ಆ್ಯಪ್ನಗರ

ಲೋಕಾಯುಕ್ತ ಅಧಿಕಾರಿಗಳ ಭೇಟಿ

ಪಟ್ಟಣ ಪಂಚಾಯಿತಿ, ಅಂಗನವಾಡಿ ಕೇಂದ್ರ, ಸರಕಾರಿ ಬಾಲಕರ ಪ್ರೌಢಶಾಲೆ ಮತ್ತು ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಲೋಕಾಯುಕ್ತ ಅಧಿಕಾರಿ ಟಿ.ಆರ್‌ ರಾಘವೇಂದ್ರ ಅವರು ಪಟ್ಟಣಕ್ಕೆ ಭೇಟಿ ನೀಡಿ ಹಲವಾರು ಕಡತಗಳನ್ನು ಪರಿಶೀಲಿಸಿದರು.

Vijaya Karnataka 25 Jul 2019, 5:00 am
ಸಿರವಾರ : ಪಟ್ಟಣ ಪಂಚಾಯಿತಿ, ಅಂಗನವಾಡಿ ಕೇಂದ್ರ, ಸರಕಾರಿ ಬಾಲಕರ ಪ್ರೌಢಶಾಲೆ ಮತ್ತು ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಲೋಕಾಯುಕ್ತ ಅಧಿಕಾರಿ ಟಿ.ಆರ್‌ ರಾಘವೇಂದ್ರ ಅವರು ಪಟ್ಟಣಕ್ಕೆ ಭೇಟಿ ನೀಡಿ ಹಲವಾರು ಕಡತಗಳನ್ನು ಪರಿಶೀಲಿಸಿದರು.
Vijaya Karnataka Web RAC-RCH24SWR04


ಪಟ್ಟಣ ಪಂಚಾಯಿತಿಗೆ ಭೇಟಿ ನೀಡಿದ ಅವರು ಕಾಮಗಾರಿಗಳ ಕಡತ ಮತ್ತು ಅನುಮೋದನೆ ಪತ್ರ ನೋಡಿದರು. ನಂತರ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಆಸ್ಪತ್ರೆಯಲ್ಲಿನ ಸಮಸ್ಯೆ ಹಾಗೂ ಚಿಕಿತ್ಸೆಯ ಬಗ್ಗೆ ರೋಗಿಗಳಿಂದ ಮಾಹಿತಿ ಪಡೆದರು. ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಸಂಖ್ಯೆ, ಊಟ ತಯಾರಿಕಾ ವಿಧಾನ, ಗರ್ಭಿಣಿಯರ ಮಾಸಿಕ ಪುಸ್ತಕಗಳನ್ನು ಪರಿಶೀಲಿಸಿದರು.

ವೈದ್ಯಾಧಿಕಾರಿ ಡಾ.ಪರಿಮಳಾ ಮೈತ್ರಿ,ಡಾ.ಸುನೀಲ್‌ ಸರೋದೆ, ಪಟ್ಟಣ ಪಂಚಾಯಿತಿಯ ಸಿಬ್ಬಂದಿ ಮತ್ತು ಲೋಕಾಯುಕ್ತ ಅಧಿಕಾರಿಗಳು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ