ಆ್ಯಪ್ನಗರ

ರಸ್ತೆ ದಾಟುವಾಗ ಕಾರು ಡಿಕ್ಕಿ: ಮಹಿಳೆ ಸಾವು

ವಿರಕ್ತಮಠದ ಮುಂಬದಿಯ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆæ ಕಾರು ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ...

Vijaya Karnataka 1 Jan 2019, 5:00 am
ಚನ್ನಪಟ್ಟಣ: ವಿರಕ್ತಮಠದ ಮುಂಬದಿಯ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆæ ಕಾರು ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ.
Vijaya Karnataka Web
ರಸ್ತೆ ದಾಟುವಾಗ ಕಾರು ಡಿಕ್ಕಿ: ಮಹಿಳೆ ಸಾವು


ಷಹಜತ್‌ಬಿ(50) ಮೃತ ಮಹಿಳೆ. ಪಟ್ಟಣದ ಮದಿನಾಚೌಕದ ಮುನುರ್‌ಖಾನ್‌ ಎಂಬುವರ ಪತ್ನಿಯಾಗಿದ್ದು, ರಾಮನಗರದ ಆಸ್ಪತ್ರೆಗೆ ಹೋಗಿ ಆಟೊದಲ್ಲಿ ಬಂದು ಇಳಿದು ರಸ್ತೆ ದಾಟುವಾಗ ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಬಿಡಿ ಕಟ್ಟುವ ಕೆಲಸ ಮಾಡುತ್ತಿದ್ದರು. ಇಬ್ಬರು ಮಕ್ಕಳನ್ನು ಹೊಂದಿದ್ದಾರೆ. ಕಾರು ಡಿಕ್ಕಿ ಹೊಡೆದಾಗ ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ಬಗ್ಗೆ ಸಂಚಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ.

ಬೈಕ್‌ ಕಳವು: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರವಾಹನವನ್ನು ಕಳವು ಮಾಡಿರುವ ಘಟನೆ ನಡೆದಿದೆ.
ತಾಲೂಕಿನ ಮೋಳೆದೊಡ್ಡಿ ಗ್ರಾಮದ ಸಂತೋಷ್‌ ದ್ವಿಚಕ್ರವಾಹನ ಕಳೆದುಕೊಂಡಿದ್ದು, ಪತ್ನಿಯನ್ನು ಹೇರಿಗೆಗೆ ಆಸ್ಪತ್ರೆಗೆ ದಾಖಲಿಸಿ, ಹೋರ ಬಂದು ನೋಡಿದಾಗ ದ್ವಿಚಕ್ರವಾಹನವನ್ನು ಕಳವು ಮಾಡಲಾಗಿದೆ. ಈ ಪ್ರಕರಣದ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ