ರಾಚಯ್ಯಸ್ವಾಮಿ ಮಾಚನೂರು ರಾಯಚೂರು
ರಾಯಚೂರು: ಸತತ ಸುರಿದ ಅಕಾಲಿಕ ಮಳೆ ಹಾಗೂ ಹವಾಮಾನ ವೈಪರೀತ್ಯ ಮತ್ತು ಶೀತಗಾಳಿ ಪ್ರಮಾಣ ಹೆಚ್ಚಾಗಿ ಕೃಷಿ, ತೋಟಗಾರಿಕೆ ಬೆಳೆಗಳು ಹಾನಿಯಾಗಿದ್ದರಿಂದ ರೈತರು ಕಂಲಾಗಿದ್ದಾರೆ. ಜಿಲ್ಲಾದ್ಯಂತ ಅಂದಾಜು 22 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರೈತರು ತರಕಾರಿ ಬೆಳೆದಿದ್ದು, ಮೆಣಸಿನಕಾಯಿ, ದಾಳಿಂಬೆ, ಹೂ ಕೋಸು, ಈರುಳ್ಳಿ ಸಹ ಬೆಳೆದಿದ್ದಾರೆ. ಆದರೆ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳೆಗಳು ಸಂಪೂರ್ಣ ಕೊಳೆತಿದೆ. ಜಿಲ್ಲಾದ್ಯಂತ ಅಂದಾಜು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾಳಾಗಿವೆ.
ರೈತರ ಬೆಳೆ ಕೇಳೋರಿಲ್ಲ
ಮಳೆಯಿಂದ ಹೂ ಕೋಸು, ಟೊಮೇಟೊ, ಈರುಳ್ಳಿ ಬೆಳೆಗೆ ಬಾರಿ ಪೆಟ್ಟು ಬಿದ್ದಿದೆ. ಮಳೆಯಿಂದ ಬೆಳೆಗಳು ಕೊಳೆಯುವ ಪರಿಸ್ಥಿತಿ ಬಂದಿದೆ. ಹೂ ಕೋಸು ಹಳದಿ ಬಣ್ಣಕ್ಕೆ ತಿರುಗಿದ್ದರಿಂದ ಮಾರುಕಟ್ಟೆಯಲ್ಲಿ ದಲ್ಲಾಳಿಗಳು ಖರೀದಿಗೆ ಮುಂದಾಗುತ್ತಿಲ್ಲ. ಹೀಗಾಗಿ ಬೆಳೆಯೆಲ್ಲ ಹಿಂತಿರುಗಿ ರೈತರ ಮನೆಗೆ ಸೇರಿದ್ದರಿಂದ ರೈತರು ಸಂಪೂರ್ಣ ನಷ್ಟ ಅನುಭವಿಸುತ್ತಿದ್ದಾರೆ.
ಗ್ರಾಹಕರಿಗೆ ಬರೆ
ಕೆಜಿಗೆ 20-30 ರೂ. ಇದ್ದ ಟೊಮೇಟೊ ಈಗ 70 ರೂ. ಆಗಿದೆ. ಕೆಜಿಗೆ 40 ಇದ್ದ ಬೀನ್ಸ್ ಈಗ 70-80 ರೂ. ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿಬೆಲೆ ಇಲ್ಲದ್ದರಿಂದ ತರಕಾರಿಯನ್ನು ತಿಪ್ಪೆಗೆ ಎಸೆಯುವಂತಾಗಿದೆ. ಸೌತೆಕಾಯಿ, ಹೂ ಕೋಸು ಬೆಲೆಯೂ ಹೆಚ್ಚಾಗಿದ್ದರಿಂದ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದ್ದು, ತರಕಾರಿ ಕೊಳ್ಳುವುದೇ ದುಸ್ತರವಾಗಿದೆ. ಅದರಲ್ಲೂ ಬಡ, ಮಧ್ಯಮ ವರ್ಗದವರಂತೂ ತರಕಾರಿ ಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.
ತರಕಾರಿ ಬೆಲೆ ಏರಿಕೆ
ಟೊಮೇಟೊ ಕೆಜಿಗೆ 70 ರೂ.ಗೆ ಏರಿಕೆಯಾಗಿದೆ. ಈರುಳ್ಳಿ 40-50 ರೂ. ಆಗಿದೆ. ಕ್ಯಾರೆಟ್ ಕೆಜಿಗೆ 30 ರೂ. ಇದ್ದಿದ್ದು ಈಗ 50 ರೂ. , ಹಿರೇಕಾಯಿ ಬೆಲೆ ದುಪ್ಪಟ್ಟಾಗಿದ್ದು, ಕೆಜಿಗೆ 60 ರೂ. ಆಗಿದೆ. ಬೆಂಡೆಕಾಯಿ 50 ರೂ.ಗೆ ಏರಿಕೆಯಾಗಿದೆ. ಚವಳಿಕಾಯಿ ಕೆಜಿಗೆ 40 ಇದ್ದಿದ್ದು 60-70 ರೂ.ಗೆ ಏರಿಕೆ ಕಂಡಿದೆ. ಹಾಗಲಕಾಯಿ 50 ರೂ., ಕ್ಯಾಪ್ಸಿಕಮ್ 70 ರೂ. ಗಡಿದಾಟಿದ್ದು, ಕೊಂಡುಕೊಳ್ಳುವುದೇ ಕಷ್ಟವಾಗಿ ಪರಿಣಮಿಸಿದೆ. ಅದರಲ್ಲೂ ಟೊಮೇಟೊ ಬೆಲೆ ಕೇಳಿ ಗ್ರಾಹಕರು ಕೊಂಡುಕೊಳ್ಳಲು ಹಿಂದೇಟು ಹಾಕುತ್ತಿದ್ದು, ಕೆಜಿ ಖರೀದಿಸುತ್ತಿದ್ದ ಗ್ರಾಹಕರು ಅರ್ಧ ಕೆಜಿ ಖರೀದಿಸುತ್ತಿದ್ದಾರೆ. ಬೆಲೆ ಏರಿಕೆಗೆ ತತ್ತರಿಸಿರುವ ಕೆಲವರು ಟೊಮೇಟೊ ಖರೀದಿಸುವುದನ್ನೇ ಬಿಟ್ಟು ಹುಣಿಸೆ ಹಣ್ಣನ್ನೇ ಪರ್ಯಾಯವಾಗಿ ಬಳಸುತ್ತಿದ್ದಾರೆ.
ಕೊತ್ತಂಬರಿ, ಪಾಲಕ್, ಮೆಂತೆ ಸೇರಿ ಮುಂತಾದ ಸೊಪ್ಪುಗಳ ಬೆಲೆಯಲ್ಲಿಯೂ ಏರಿಕೆಯಾಗಿದೆ. ಮಳೆಯಿಂದ ತರಕಾರಿ ಹಾಳಾಗಿದ್ದು, ದೂರದ ಜಿಲ್ಲೆಗಳಿಂದ ಹಾಗೂ ಆಂಧ್ರ ಹಾಗೂ ತೆಲಂಗಾಣದಿಂದ ತರಕಾರಿ, ಸೊಪ್ಪು ಮಾರುಕಟ್ಟೆಗೆ ಬರುತ್ತಿದೆ ಎನ್ನುತ್ತಾರೆ ತರಕಾರಿ ವ್ಯಾಪಾರಸ್ಥರು.
ಈರುಳ್ಳಿ ಹಾಳು
ಜಿಟಿ ಜಿಟಿ ಮಳೆಯಿಂದ ತೇವಾಂಶ ಹೆಚ್ಚಿ ಈರುಳ್ಳಿ ಹಾಳಾಗುತ್ತಿದೆ. ತಾಡಪತ್ರಿ ಹೊದಿಸಿದರೆ, ಗಾಳಿ ಆಡದೇ ದುರ್ನಾತ ಬೀರುತ್ತಿದೆ. ಹೀಗಾಗಿ ಈರುಳ್ಳಿ, ಹೂ ಕೋಸು ಬೆಳೆದವರು ಚಿಂತೆಗೀಡಾಗಿದ್ದಾರೆ. ಮಳೆ ಸ್ವಲ್ಪವೂ ಬಿಡುವು ಕೊಡುತ್ತಿಲ್ಲ. ಕೆಲವೆಡೆ ಈರುಳ್ಳಿ ಹಾಕಿದಲ್ಲೇ ಕೆಡುತ್ತಿವೆ. ಹೂ ಕೋಸು ಮಳೆಯಿಂದ ಹಳದಿ ಬಣ್ಣಕ್ಕೆ ತಿರುಗಿದ್ದರಿಂದ ಕೈಗೆ ಬಂದ ಬೆಳೆ ತಿಪ್ಪೆ ಪಾಲಾಗುತ್ತಿದೆ ಎಂದು ರೈತರು ನೋವು ತೋಡಿಕೊಂಡಿದ್ದಾರೆ.
ಜಿಲ್ಲಾದ್ಯಂತ ಸುರಿದ ಮಳೆಯಿಂದ ಅಪಾರ ಪ್ರಮಾಣದ ತೋಟಗಾರಿಕೆ ಬೆಳೆ ಹಾನಿಯಾಗಿದ್ದರಿಂದ ರೈತರಿಗೆ ನಷ್ಟವಾಗಿದೆ. ಇಲಾಖೆ ಅಧಿಕಾರಿಗಳು ಬೆಳೆ ಹಾನಿ ಸಮೀಕ್ಷೆ ನಡೆಸಲಾಗಿದೆ. 150 ಹೆಕ್ಟೇರ್ ಪ್ರದೇಶದಲ್ಲಿ ಸಮೀಕ್ಷೆ ನಡೆಸಿದ್ದು, ಮತ್ತೆ ಸಮೀಕ್ಷೆ ಮುಂದುವರಿದಿದೆ.
ಮಹಮ್ಮದ್ ಅಲಿ, ಜಂಟಿ ನಿರ್ದೇಶಕರು, ತೋಟಗಾರಿಕೆ ಇಲಾಖೆ, ರಾಯಚೂರು
ಅಕಾಲಿಕ ಮಳೆಯಿಂದ ಬೆಳೆ ಹಾನಿಯಾಗಿದ್ದರಿಂದ ಮಾರುಕಟ್ಟೆಗೆ ತರಕಾರಿ ಬರುತ್ತಿಲ್ಲ. ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಹೆಚ್ಚಾಗಿದೆ. ಮಳೆ ಕಡಿಮೆಯಾದರೆ ಮೊದಲಿನಂತೆ ಬೆಲೆ ಕಡಿಮೆಯಾಗುವುದು.
ಎನ್.ಮಹಾವೀರ, ಅಧ್ಯಕ್ಷರು, ಉಸ್ಮಾನಿಯ ತರಕಾರಿ ಮಾರುಕಟ್ಟೆ, ರಾಯಚೂರು
ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಹೂ ಕೋಸು ಸಂಪೂರ್ಣ ಹಾಳಾಗಿದೆ. ಮಾರುಕಟ್ಟೆಗೆ ಕಳುಹಿಸಿದರೂ ಬೆಲೆ ಇಲ್ಲದ್ದರಿಂದ ಹಿಂತಿರುಗಿ ಮನೆಗೆ ಬಂದಿದ್ದು, ಕಷ್ಟಪಟ್ಟು ಬೆಳೆಸಿದ ಬೆಳೆ ಹಾಳಾಗಿದೆ.
ಲಕ್ಷ್ಮಣ ಗೌಡ ಕಡಗಮ್ ದೊಡ್ಡಿ, ರೈತ, ರಾಯಚೂರು ಗ್ರಾಮೀಣ
ರಾಯಚೂರು: ಸತತ ಸುರಿದ ಅಕಾಲಿಕ ಮಳೆ ಹಾಗೂ ಹವಾಮಾನ ವೈಪರೀತ್ಯ ಮತ್ತು ಶೀತಗಾಳಿ ಪ್ರಮಾಣ ಹೆಚ್ಚಾಗಿ ಕೃಷಿ, ತೋಟಗಾರಿಕೆ ಬೆಳೆಗಳು ಹಾನಿಯಾಗಿದ್ದರಿಂದ ರೈತರು ಕಂಲಾಗಿದ್ದಾರೆ.
ರೈತರ ಬೆಳೆ ಕೇಳೋರಿಲ್ಲ
ಮಳೆಯಿಂದ ಹೂ ಕೋಸು, ಟೊಮೇಟೊ, ಈರುಳ್ಳಿ ಬೆಳೆಗೆ ಬಾರಿ ಪೆಟ್ಟು ಬಿದ್ದಿದೆ. ಮಳೆಯಿಂದ ಬೆಳೆಗಳು ಕೊಳೆಯುವ ಪರಿಸ್ಥಿತಿ ಬಂದಿದೆ. ಹೂ ಕೋಸು ಹಳದಿ ಬಣ್ಣಕ್ಕೆ ತಿರುಗಿದ್ದರಿಂದ ಮಾರುಕಟ್ಟೆಯಲ್ಲಿ ದಲ್ಲಾಳಿಗಳು ಖರೀದಿಗೆ ಮುಂದಾಗುತ್ತಿಲ್ಲ. ಹೀಗಾಗಿ ಬೆಳೆಯೆಲ್ಲ ಹಿಂತಿರುಗಿ ರೈತರ ಮನೆಗೆ ಸೇರಿದ್ದರಿಂದ ರೈತರು ಸಂಪೂರ್ಣ ನಷ್ಟ ಅನುಭವಿಸುತ್ತಿದ್ದಾರೆ.
ಗ್ರಾಹಕರಿಗೆ ಬರೆ
ಕೆಜಿಗೆ 20-30 ರೂ. ಇದ್ದ ಟೊಮೇಟೊ ಈಗ 70 ರೂ. ಆಗಿದೆ. ಕೆಜಿಗೆ 40 ಇದ್ದ ಬೀನ್ಸ್ ಈಗ 70-80 ರೂ. ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿಬೆಲೆ ಇಲ್ಲದ್ದರಿಂದ ತರಕಾರಿಯನ್ನು ತಿಪ್ಪೆಗೆ ಎಸೆಯುವಂತಾಗಿದೆ. ಸೌತೆಕಾಯಿ, ಹೂ ಕೋಸು ಬೆಲೆಯೂ ಹೆಚ್ಚಾಗಿದ್ದರಿಂದ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದ್ದು, ತರಕಾರಿ ಕೊಳ್ಳುವುದೇ ದುಸ್ತರವಾಗಿದೆ. ಅದರಲ್ಲೂ ಬಡ, ಮಧ್ಯಮ ವರ್ಗದವರಂತೂ ತರಕಾರಿ ಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.
ತರಕಾರಿ ಬೆಲೆ ಏರಿಕೆ
ಟೊಮೇಟೊ ಕೆಜಿಗೆ 70 ರೂ.ಗೆ ಏರಿಕೆಯಾಗಿದೆ. ಈರುಳ್ಳಿ 40-50 ರೂ. ಆಗಿದೆ. ಕ್ಯಾರೆಟ್ ಕೆಜಿಗೆ 30 ರೂ. ಇದ್ದಿದ್ದು ಈಗ 50 ರೂ. , ಹಿರೇಕಾಯಿ ಬೆಲೆ ದುಪ್ಪಟ್ಟಾಗಿದ್ದು, ಕೆಜಿಗೆ 60 ರೂ. ಆಗಿದೆ. ಬೆಂಡೆಕಾಯಿ 50 ರೂ.ಗೆ ಏರಿಕೆಯಾಗಿದೆ. ಚವಳಿಕಾಯಿ ಕೆಜಿಗೆ 40 ಇದ್ದಿದ್ದು 60-70 ರೂ.ಗೆ ಏರಿಕೆ ಕಂಡಿದೆ. ಹಾಗಲಕಾಯಿ 50 ರೂ., ಕ್ಯಾಪ್ಸಿಕಮ್ 70 ರೂ. ಗಡಿದಾಟಿದ್ದು, ಕೊಂಡುಕೊಳ್ಳುವುದೇ ಕಷ್ಟವಾಗಿ ಪರಿಣಮಿಸಿದೆ. ಅದರಲ್ಲೂ ಟೊಮೇಟೊ ಬೆಲೆ ಕೇಳಿ ಗ್ರಾಹಕರು ಕೊಂಡುಕೊಳ್ಳಲು ಹಿಂದೇಟು ಹಾಕುತ್ತಿದ್ದು, ಕೆಜಿ ಖರೀದಿಸುತ್ತಿದ್ದ ಗ್ರಾಹಕರು ಅರ್ಧ ಕೆಜಿ ಖರೀದಿಸುತ್ತಿದ್ದಾರೆ. ಬೆಲೆ ಏರಿಕೆಗೆ ತತ್ತರಿಸಿರುವ ಕೆಲವರು ಟೊಮೇಟೊ ಖರೀದಿಸುವುದನ್ನೇ ಬಿಟ್ಟು ಹುಣಿಸೆ ಹಣ್ಣನ್ನೇ ಪರ್ಯಾಯವಾಗಿ ಬಳಸುತ್ತಿದ್ದಾರೆ.
ಕೊತ್ತಂಬರಿ, ಪಾಲಕ್, ಮೆಂತೆ ಸೇರಿ ಮುಂತಾದ ಸೊಪ್ಪುಗಳ ಬೆಲೆಯಲ್ಲಿಯೂ ಏರಿಕೆಯಾಗಿದೆ. ಮಳೆಯಿಂದ ತರಕಾರಿ ಹಾಳಾಗಿದ್ದು, ದೂರದ ಜಿಲ್ಲೆಗಳಿಂದ ಹಾಗೂ ಆಂಧ್ರ ಹಾಗೂ ತೆಲಂಗಾಣದಿಂದ ತರಕಾರಿ, ಸೊಪ್ಪು ಮಾರುಕಟ್ಟೆಗೆ ಬರುತ್ತಿದೆ ಎನ್ನುತ್ತಾರೆ ತರಕಾರಿ ವ್ಯಾಪಾರಸ್ಥರು.
ಈರುಳ್ಳಿ ಹಾಳು
ಜಿಟಿ ಜಿಟಿ ಮಳೆಯಿಂದ ತೇವಾಂಶ ಹೆಚ್ಚಿ ಈರುಳ್ಳಿ ಹಾಳಾಗುತ್ತಿದೆ. ತಾಡಪತ್ರಿ ಹೊದಿಸಿದರೆ, ಗಾಳಿ ಆಡದೇ ದುರ್ನಾತ ಬೀರುತ್ತಿದೆ. ಹೀಗಾಗಿ ಈರುಳ್ಳಿ, ಹೂ ಕೋಸು ಬೆಳೆದವರು ಚಿಂತೆಗೀಡಾಗಿದ್ದಾರೆ. ಮಳೆ ಸ್ವಲ್ಪವೂ ಬಿಡುವು ಕೊಡುತ್ತಿಲ್ಲ. ಕೆಲವೆಡೆ ಈರುಳ್ಳಿ ಹಾಕಿದಲ್ಲೇ ಕೆಡುತ್ತಿವೆ. ಹೂ ಕೋಸು ಮಳೆಯಿಂದ ಹಳದಿ ಬಣ್ಣಕ್ಕೆ ತಿರುಗಿದ್ದರಿಂದ ಕೈಗೆ ಬಂದ ಬೆಳೆ ತಿಪ್ಪೆ ಪಾಲಾಗುತ್ತಿದೆ ಎಂದು ರೈತರು ನೋವು ತೋಡಿಕೊಂಡಿದ್ದಾರೆ.
ಜಿಲ್ಲಾದ್ಯಂತ ಸುರಿದ ಮಳೆಯಿಂದ ಅಪಾರ ಪ್ರಮಾಣದ ತೋಟಗಾರಿಕೆ ಬೆಳೆ ಹಾನಿಯಾಗಿದ್ದರಿಂದ ರೈತರಿಗೆ ನಷ್ಟವಾಗಿದೆ. ಇಲಾಖೆ ಅಧಿಕಾರಿಗಳು ಬೆಳೆ ಹಾನಿ ಸಮೀಕ್ಷೆ ನಡೆಸಲಾಗಿದೆ. 150 ಹೆಕ್ಟೇರ್ ಪ್ರದೇಶದಲ್ಲಿ ಸಮೀಕ್ಷೆ ನಡೆಸಿದ್ದು, ಮತ್ತೆ ಸಮೀಕ್ಷೆ ಮುಂದುವರಿದಿದೆ.
ಮಹಮ್ಮದ್ ಅಲಿ, ಜಂಟಿ ನಿರ್ದೇಶಕರು, ತೋಟಗಾರಿಕೆ ಇಲಾಖೆ, ರಾಯಚೂರು
ಅಕಾಲಿಕ ಮಳೆಯಿಂದ ಬೆಳೆ ಹಾನಿಯಾಗಿದ್ದರಿಂದ ಮಾರುಕಟ್ಟೆಗೆ ತರಕಾರಿ ಬರುತ್ತಿಲ್ಲ. ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಹೆಚ್ಚಾಗಿದೆ. ಮಳೆ ಕಡಿಮೆಯಾದರೆ ಮೊದಲಿನಂತೆ ಬೆಲೆ ಕಡಿಮೆಯಾಗುವುದು.
ಎನ್.ಮಹಾವೀರ, ಅಧ್ಯಕ್ಷರು, ಉಸ್ಮಾನಿಯ ತರಕಾರಿ ಮಾರುಕಟ್ಟೆ, ರಾಯಚೂರು
ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಹೂ ಕೋಸು ಸಂಪೂರ್ಣ ಹಾಳಾಗಿದೆ. ಮಾರುಕಟ್ಟೆಗೆ ಕಳುಹಿಸಿದರೂ ಬೆಲೆ ಇಲ್ಲದ್ದರಿಂದ ಹಿಂತಿರುಗಿ ಮನೆಗೆ ಬಂದಿದ್ದು, ಕಷ್ಟಪಟ್ಟು ಬೆಳೆಸಿದ ಬೆಳೆ ಹಾಳಾಗಿದೆ.
ಲಕ್ಷ್ಮಣ ಗೌಡ ಕಡಗಮ್ ದೊಡ್ಡಿ, ರೈತ, ರಾಯಚೂರು ಗ್ರಾಮೀಣ