ಆ್ಯಪ್ನಗರ

ನಾಳೆ ಡಾ.ರಾಜ್ ಹುಟ್ಟು ಹಬ್ಬ ಆಚರಣೆ

ಕನ್ನಡದ ಮೇರುನಟ ಡಾ.ರಾಜ್‌ಕುಮಾರ್ ಅವರ ಹುಟ್ಟು ಹಬ್ಬ ಹಾಗೂ ಕನ್ನಡ ಜಾಗೃತಿ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದಿಂದ ಏ.24ರಂದು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಎನ್.ಎಂ.ಮೈ ತ್ರಿಕರ್ ಹೇಳಿದರು.

ವಿಕ ಸುದ್ದಿಲೋಕ 23 Apr 2016, 6:27 am
ರಾಯಚೂರು ; ಕನ್ನಡದ ಮೇರುನಟ ಡಾ.ರಾಜ್‌ಕುಮಾರ್ ಅವರ ಹುಟ್ಟು ಹಬ್ಬ ಹಾಗೂ ಕನ್ನಡ ಜಾಗೃತಿ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದಿಂದ ಏ.24ರಂದು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಎನ್.ಎಂ.ಮೈ ತ್ರಿಕರ್ ಹೇಳಿದರು.
Vijaya Karnataka Web tomorrow is the birthday celebration of rajkumar
ನಾಳೆ ಡಾ.ರಾಜ್ ಹುಟ್ಟು ಹಬ್ಬ ಆಚರಣೆ


ಅವರು ನಗರದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಅಂದು ಸಂಜೆ 6ಕ್ಕೆ ನಗರದ ಮಹಿಳಾ ಸಮಾಜದಲ್ಲಿ ಸಮಾರಂಭ ಆಯೋಜಿಸಿದ್ದು, ರಾಜ್ ಕುಮಾರ್ ಹುಟ್ಟು ಹಬ್ಬದ ನಿಮಿತ್ತ ನೃತ್ಯ ಪ್ರದರ್ಶನ ಹಾಗೂ ರಸಮಂಜರಿ ಕಾರ್ಯಕ್ರಮ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ರಾಯಚೂರು ಕನ್ನಡ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ ಸಿಂಗ್ ರಾಥೋರ್ ಉದ್ಘಾಟಿಸಲಿದ್ದು, ಸಂಘದ ಗೌರವಾಧ್ಯಕ್ಷ ಬಸವರಾಜ ಕಳಸ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾಧ್ಯಕ್ಷ ಡಾ.ಬಸವ ಪ್ರಭು ಪಾಟೀಲ್ ಬೆಟ್ಟದೂರು, ನಗರಸಭೆ ಉಪಾಧ್ಯಕ್ಷ ಜಯಣ್ಣ, ಜಿ.ಪಂ.ಸದಸ್ಯ ಎನ್.ಕೇಶವರೆಡ್ಡಿ, ಪತ್ರಕರ್ತ ನಾಗರಾಜ ನಾಗತಿಹಳ್ಳಿ, ರಾಯಚೂರು ವಿಕಾಸ ಪರಿಷತ್ ಅಧ್ಯಕ್ಷ ರವೀಂದ್ರ ಜಲ್ದಾರ, ರಾಜಾ ಶ್ರೀನಿವಾಸ ಹಾಗೂ ನಾಗರಾಜ ರಾಜಲಬಂಡಿ ಭಾಗವಹಿಸಲಿದ್ದಾರೆಂದು ಹೇಳಿದರು. ಗೌರವಾಧ್ಯಕ್ಷ ಬಸವರಾಜ ಕಳಸ, ಈರಣ್ಣ ಬೆಂಗಾಲಿ, ನಂಜುಂಡ, ಬಸವರಾಜ ಮಿಮಿಕ್ರಿ, ರಾಮಯ್ಯ ನಾಯಕ ಸೇರಿ ಅನೇಕರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ