ಆ್ಯಪ್ನಗರ

ನೋಡಲ್‌ ಅಧಿಕಾರಿ ಭೇಟಿ: ಪರಿಶೀಲನೆ

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಇಲಾಖೆಯ ರಾಜ್ಯಮಟ್ಟದ ನೋಡಲ್‌ ಅಧಿಕಾರಿ ಡಾ.ಗಣೇಶ ಸೋಮವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು.

Vijaya Karnataka 15 May 2019, 5:00 am
ಮುದಗಲ್‌ : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಇಲಾಖೆಯ ರಾಜ್ಯಮಟ್ಟದ ನೋಡಲ್‌ ಅಧಿಕಾರಿ ಡಾ.ಗಣೇಶ ಸೋಮವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು.
Vijaya Karnataka Web RAC-RCH14MDL01


ಸಮುದಾಯ ಆರೋಗ್ಯ ಕೇಂದ್ರದ ದಾಖಲೆ, ವಸ್ತುಸ್ಥಿತಿಯನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದಲ್ಲಿ ಡಿ.ಗ್ರೂಪ್‌ ನೌಕರರ ಸಮಸ್ಯೆ ಇರುವುದು ತಿಳಿದು ಬಂದಿದ್ದು, ಅದರ ಟೆಂಡರ್‌ ಪ್ರಕ್ರಿಯೆ ಚುನಾವಣೆ ನೀತಿ ಸಂಹಿತೆಯ ನಿಟ್ಟಿನಲ್ಲಿ ನನೆಗುದಿಗೆ ಬಿದ್ದಿದೆ. ನೀತಿ ಸಂಹಿತೆ ಸಡಿಲಿಕೆಗೊಂಡ ಬಳಿಕ ಶೀಘ್ರದಲ್ಲಿಯೇ ಟೆಂಡರ್‌ ಮೂಲಕ ಡಿ. ಗ್ರೂಪ್‌ ನೌಕರರನ್ನು ಗುತ್ತಿಗೆ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಸಮುದಾಯ ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳಿಗೆ ಹೆಚ್ಚಿನ ಹಾಗೂ ಅಗತ್ಯ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ತಜ್ಞ ವೈದ್ಯರು ಸೇರಿ ಆರೋಗ್ಯ ಸಹಾಯಕಿಯರು, ನರ್ಸ್‌ ಹುದ್ದೆ ಸೇರಿ ಕ್ರಮ ಜರುಗಿಸಲು ಇಲಾಖೆಯ ಮೂಲಕ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು.

ವೈದ್ಯರು ಮತ್ತು ಸಿಬ್ಬಂದಿ ವಸತಿ ಗೃಹಗಳ ಕುರಿತು ಕೇಳಿದ ಪ್ರಶ್ನೆಗೆ ಇಲಾಖೆಯ ಗಮನಕ್ಕೆ ತರಲಾಗುವುದು. ವಸತಿ ಗೃಹಗಳು ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗಕ್ಕೆ ಮೂಲ ಸೌಲಭ್ಯವಾಗಿದೆ. ರಾಜ್ಯಮಟ್ಟದ ಸಭೆ ನಡೆಯಲಿದೆ ಅದರಲ್ಲಿ ಗಮನ ಸೆಳೆದು ಸರಕಾರಕ್ಕೆ ವರದಿ ಸಲ್ಲಿಸಿ ಕ್ರಮ ಕೈಕೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ನಾಗರಾಜ, ಟಿಎಚ್‌ಒ ಡಾ.ರುದ್ರಗೌಡ, ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಅಮರೇಶ ಪಾಟೀಲ, ಡಾ.ಸಂಗನಗೌಡ ಡಿಗ್ಗಿ ಸೇರಿ ಇತರರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ