ಆ್ಯಪ್ನಗರ

ಭ್ರಷ್ಟರ ಬೇಟೆಗೆ ಸದಾ ಸಿದ್ದ: ಎಸಿಬಿ ಅಧಿಕಾರಿ

ಸರಕಾರದ ಕೆಲಸಗಳನ್ನು ಮಾಡಿಕೊಡಲು ವಿಳಂಬ ಮಾಡುವುದು ಹಾಗೂ ಲಂಚದಾಸೆಯಿಂದ ಜನರನ್ನು ವಿನಾಕಾರಣ ಕಚೇರಿಗೆ ಅಲೆದಾಡಿಸಿ ಪೀಡಿಸುವ ಅಧಿಕಾರಿಗಳ ವಿರುದ್ಧ ಭ್ರಷ್ಟಾಚರ ನಿಗ್ರಹ ದಳ ...

Vijaya Karnataka 21 Feb 2019, 5:00 am
Vijaya Karnataka Web absolutely ready for corruption acb officer
ಭ್ರಷ್ಟರ ಬೇಟೆಗೆ ಸದಾ ಸಿದ್ದ: ಎಸಿಬಿ ಅಧಿಕಾರಿ
ಹಾರೋಹಳ್ಳಿ (ಕನಕಪುರ ತಾ.): ಸರಕಾರದ ಕೆಲಸಗಳನ್ನು ಮಾಡಿಕೊಡಲು ವಿಳಂಬ ಮಾಡುವುದು ಹಾಗೂ ಲಂಚದಾಸೆಯಿಂದ ಜನರನ್ನು ವಿನಾಕಾರಣ ಕಚೇರಿಗೆ ಅಲೆದಾಡಿಸಿ ಪೀಡಿಸುವ ಅಧಿಕಾರಿಗಳ ವಿರುದ್ಧ ಭ್ರಷ್ಟಾಚರ ನಿಗ್ರಹ ದಳ (ಎಸಿಬಿ)ಕ್ಕೆ ನೇರ ದೂರು ನೀಡಿದಲ್ಲಿ ಅಂತಹವರ ಬೇಟೆಯಾಡಲು ಸದಾ ಸಿದ್ಧ ಎಂದು ಎಸಿಬಿ ಸರ್ಕಲ್‌ ಇನ್ಸ್‌ಪೆಕ್ಟರ್‌ ಪ್ರಕಾಶ್‌ ಹೇಳಿದರು.

ತಾಲ್ಲೂಕಿನ ಹಾರೋಹಳ್ಳಿ ಗ್ರಾ.ಪಂ. ಕಚೇರಿಯಲ್ಲಿ ಭ್ರಷ್ಟಾಚಾರ ನಿಗ್ರಹದಳದ ವತಿಯಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಮತ್ತು ಜಾಗೃತಿ ಸಭೆಯಲ್ಲಿ ಮಾತನಾಡಿದರು.

ಸಾರ್ವಜನಿಕರಿಗೆ ಪಾರದರ್ಶಕ ಆಡಳಿತ ನೀಡಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರಕಾರ ಭ್ರಷ್ಟಾಚಾರ ನಿಗ್ರಹದಳವನ್ನು ರಚನೆ ಮಾಡಿದೆ. ಹಿಂದೆ ಲೋಕಾಯುಕ್ತ ಮಾದರಿಯಲ್ಲಿಯೇ ಸಾರ್ವಜನಿಕರು ಸರಕಾರಿ, ಖಾಸಗಿ, ಅರೆ ಸರಕಾರಿ ಕಚೇರಿಗಳಲ್ಲಿ ತಮಗೆ ಆಗುತ್ತಿರುವ ತೊಂದರೆ ಮತ್ತು ಕಿರುಕುಳದ ಬಗ್ಗೆ ಊರು ನೀಡಬಹುದು. ದೂರುದಾರರ ವಿವರಗಳನ್ನು ಗೌಪ್ಯವಾಗಿಟ್ಟು ಅಂತಹ ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದರು.

ಜನರಿಂದ ಅಹವಾಲು ಸ್ವೀಕರಿಸಿದ ಅಧಿಕಾರಿಗಳು, ಎಸಿಬಿ ಬಗ್ಗೆ ಜನರಿಗೆ ಇದ್ದ ಅನುಮಾನಗಳನ್ನು ಪರಿಹರಿಸಿದರು. ಪಂಚಾಯತಿ ಪಿಡಿಒ ರಂಗೇಗೌಡ, ಎಸಿಬಿ ಮುಖ್ಯಪೇದೆ ನಂದೀಶ್‌ ಹಾಗು ಗ್ರಾ.ಪಂ. ಸದಸ್ಯರು, ಸಿಬ್ಬಂಧಿಗಳು, ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ