ಆ್ಯಪ್ನಗರ

ಟ್ರ್ಯಾಕ್ಟರ್ ಪಲ್ಟಿ: ನಾಲ್ವರು ಕಾರ್ಮಿಕರ ಸಾವು

ತಾಲೂಕಿನ ಶ್ರೀಪುರಂಜಂಕ್ಷನ್ ಬಳಿ ವಿದ್ಯುತ್ ಕಂಬ ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದರಿಂದ ಭಾನುವಾರ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.

Vijaya Karnataka 11 Jun 2018, 12:00 am
ಸಿಂಧನೂರು: ತಾಲೂಕಿನ ಶ್ರೀಪುರಂಜಂಕ್ಷನ್ ಬಳಿ ವಿದ್ಯುತ್ ಕಂಬ ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದರಿಂದ ಭಾನುವಾರ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.
Vijaya Karnataka Web RAC-RCH10SND5


ಗಂಗಾವತಿ ತಾಲೂಕಿನ ಸುಳೇಕಲ್ ಗ್ರಾಮದ ನಾಗರಾಜ(18), ರಮೇಶ(38), ಶರಣಪ್ಪ(23) ಹಾಗೂ ಸಿಂಧನೂರು ನಗರದ ಏಳುರಾಗಿಕ್ಯಾಂಪ್‌ನ ನಿವಾಸಿ, ಟ್ರ್ಯಾಕ್ಟರ್ ಚಾಲಕ ಮಲ್ಲಪ್ಪ(37) ಮತರು. ಶಿವಕುಮಾರ(25) ಎಂಬಾತಗೆ ತೀವ್ರ ಗಾಯಗಳಾಗಿದ್ದು, ಬಳ್ಳಾರಿಯ ವಿಮ್ಸ್‌ಗೆ ಕಳುಹಿಸಲಾಗಿದೆ. ಗಾಯಗೊಂಡಿರುವ ಮೌಲಪ್ಪ (30), ಯಂಕಣ್ಣ (25) ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲೂಕಿನ ಸಾಸಲಮರಿಕ್ಯಾಂಪ್‌ನಿಂದ ಸಿಂಧನೂರು ಕಡೆಗೆ ಬರುತ್ತಿರುವಾಗ ಕಂಬಗಳನ್ನು ತುಂಬಿಕೊಂಡಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ವಿದ್ಯುತ್ ಕಂಬಗಳು ಟ್ರ್ಯಾಕ್ಟರ್‌ನಲ್ಲಿದ್ದ ಕಾರ್ಮಿಕರ ಮೇಲೆ ಬಿದ್ದಿವೆ. ಮೂವರು ಸ್ಥಳದಲ್ಲಿ ಮೃತಪಟ್ಟರೆ, ಒಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ನಿರ್ಲಕ್ಷ್ಯವೇ ಕಾರಣ: ಶವಗಳನ್ನು ಮರಣೋತ್ತರ ಪರೀಕ್ಷೆಗೆ ಇಲ್ಲಿನ ಸರಕಾರಿ ಆಸ್ಪತ್ರೆಗೆ ತರಲಾಗಿತ್ತು. ಈ ವೇಳೆ ಆಸ್ಪತ್ರೆಗೆ ಆಗಮಿಸಿದ ಮೃತರ ಸಂಬಂಧಿಕರು, ಕಣ್ಣೀರಿಡುತ್ತಿರುವ ದೃಶ್ಯಗಳು ನೆರೆದವರ ಮನ ಕಲುಕಿದವು. ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ, ಸಿಪಿಐ ನಾಗರಾಜ ಕಮ್ಮಾರ್, ಪಿಎಸ್‌ಐಗಳಾದ ಎಲ್.ಬಿ.ಅಗ್ನಿ, ಸುಶೀಲ್‌ಕುಮಾರ ಆಸ್ಪತ್ರೆಗೆ ಭೇಟಿ ನೀಡಿದರು. ವಿದ್ಯುತ್ ಕಂಬಗಳನ್ನು ಲಾರಿಗಳಲ್ಲಿ ಸಾಗಿಸಬೇಕು. ಆದರೆ, ಟ್ರ್ಯಾಕ್ಟರ್‌ನಲ್ಲಿ ಕಂಬಗಳನ್ನು ಯಾವುದೇ ರೀತಿಯಿಂದ ಕಟ್ಟದೇ ಹಾಗೆ ಸಾಗಿಸಿದ್ದು, ಅವಘಡಕ್ಕೆ ಕಾರಣ ಎಂದು ಮೃತರ ಸಂಬಂಧಿಕರು ದೂರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ