ಆ್ಯಪ್ನಗರ

ದಂಪತಿ ಆತ್ಮಹತ್ಯೆ: ಆರೋಪಿ ಆರೆಸ್ಟ್‌

ತಾಲೂಕಿನ ಸಾದರಹಳ್ಳಿ ಗ್ರಾಮದಲ್ಲಿ ದಂಪತಿಗಳ ಸಾವಿಗೆ ಕಾರಣನಾಗಿದ್ದ ಆರೋಪಿ ತ್ಯಾಗರಾಜನನ್ನು ಅಕ್ಕೂರು ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.

Vijaya Karnataka 21 Jun 2019, 5:00 am
ಚನ್ನಪಟ್ಟಣ:
Vijaya Karnataka Web accused of couple suicide arrest
ದಂಪತಿ ಆತ್ಮಹತ್ಯೆ: ಆರೋಪಿ ಆರೆಸ್ಟ್‌

ತಾಲೂಕಿನ ಸಾದರಹಳ್ಳಿ ಗ್ರಾಮದಲ್ಲಿ ದಂಪತಿಗಳ ಸಾವಿಗೆ ಕಾರಣನಾಗಿದ್ದ ಆರೋಪಿ ತ್ಯಾಗರಾಜನನ್ನು ಅಕ್ಕೂರು ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.

ತಾಲೂಕಿನ ಸಾದರಹಳ್ಳಿ (ಶ್ರೀನಿವಾಸಪುರ) ಗ್ರಾಮದ ಲೋಕೇಶ್‌ ಹಾಗೂ ಕೌಶಲ್ಯ ದಂಪತಿ, ಆರೋಪಿ ತ್ಯಾಗರಾಜನ ಕುಕೃತ್ಯದಿಂದ ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಶರಣಾಗಿದ್ದರು.

ಪ್ರಕರಣ ಸಂಬಂಧ ಗ್ರಾಮದಲ್ಲಿ ದೊಡ್ಡ ಗಲಾಟೆಯೇ ನಡೆದಿತ್ತು. ಗ್ರಾಮಸ್ಥರ ಕೋಪಕ್ಕೆ ಅಂಜಿ ತಲೆ ಮರೆಸಿಕೊಂಡಿದ್ದ ಆರೋಪಿ ತ್ಯಾಗರಾಜ, ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ. ಈತನನ್ನು ಮೈಸೂರಿನ ಕೊಲಂಬಿಯಾ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತ್ಯಾಗರಾಜನನ್ನು ಪೊಲೀಸರು ಗುರುವಾರ ಬಂಧಿಸಿ ಅಕ್ಕೂರು ಠಾಣೆಗೆ ಕರೆತಂದು ವಿಚಾರಣೆಗೆ ಒಳಪಡಿಸಿದ ಬಳಿಕ ಕೋರ್ಟ್‌ಗೆ ಹಾಜರುಪಡಿಸಿದ್ದರು. ಕೋರ್ಟ್‌ ಆರೋಪಿಗೆ ಜೂ.26ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಗುಳೆ ಹೋದ ಗ್ರಾಮಸ್ಥರು:
ಲೋಕೇಶ್‌, ಕೌಶಲ್ಯ ಆತ್ಮಹತ್ಯೆಯಿಂದ ರೊಚ್ಚಿಗೆದ್ದು ಆರೋಪಿ ತ್ಯಾಗರಾಜನ ಆಸ್ತಿಪಾಸ್ತಿಯನ್ನು ಗ್ರಾಮಸ್ಥರು ಧ್ವಂಸಗೊಳಿಸಿದ್ದರು. ಈ ಘಟನೆ ಸಂಬಂಧ ಸಾದರಹಳ್ಳಿ ಗ್ರಾಮದ 50 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧನಕ್ಕೆ ಅಂಜಿದ ಗ್ರಾಮಸ್ಥರೆಲ್ಲರೂ ಮನೆಗಳಿಗೆ ಬೀಗ ಹಾಕಿ ಗುಳೆ ಹೋಗಿದ್ದಾರೆ. ಇದರಿಂದ ಇಡೀ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ.

ಸಂಧಾನಕ್ಕೆ ಯತ್ನ:
ಗ್ರಾಮಸ್ಥರ ಬಂಧನ ತಪ್ಪಿಸುವ ಸಂಬಂಧ ಕೆಲವು ಮುಖಂಡರು ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.ಪ್ರಕರಣ ಸಂಬಂಧ ಶಾಂತಿ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ. ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ