ಚದಲ್ಲಿ ಮರು ನವೀಕರಣ ಮಾಡಲಾಗಿದ್ದರೂ ಮೂಲ ಸೌಲಭ್ಯಗಳೇ ಇಲ್ಲ.

ವಿಕ ಸುದ್ದಿಲೋಕ 12 Mar 2016, 6:41 am
ಮಸ್ಕಿ; ಪಟ್ಟಣದ ಗಾಂಧಿ ನಗರದಲ್ಲಿರುವ ಈಶಾನ್ಯ ಸಾರಿಗೆ ಬಸ್ ನಿಲ್ದಾಣವನ್ನು ಲಕ್ಷಾಂತರ ರೂ.ವೆಚ್ಚದಲ್ಲಿ ಮರು ನವೀಕರಣ ಮಾಡಲಾಗಿದ್ದರೂ ಮೂಲ ಸೌಲಭ್ಯಗಳೇ ಇಲ್ಲ.
Vijaya Karnataka Web this name is only bus stand
ಇದು ಹೆಸರಿಗಷ್ಟೇ ಬಸ್ ನಿಲ್ದಾಣ !


ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಡಿವ ನೀರು, ಶೌಚಾಲಯ ಸೇರಿದಂತೆ ಮೂಲ ಸವಲತ್ತುಗಳೇ ಈ ನಿಲ್ದಾಣದಲ್ಲಿ ಕಾಣುತ್ತಿಲ್ಲ. ಹೀಗಾಗಿ ಇಲ್ಲಿಗೆ ಬರುವ ಪ್ರಯಾಣಿಕರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಶೌಚಾಲಯ ದುರ್ವಾಸನೆ, ಆಸನಗಳ ಕೊರತೆ ಇದೆ. ಈ ಬಗ್ಗೆ ಅಧಿಕಾರಿಗಳಿಗೆ ಹಲವು ಬಾರಿ ದೂರು ಸಲ್ಲಿಸದರೂ ಯಾವುದೇ ಅಧಿಕಾರಿಗಳು ಇದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ಬಸ್ ನಿಲ್ದಾಣ ಸ್ವಚ್ಛತೆಗಾಗಿ ಗುತ್ತಿಗೆ ಪಡೆದವರು ಪ್ರತಿ ದಿನ ಕಸ ಗುಡಿಸುತ್ತಿಲ್ಲ. ಹೀಗಾಗಿ ಅವ್ಯವಸ್ಥೆ ಆಗರವಾಗಿರುವ ಈ ನಿಲ್ದಾಣಕ್ಕೆ ಸುರಿದ ಹಣವೆಲ್ಲವೂ ನೀರಿನಲ್ಲಿ ಹೋಮ ಮಾಡಿದಂತಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಬಸ್ ನಿಲ್ದಾಣ ನವೀಕರಣ ಮಾಡುವ ನೆಪದಲ್ಲಿ ಅನುದಾನ ಲೂಟಿ ಆಗಿರುವುದಕ್ಕೆ ಅಲ್ಲಲ್ಲಿ ಕಿತ್ತು ಹೋದ ಚಾವಣಿ, ಸೀಳಿದ ಗೋಡೆಗಳೇ ನಿದರ್ಶನ. ಹೊಸ ಬಸ್ ನಿಲ್ದಾಣ ಎನ್ನುವ ಹೆಗ್ಗಳಿಕೆ ಪಡೆದಿದ್ದರೂ ಮೂಲ ಸೌಲಭ್ಯಗಳು ಇಲ್ಲದೇ ಇರುವುದು ದುರಂತ. ಈಶಾನ್ಯ ಸಾರಿಗೆ ಸಂಸ್ಥೆಯ ಅಧಿಕಾರಿಗಳು ನಿಲ್ದಾಣಕ್ಕೆ ವಿಶೇಷ ಮುತುವರ್ಜಿ ವಹಿಸಿ ಮೂಲ ಸೌಲಭ್ಯಗಳ ಕೊರತೆಯನ್ನು ನಿಗಿಸುವಲ್ಲಿ ಆಸ್ಥೆ ವಹಿಸಬೇಕು ಎಂಬುದು ಪ್ರಯಾಣಿಕರ ಆಗ್ರಹವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ