ಆ್ಯಪ್ನಗರ

ED ಕಸ್ಟಡಿಗೆ ಡಿಕೆಶಿ: ಕನಕಪುರದಲ್ಲಿ ಮತ್ತೆ ಪ್ರತಿಭಟನೆ, ಆಕ್ರೋಶ

ಡಿ ಕೆ ಶಿವಕುಮಾರ್ ಅವರನ್ನು ಇಡಿ ವಶಕ್ಕೆ ನೀಡಿರುವುದನ್ನು ವಿರೋಧಿಸಿ ಅವರ ಅಭಿಮಾನಿಗಳು ರಾಮನಗರ ಜಿಲ್ಲೆಯಲ್ಲಿ ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ.

Vijaya Karnataka Web 4 Sep 2019, 8:08 pm
ರಾಮನಗರ: ಅಕ್ರಮ ಹಣಕಾಸು ವರ್ಗಾವಣೆ ಆರೋಪದಡಿಯಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಸೆ.13ರವರೆಗೆ ಜಾರಿ ನಿರ್ದೇಶನಾಲಯದಿಂದ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸುತ್ತಿದ್ದಂತೆ, ರಾಮನಗರ ಹಾಗೂ ಕನಕಪುರದಲ್ಲಿ ಮತ್ತೆ ಪ್ರತಿಭಟನೆ ಶುರುವಾಗಿದೆ.
Vijaya Karnataka Web ramanagar


ಸೆ.13ರವರೆಗೆ ಡಿಕೆಶಿ ಇಡಿ ಕಸ್ಟಡಿಗೆ

ಬುಧವಾರ ಸಂಜೆ ತಣ್ಣಗಾಗಿದ್ದ ಡಿಕೆಶಿ ಅಭಿಮಾನಿಗಳ ಪ್ರತಿಭಟನೆ, ಸಂಜೆ 7.30ರ ಸುಮಾರಿಗೆ ಮತ್ತೆ ಪ್ರಾರಂಭವಾಗಿದೆ. ಡಿ ಕೆ ಶಿವಕುಮಾರ್ ಅವರನ್ನು ಇಡಿ ವಶಕ್ಕೆ ನೀಡಿರುವುದನ್ನು ಖಂಡಿಸಿ ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಡಿಕೆಶಿ ಪರ ಹಾಗೂ ವಿರೋಧ ವಾದ ಆಲಿಸಿದ ನ್ಯಾಯಾಧೀಶರಾದ ಅಜಯ್‌ ಕುಮಾರ್‌ ಕುಹರ್ ಡಿಕೆ ಶಿವಕುಮಾರ್‌ ಅವರನ್ನು ಇಡಿ ಕಸ್ಟಡಿಗೆ ಒಪ್ಪಿಸಿದ್ದಾರೆ. ಅಲ್ಲದೇ ಕುಟುಂಬ ಸದಸ್ಯರು ಪ್ರತಿ ದಿನ ಭೇಟಿ ಮಾಡಲು ಅವಕಾಶ ನೀಡಲಾಗಿದೆ. 9 ದಿನಗಳವರೆಗೆ ಡಿಕೆಶಿ ಜಾಮೀನು ಅರ್ಜಿ ಸಲ್ಲಿಸುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ