ಆ್ಯಪ್ನಗರ

ಅಕ್ರಮ ಮದ್ಯ ಮಾರಾಟ ತಡೆಗೆ ಒತ್ತಾಯ

ರಾಜ್ಯದ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದರೂ, ಸರಕಾರ ಸೂಕ್ತ ಕ್ರಮ ಕೈಗೊಳ್ಳದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರಾಜ್ಯ ರೈತ ಸಂಘದ ಪದಾಧಿಕಾರಿಗಳು, ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮದ್ಯ ಮಾರಾಟ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.

ವಿಕ ಸುದ್ದಿಲೋಕ 23 Apr 2016, 6:28 am
ರಾಯಚೂರು; ರಾಜ್ಯದ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದರೂ, ಸರಕಾರ ಸೂಕ್ತ ಕ್ರಮ ಕೈಗೊಳ್ಳದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರಾಜ್ಯ ರೈತ ಸಂಘದ ಪದಾಧಿಕಾರಿಗಳು, ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮದ್ಯ ಮಾರಾಟ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.
Vijaya Karnataka Web to prevent the illegal sale of alcohol to insist
ಅಕ್ರಮ ಮದ್ಯ ಮಾರಾಟ ತಡೆಗೆ ಒತ್ತಾಯ


ರಾಜ್ಯದ ಸಿಎಂ ಅವರಿಗೆ ಮನವಿ ರವಾನಿಸಿದ ಹೋರಾಟಗಾರರು, ರಾಜ್ಯದ ಬಹುತೇಕ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಜಾಲ ಕಾರ್ಯನಿರ್ವಹಿಸುತ್ತಿದೆ. ಪರವಾನಗಿಯಿಲ್ಲದೇ ರಾಜಾರೋಷವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗಿದೆ ಎಂದು ಟೀಕಿಸಿದರು.

ಅಬಕಾರಿ ಇಲಾಖೆಯು ಅಕ್ರಮ ಮದ್ಯ ಮತ್ತು ಕಲಬೆರಕೆ ಹೆಂಡ ಮಾರಾಟಕ್ಕೆ ಕಡಿವಾಣ ಹಾಕುವಲ್ಲಿ ದಿವ್ಯ ನಿರ್ಲಕ್ಷ್ಯ ತಾಳಿದೆ. ಮದ್ಯ ಮಾರಾಟ ಎಗ್ಗಿಲ್ಲದೇ ಸಾಗಿದ್ದರಿಂದ ಎಲ್ಲೆಡೆ ಮದ್ಯ ವ್ಯಸನಿಗಳು ಹೆಚ್ಚಾಗಿದ್ದು ತೊಂದರೆಯಾಗುತ್ತಿದೆ. ಅದರಲ್ಲಿ ಹಿಂದುಳಿದವರು, ಬಡವರ್ಗದವರು ಆರೋಗ್ಯ ಸಂಬಂಧಿ ಸಮಸ್ಯೆ ಎದುರಿಸುತ್ತಿದ್ದಾರೆಂದು ದೂರಿದರು.

ಸರಕಾರ ಕೂಡಲೇ ಅಕ್ರಮ ಮದ್ಯ ಮಾರಾಟ ಮತ್ತು ಸಾಗಣೆಗೆ ತಡೆಯೊಡ್ಡಬೇಕು. ಪರವಾನಗಿ ಉಲ್ಲಂಘಿಸಿ ಮದ್ಯವನ್ನು ನಿಂತಲ್ಲಿಯೇ ಸೇವಿಸುವ ಅವಕಾಶ ಕೆಲ ಮಾರಾಟ ಮಳಿಗೆಗಳಲ್ಲಿ ಕಲ್ಪಿಸಲಾಗಿದೆ. ಅದರಿಂದ ದಾರಿಹೋಕರಿಗೆ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರಣ ಕೂಡಲೇ ರಾಜ್ಯಾದ್ಯಂತ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಸಿಎಚ್ ಪೌಡರ್ ಮಿಶ್ರಿತ ಕಲಬೆರಕೆ ಹೆಂಡ ಮಾರಾಟಕ್ಕೆ ತಡೆಹಾಕಬೇಕು. ಪೊಲೀಸರು ಮತ್ತು ಅಬಕಾರಿ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಅಕ್ರಮದಲ್ಲಿ ಶಾಮೀಲಾಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹೋರಾಟಗಾರರು ಆಗ್ರಹಿಸಿದರು. ಹೋರಾಟದ ನೇತೃತ್ವವನ್ನು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ್, ಜಿಲ್ಲಾಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ ವಹಿಸಿದ್ದರು. ಪ್ರಮುಖರಾದ ಅಮರಣ್ಣ ಗುಡಿಹಾಳ, ದೊಡ್ಡಬಸನಗೌಡ ಬಲ್ಲಟಗಿ, ವೆಂಕಟರಾವ್ ಜೀನೂರು, ಬೂದೆಯ್ಯಸ್ವಾಮಿ ಸೇರಿದಂತೆ ಅನೇಕರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ