ಆ್ಯಪ್ನಗರ

ವಿದ್ಯಾರ್ಥಿನಿಯರಿಂದ ಸಂಚಾರ ತಡೆ

ಗ್ರಾಮದ ಜನತಾ ಕಾಲೊನಿಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಮೂಲ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ, ವಿದ್ಯಾರ್ಥಿನಿಯರು, ಸೋಮವಾರ ಸಂಚಾರ ತಡೆದು ಪ್ರತಿಭಟಿಸಿದರು.

Vijaya Karnataka 4 Dec 2018, 5:10 pm
ಗಬ್ಬೂರು : ಗ್ರಾಮದ ಜನತಾ ಕಾಲೊನಿಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಮೂಲ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ, ವಿದ್ಯಾರ್ಥಿನಿಯರು, ಸೋಮವಾರ ಸಂಚಾರ ತಡೆದು ಪ್ರತಿಭಟಿಸಿದರು.
Vijaya Karnataka Web traffic restriction from girls
ವಿದ್ಯಾರ್ಥಿನಿಯರಿಂದ ಸಂಚಾರ ತಡೆ


ಕಳೆದ ನಾಲ್ಕೈದು ತಿಂಗಳಿಂದ ಹಾಸ್ಟೆಲ್‌ನಲ್ಲಿ ಕುಡಿವ ನೀರು, ಬೋರ್‌ವೆಲ್‌ ರಿಪೇರಿ ಸೇರಿ ನಾನಾ ಸಮಸ್ಯೆಗಳಿದ್ದರೂ ಪರಿಹರಿಸಲು ಹಾಸ್ಟೆಲ್‌ ಮೇಲ್ವಿಚಾರಕಿ ವಿಜಯಲಕ್ಷ್ಮಿ ಅವರು ನಿರ್ಲಕ್ಷ ್ಯವಹಿಸುತ್ತಿದ್ದಾರೆ ಎಂದು ದೂರಿದರು. ಸ್ಥಳಕ್ಕೆ ಆಗಮಿಸಿದ ಮೇಲ್ವಿಚಾರಕಿ ಹಾಗೂ ಅಧಿಕಾರಿಗಳಿಗೆ, ವಿದ್ಯಾರ್ಥಿನಿಯರು ಹಾಗೂ ಜಿಲ್ಲಾ ಪಂಚಾಯತಿ ಸದಸ್ಯ ಶರಭಣ್ಣ ಸಾಹುಕಾರ ತರಾಟೆಗೆ ತೆಗೆದುಕೊಂಡರು. ಎರಡ್ಮೂರು ದಿನಗಳಲ್ಲಿ ಶುದ್ಧ ಕುಡಿವ ನೀರು ಸೇರಿ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಗಡುವು ನೀಡಿದರು. ಮೇಲ್ವಿಚಾರಕಿಯ ಭರವಸೆ ನಂತರ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ