ರಾಮನಗರ: ಶರವೇಗದಲ್ಲಿ ಏರಿಕೆ ಕಾಣುತ್ತಿರುವ ಕೊರೊನಾ ವೈರಸ್ನ ಪಾಸಿಟಿವ್ ಪ್ರಕರಣದಿಂದಾಗಿ ಜಿಲ್ಲೆಯಲ್ಲಿ ಜನ ಭಯಭೀತರಾಗಿದ್ದಾರೆ. ಶುಕ್ರವಾರ ಒಂದೇ ದಿನ ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ಗುರುವಾರದವರೆಗೆ ಜಿಲ್ಲೆಯಲ್ಲಿ 12 ಮಂದಿ ಸೋಂಕಿತರಿದ್ದರು. ಚನ್ನಪಟ್ಟಣದಲ್ಲಿ ಅತಿ ಹೆಚ್ಚು 7 ಮಂದಿ ಸೋಂಕಿತರಿದ್ದರು. ಇದೀಗ ಚನ್ನಪಟ್ಟಣದಲ್ಲಿ ಮತ್ತೆ ಮೂವರಲ್ಲಿ ಸೋಂಕು ಪತ್ತೆಯಾಗಿದೆ.
ವಾರದ ಹಿಂದೆ ಶಾನುಭೋಗನಹಳ್ಳಿಯಲ್ಲಿ ವಾಸವಿದ್ದ ಜಿಲ್ಲಾ ಕಾರಾಗೃಹ ಸಿಬ್ಬಂದಿಯೊಬ್ಬರಿಗೆ ಸೋಂಕು ದೃಢ ಪಟ್ಟಿತ್ತು.
ಈತನೊಂದಿಗೆ ಎಣ್ಣೆ ಪಾರ್ಟಿ ಮಾಡಿದ್ದ ಮೂವರಲ್ಲಿ ಮಂಗಳವಾರ ಸೋಂಕು ಪತ್ತೆಯಾಗಿತ್ತು. ಮತ್ತೆ ಇದೀಗ ಈತನ ಸಂಪರ್ಕದಲ್ಲಿದ್ದ ಮೂವರಿಗೆ ಸೋಂಕು ಹರಡಿದೆ.
ರಾಮನಗರದಲ್ಲಿ 2, ಚನ್ನಪಟ್ಟಣದಲ್ಲಿ 10, ಮಾಗಡಿ ಮತ್ತು ಕನಕಪುರದಲ್ಲಿ ತಲಾ ಒಂದು ಕೇಸ್ ಪತ್ತೆಯಾಗಿದ್ದು, ಮಾಗಡಿಯ ಒಂದು ಪ್ರಕರಣ ಗುಣಮುಖವಾಗಿದೆ.
ಗುರುವಾರದವರೆಗೆ ಜಿಲ್ಲೆಯಲ್ಲಿ 12 ಮಂದಿ ಸೋಂಕಿತರಿದ್ದರು. ಚನ್ನಪಟ್ಟಣದಲ್ಲಿ ಅತಿ ಹೆಚ್ಚು 7 ಮಂದಿ ಸೋಂಕಿತರಿದ್ದರು. ಇದೀಗ ಚನ್ನಪಟ್ಟಣದಲ್ಲಿ ಮತ್ತೆ ಮೂವರಲ್ಲಿ ಸೋಂಕು ಪತ್ತೆಯಾಗಿದೆ.
ವಾರದ ಹಿಂದೆ ಶಾನುಭೋಗನಹಳ್ಳಿಯಲ್ಲಿ ವಾಸವಿದ್ದ ಜಿಲ್ಲಾ ಕಾರಾಗೃಹ ಸಿಬ್ಬಂದಿಯೊಬ್ಬರಿಗೆ ಸೋಂಕು ದೃಢ ಪಟ್ಟಿತ್ತು.
ಈತನೊಂದಿಗೆ ಎಣ್ಣೆ ಪಾರ್ಟಿ ಮಾಡಿದ್ದ ಮೂವರಲ್ಲಿ ಮಂಗಳವಾರ ಸೋಂಕು ಪತ್ತೆಯಾಗಿತ್ತು. ಮತ್ತೆ ಇದೀಗ ಈತನ ಸಂಪರ್ಕದಲ್ಲಿದ್ದ ಮೂವರಿಗೆ ಸೋಂಕು ಹರಡಿದೆ.
ರಾಮನಗರದಲ್ಲಿ 2, ಚನ್ನಪಟ್ಟಣದಲ್ಲಿ 10, ಮಾಗಡಿ ಮತ್ತು ಕನಕಪುರದಲ್ಲಿ ತಲಾ ಒಂದು ಕೇಸ್ ಪತ್ತೆಯಾಗಿದ್ದು, ಮಾಗಡಿಯ ಒಂದು ಪ್ರಕರಣ ಗುಣಮುಖವಾಗಿದೆ.