ಆ್ಯಪ್ನಗರ

ಉಚಿತ ಬಸ್‌ ಪಾಸ್‌ ನೀಡಲು ಆಗ್ರಹಿಸಿ ಸಂಚಾರ ತಡೆ

ಕಳೆದ ಸರಕಾರದ ಅವಧಿಯಲ್ಲಿಯಂತೆ ಈ ಬಾರಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಣೆ ಮಾಡುವಂತೆ ಆಗ್ರಹಿಸಿ ಎಸ್‌ಎಫ್‌ಐ ಸಂಘಟನೆ ಪದಾಧಿಕಾರಿಗಳು ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ರಸ್ತೆ ಸಂಚಾರ ತಡೆದು ಮಂಗಳವಾರ ಪ್ರತಿಭಟನೆ ನಡೆಸಿದರು.

Vijaya Karnataka 14 Jun 2018, 5:00 am
ದೇವದುರ್ಗ : ಕಳೆದ ಸರಕಾರದ ಅವಧಿಯಲ್ಲಿಯಂತೆ ಈ ಬಾರಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಣೆ ಮಾಡುವಂತೆ ಆಗ್ರಹಿಸಿ ಎಸ್‌ಎಫ್‌ಐ ಸಂಘಟನೆ ಪದಾಧಿಕಾರಿಗಳು ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ರಸ್ತೆ ಸಂಚಾರ ತಡೆದು ಮಂಗಳವಾರ ಪ್ರತಿಭಟನೆ ನಡೆಸಿದರು.
Vijaya Karnataka Web RAC-RCH13DEO04


ಸಂಘದ ರಾಜ್ಯ ಉಪಾಧ್ಯಕ್ಷ ಶಬ್ಬೀರ್‌ ಜಾಲಹಳ್ಳಿ ಮಾತನಾಡಿ, ಶಾಲೆಗಳು ಪ್ರಾರಂಭವಾಗಿ ತಿಂಗಳು ಕಳೆಯುತ್ತಿದೆ. ಉಚಿತ ಬಸ್‌ಪಾಸ್‌ ಯೋಜನೆ ಜಾರಿಗೆ ಹಾಲಿ ಸರಕಾರ ಇನ್ನೂ ಸ್ಪಷ್ಟ ನಿರ್ಧಾರ ಹೊರ ಹಾಕುತ್ತಿಲ್ಲ. ಪಾಸ್‌ ವಿತರಣೆಗೆ ಸಂಬಂಧಿಸಿದಂತೆ ಗೊಂದಲಕಾರಿ ಹೇಳಿಕೆ ನೀಡುತ್ತಿದೆ. ಇದು ಸರಿಯಾದ ಕ್ರಮವಲ್ಲ. ಉಚಿತ ಬಸ್‌ಪಾಸ್‌ ವಿತರಣೆಯಿಂದ ಲಕ್ಷಾಂತರ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಇದನ್ನು ಮನಗಂಡು ಸರಕಾರ ಈ ಯೋಜನೆಯನ್ನು ಜಾರಿಗೊಳಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸರಕಾರ ಸೂಚನೆ ನೀಡಬೇಕು ಎಂದು ಆಗ್ರಹಿಸಿದರು.

ಸಂಚಾರ ತಡೆ: ಪಾಸ್‌ ವಿತರಣೆಗಾಗಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಾಜ್ಯ ಹೆದ್ದಾರಿ ಸಂಚಾರ ನಿಲುಗಡೆ ಮಾಡಿದ್ದರಿಂದ ವಾಹನಗಳ ಓಡಾಟಕ್ಕೆ ತೊಂದರೆಯಾಯಿತು. ವಾಹನಗಳ ದಟ್ಟಣೆಯಿಂದ ದ್ವಿಚಕ್ರ ವಾಹನ ಸವಾರರಿಗೂ ಇದರ ಬಿಸಿ ತಟ್ಟಿತ್ತು. ತುರ್ತು ಸಂಚಾರ ಪ್ರಯಾಣಿಕರು, ಸರಕಾರಿ ನೌಕರರು ಕಚೇರಿಗಳಿಗೆ ತೆರಳಲು ಹರಸಾಹಾಸ ಪಡಬೇಕಾಯಿತು. ಕೆಲವರು ಸೋಮನಮರಡಿ ಮೂಲಕ ದೇವದುರ್ಗ ಮಾರ್ಗವಾಗಿ ಮುಂದೆ ಸಾಗಿದರು.

ಪ್ರತಿಭಟನೆಯಲ್ಲಿ ನಿಂಗಣ್ಣ ಮಕಾಶಿ, ಕಾಶಮ್ಮ, ಅಮರೇಶ ನಾಯಕ, ಬಸವರಾಜ ಬಿರೆದಾರ, ಮಧುಶ್ರೀ, ಮಹಾಲಿಂಗ ಇತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ