ಆ್ಯಪ್ನಗರ

ಆಕಸ್ಮಿಕ ಬೆಂಕಿ: ಗುಡಿಸಲು ಭಸ್ಮ

ತಾಲೂಕಿನ ಮೋಳೆ ಗ್ರಾಮದಲ್ಲಿ ಆಕಸ್ಮಿಕವಾಗಿ ಅಗ್ನಿ ದುರಂತ ಸಂಭವಿಸಿ, ಗುಡಿಸಲು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ...

Vijaya Karnataka 22 Nov 2018, 5:00 am
ಚನ್ನಪಟ್ಟಣ: ತಾಲೂಕಿನ ಮೋಳೆ ಗ್ರಾಮದಲ್ಲಿ ಆಕಸ್ಮಿಕವಾಗಿ ಅಗ್ನಿ ದುರಂತ ಸಂಭವಿಸಿ, ಗುಡಿಸಲು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.
Vijaya Karnataka Web RNR-21cpt8


ಗ್ರಾಮದ ಚಿಕ್ಕರಾಜು ಎಂಬುವರಿಗೆ ಸೇರಿದ ಗುಡಿಸಲು ಬೆಂಕಿ ಕಾಣಿಸಿಕೊಂಡು ಅದರ ಕೆನ್ನಾಲಿಗೆಗೆ ಕ್ಷ ಣಾರ್ಧದಲ್ಲಿ ಮನೆಯಲ್ಲಿದ್ದ ಎಲ್ಲ ಅಗತ್ಯ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಮನೆಯಲ್ಲಿದ್ದ ಗೋಬರ್‌ ಗ್ಯಾಸ್‌ ಲೀಕ್‌ನಿಂದ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದು, ಅಕ್ಕಪಕ್ಕದ ಜನರು ಬೆಂಕಿ ಆರಿಸುವಷ್ಟರಲ್ಲಿ ಗುಡಿಸಲನ್ನು ಸಂಪೂರ್ಣ ಆವರಿಸಿದ್ದರಿಂದ ಎಲ್ಲ ವಸ್ತುಗಳು ಭಸ್ಮವಾಗಿವೆ.

ಮನೆಯಲ್ಲಿ ಯಾರು ಇಲ್ಲದ ವೇಳೆ ಅವಘಡ ನಡೆದಿದೆ. ಆದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಆದರೆ ಮನೆಯಲ್ಲಿದ್ದ ದವಸಧಾನ್ಯದ ಜತೆಗೆ ಬೀರುವಿನಲ್ಲಿದ್ದ ಹಣ ಮತ್ತು ಬಟ್ಟೆ ,ಪಾತ್ರೆ ಬೆಂಕಿಗೆ ಆಹುತಿಯಾಗಿ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹಾಳಾಗಿವೆ. ಈ ಬಗ್ಗೆ ಅಕ್ಕೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಜಿಲ್ಲಾ ಮತ್ತು ತಾಲೂಕು ಆಡಳಿತ ನೆರವಿಗೆ ಬಂದು ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ