ಆ್ಯಪ್ನಗರ

ಟಿಪ್ಪರ್ - ಬೈಕ್ ನಡುವೆ ಅಪಘಾತ: ಬ್ಯಾಂಕ್ ಉದ್ಯೋಗಿ ಸ್ಥಳದಲ್ಲೇ ಸಾವು

ಇಂದು ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಖಾಸಗಿ ಬ್ಯಾಂಕ್‌ ಉದ್ಯೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ರಾಮನಗರದ ಮಾಯಗಾನಹಳ್ಳಿ ಸಮೀಪ ನಡೆದಿದೆ. ಬೆಂಗಳೂರಿನಿಂದ ರಾಮನಗರಕ್ಕೆ ನಿತ್ಯ ಕೆಲಸಕ್ಕೆ ಹೋಗುತ್ತಿದ್ದ ಇಪ್ಪತ್ತನಾಲ್ಕು ವರ್ಷದ ಯುವಕನ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Vijaya Karnataka 30 Jun 2020, 12:25 pm
ರಾಮನಗರ: ಟಿಪ್ಪರ್ ಮತ್ತು ಬೈಕ್ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಹೆದ್ದಾರಿ ಬಳಿ ನಡೆದಿದೆ.
Vijaya Karnataka Web ROAD ACCIDENT


ಕೊರೊನಾ ಮುಕ್ತವಾಗಿದ್ದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹೆಚ್ಚಿದ ಆತಂಕ

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಅನಂತ್ ಕಾಮತ್(24) ಎಂಬುವವರಾಗಿದ್ದು, ಅವರು ರಾಮನಗರದ ಫೆಡರಲ್ ಬ್ಯಾಂಕ್‌ನಲ್ಲಿ ಕೆಲ ಮಾಡುತ್ತಿದ್ದರು. ನಿತ್ಯವೂ ಬೆಂಗಳೂರಿನಿಂದ ರಾಮನಗರಕ್ಕೆ ಕೆಲಸಕ್ಕೆಂದು ಬೈಕ್‌ನಲ್ಲಿ ಹೋಗುತ್ತಿದ್ದ ಅನಂತ್ ಕಾಮತ್ ಇಂದು ಕೂಡ ಕೆಲಸಕ್ಕೆ ಹೋಗುತ್ತಿದ್ದರು. ಈ ವೇಳೆ ಮಾಯಗಾನ ಹಳ್ಳಿ ಸಮೀಪ ತಲುಪಬೇಕಾದರೆ ಹಿಂದಿನಿಂದ ರಭಸವಾಗಿ ಬಂದ ಟಿಪ್ಪರ್ ಅನಂತ್ ಕಾಮತ್ ಬೈಕ್‌ಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಅವರು ಸ್ಥಳದಲ್ಲೇ ಅಸು ನೀಗಿದ್ದಾರೆ.

ಕೋವಿಡ್‌ ಚಿಕಿತ್ಸೆ: 4,500 ಹಾಸಿಗೆ ನೀಡಲು ಖಾಸಗಿ ವೈದ್ಯಕೀಯ ಕಾಲೇಜುಗಳ ಸಮ್ಮತಿ

ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಲಾರಿ ಚಾಲಕನ ವಿರುದ್ಧ ರಾಮನಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎತ್ತಿ ಮುದ್ದಾಡಿಸಬೇಕಾಗಿದ್ದ ಮಗುವಿನ ಶವವನ್ನು ಬಿಗಿದಪ್ಪಿ ಅತ್ತ ಹೆತ್ತವರ ನೋವಿದು..!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ