ಆ್ಯಪ್ನಗರ

‘ಶಿಕ್ಷ ಣ ಕ್ಷೇತ್ರದಲ್ಲಿ ದೂರದೃಷ್ಟಿ ಅಗತ್ಯ’

ವಿಕ ಸುದ್ದಿಲೋಕ ಕನಕಪುರ ಕರ್ಮಯೋಗಿ ಎಸ್‌...

Vijaya Karnataka 14 Dec 2018, 5:00 am
ಕನಕಪುರ: ಕರ್ಮಯೋಗಿ ಎಸ್‌.ಕರಿಯಪ್ಪನವರು ಕಟ್ಟಿ ಬೆಳೆಸಿದ ಶಿಕ್ಷಣ ಸಂಸ್ಥೆ ಇಂದು ರಾಜ್ಯಮಟ್ಟದಲ್ಲಿ ವಿದ್ಯಾರ್ಥಿಗಳ ಸಾಧನೆಯಿಂದ ಗುರುತಿಸುವಂತಾಗಿದ್ದು, ಅವರ ಕನಸನ್ನು ನನಸು ಮಾಡಬೇಕು ಎಂದು ಸಂಸ್ಥೆಯ ಅಧ್ಯಕ್ಷ ನಾಗರಾಜು ಹೇಳಿದರು.
Vijaya Karnataka Web
‘ಶಿಕ್ಷ ಣ ಕ್ಷೇತ್ರದಲ್ಲಿ ದೂರದೃಷ್ಟಿ ಅಗತ್ಯ’


ಕನಕಪುರ ಗ್ರಾಮಾಂತರ ಶಿಕ್ಷ ಣ ಸಂಸ್ಥೆಯಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಸಂಸ್ಥೆ ಮೂರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಅವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.

''ಶಿಕ್ಷ ಣ ಕ್ಷೇತ್ರಕ್ಕೆ ತನ್ನದೇ ಕೊಡುಗೆ ನೀಡುವ ನಿಟ್ಟಿನಲ್ಲಿ ದೂರದೃಷ್ಟಿ ಉಳ್ಳವರಾಗಿದ್ದ ಶಿಕ್ಷ ಣ ತಜ್ಞ ಕರಿಯಪ್ಪನವರು ಶೈಕ್ಷ ಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳನ್ನು ಒಟ್ಟೊಟ್ಟಿಗೆ ಕರೆದೊಯ್ಯವಂತೆ ಈ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದಾರೆ. ಈ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು 160ಕ್ಕೂ ವಿದ್ಯಾರ್ಥಿಗಳು ಈ ಶೈಕ್ಷ ಣಿಕ ವರ್ಷದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಂಸ್ಥೆಗೆ ಉತ್ತಮ ಹೆಸರು ತಂದುಕೊಟ್ಟಿದ್ದಾರೆ. ಇಂದು ಮೂರು ವಿದ್ಯಾರ್ಥಿಗಳು ಅದನ್ನು ಮುಂದುವರಿಸಿಕೊಂಡು ರಾಷ್ಟಮಟ್ಟಕ್ಕೆ ಕೊಂಡೊಯ್ದಿದ್ದಾರೆ,'' ಎಂದರು.

ಸಂಸ್ಥೆಯ ಕಾರ್ಯದರ್ಶಿ ರಮೇಶ್‌ ಮಾತನಾಡಿ, ''ಕಳೆದ ಸಾಲಿನಿಂದ ಶಿಕ್ಷ ಣದ ಜತೆಗೆ ಕ್ರೀಡಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಲ್ಲಿ ಆಸಕ್ತಿ ಹುಟ್ಟುಹಾಕಲು ಸಂಸ್ಥೆ ಉತ್ಸುಕವಾಗಿದ್ದು, ಅದರಂತೆ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ಮತ್ತು ತರಬೇತಿ ನೀಡಲಾಗುತ್ತದೆ ಅಂತೆಯೇ ವಿದ್ಯಾರ್ಥಿಗಳು ಸಾಧನೆಯತ್ತ ಸಾಗುತ್ತಿದ್ದಾರೆ,'' ಎಂದರು.

ಹಾವೇರಿಯಲ್ಲಿ ನಡೆದ ರಾಜ್ಯಮಟ್ಟದಲ್ಲಿ ಟೆನಿಸ್‌ ವಾಲಿಬಾಲ್‌ ಕ್ರೀಡೆಯಲ್ಲಿ ತೃತೀಯ ಸ್ಥಾನ ಪಡೆದಿರುವ ಸೋನಾ. ಬಿ,ವಿ. ತೆಲಂಗಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಬಳ್ಳಾರಿಯಲ್ಲಿ ನಡೆದ ರಾಜ್ಯಮಟ್ಟದ ಥ್ರೋಬಾಲ್‌ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಶಿವಕುಮಾರ್‌ ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ಬೆಳ್ಳಿಯ ಪದಕ ಪಡೆದ ಮಹದೇವಸ್ವಾಮಿ ಸೇರಿದಂತೆ ಮೂರು ಮಂದಿಯನ್ನು ಶಿಕ್ಷ ಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಬೋಧÜಕ ಸಿಬ್ಬಂದಿ ಸನ್ಮಾನಿಸಿ ಅಭಿನಂದಿಸಿದರು.

ಈ ವೇಳೆ ಪ್ರಾಂಶುಪಾಲರಾದ ಆಂಜನಪ್ಪ, ಉಪನ್ಯಾಸಕರಾದ ಕವಿತಾ, ದಿವ್ಯಾಶ್ರೀ, ವಿಶ್ವನಾಥ್‌, ಲಕ್ಷ್ಮೀಶ, ಚಂದ್ರಶೇಖರ್‌, ನವೀನ್‌ಕುಮಾರ್‌, ಸೇರಿದಂತೆ ಅನೇಕರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ