ಆ್ಯಪ್ನಗರ

ಚನ್ನಪಟ್ಟಣದಲ್ಲಿ ಮತ್ತೆ ಮೂವರಿಗೆ ಕೊರೊನಾ, ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆ

ರಾಮನಗರ ಜಿಲ್ಲೆಯಲ್ಲಿ ಮಾರಕ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಶುಕ್ರವಾರ ಜಿಲ್ಲೆಯಲ್ಲಿ ಮತ್ತೆ 3 ಮಂದಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ದೃಢವಾಗಿದೆ.

Vijaya Karnataka Web 12 Jun 2020, 1:48 pm
ರಾಮನಗರ: ಶರವೇಗದಲ್ಲಿ ಏರಿಕೆ ಕಾಣುತ್ತಿರುವ ಕೊರೊನಾ ವೈರಸ್‌ನ ಪಾಸಿಟಿವ್ ಪ್ರಕರಣದಿಂದಾಗಿ ಜಿಲ್ಲೆಯಲ್ಲಿ ಜನ ಭಯಭೀತರಾಗಿದ್ದಾರೆ. ಶುಕ್ರವಾರ ಒಂದೇ ದಿನ ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
Vijaya Karnataka Web ಸಾಂದರ್ಭಿಕ ಚಿತ್ರ


ಗುರುವಾರದವರೆಗೆ ಜಿಲ್ಲೆಯಲ್ಲಿ 12 ಮಂದಿ ಸೋಂಕಿತರಿದ್ದರು. ಚನ್ನಪಟ್ಟಣದಲ್ಲಿ ಅತಿ ಹೆಚ್ಚು 7 ಮಂದಿ ಸೋಂಕಿತರಿದ್ದರು. ಇದೀಗ ಚನ್ನಪಟ್ಟಣದಲ್ಲಿ ಮತ್ತೆ ಮೂವರಲ್ಲಿ ಸೋಂಕು ಪತ್ತೆಯಾಗಿದೆ.

ವಾರದ ಹಿಂದೆ ಶಾನುಭೋಗನಹಳ್ಳಿಯಲ್ಲಿ ವಾಸವಿದ್ದ ಜಿಲ್ಲಾ ಕಾರಾಗೃಹ ಸಿಬ್ಬಂದಿಯೊಬ್ಬರಿಗೆ ಸೋಂಕು ದೃಢ ಪಟ್ಟಿತ್ತು.
ಈತನೊಂದಿಗೆ ಎಣ್ಣೆ ಪಾರ್ಟಿ ಮಾಡಿದ್ದ ಮೂವರಲ್ಲಿ ಮಂಗಳವಾರ ಸೋಂಕು ಪತ್ತೆಯಾಗಿತ್ತು. ಮತ್ತೆ ಇದೀಗ ಈತನ ಸಂಪರ್ಕದಲ್ಲಿದ್ದ ಮೂವರಿಗೆ ಸೋಂಕು ಹರಡಿದೆ.

ರಾಮನಗರದಲ್ಲಿ 2, ಚನ್ನಪಟ್ಟಣದಲ್ಲಿ 10, ಮಾಗಡಿ ಮತ್ತು ಕನಕಪುರದಲ್ಲಿ ತಲಾ ಒಂದು ಕೇಸ್ ಪತ್ತೆಯಾಗಿದ್ದು, ಮಾಗಡಿಯ ಒಂದು ಪ್ರಕರಣ ಗುಣಮುಖವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ