ರಾಯಚೂರು ; ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ, ಶುಕ್ರವಾರ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಅದರಲ್ಲಿದ್ದ ಮರಳಿನಡಿ ಸಿಲುಕಿದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.
ಗ್ರಾಮದ ಬಸಪ್ಪ (30) ಮೃತರು. ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಪಲ್ಟಿಹೊಡೆದಿದೆ. ಟ್ರ್ಯಾಕ್ಟರ್ ಟ್ರ್ಯಾಲಿಯಲ್ಲಿ ಕುಳಿತಿದ್ದ ವ್ಯಕ್ತಿ, ಮರಳಿನಡಿ ಸಿಲುಕಿದ್ದಾನೆ. ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ನಂತರ ಚಾಲಕ ಪರಾರಿಯಾಗಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಮದ ಬಸಪ್ಪ (30) ಮೃತರು. ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಪಲ್ಟಿಹೊಡೆದಿದೆ. ಟ್ರ್ಯಾಕ್ಟರ್ ಟ್ರ್ಯಾಲಿಯಲ್ಲಿ ಕುಳಿತಿದ್ದ ವ್ಯಕ್ತಿ, ಮರಳಿನಡಿ ಸಿಲುಕಿದ್ದಾನೆ. ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ನಂತರ ಚಾಲಕ ಪರಾರಿಯಾಗಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.