ಆ್ಯಪ್ನಗರ

ಅಪರಿಚಿತ ಮಹಿಳೆಯ ತುಳಿದು ಸಾಯಿಸಿದ ಕಾಡಾನೆ

ಅಪರಿಚಿತ ಮಹಿಳೆಯೊಬ್ಬರನ್ನು ಕಾಡಾನೆಯೊಂದು ತುಳಿದು ಸಾಯಿಸಿದ ದುರ್ಘಟನೆ ನೇರಳಹಟ್ಟಿ ಕೆರೆ ಸಮೀಪದ ಕಾಡಂಚಿನಲ್ಲಿ ಸಂಭವಿಸಿದೆ...

Vijaya Karnataka 5 Jul 2019, 5:00 am
ಹಾರೋಹಳ್ಳಿ (ಕನಕಪುರ ತಾ.): ಅಪರಿಚಿತ ಮಹಿಳೆಯೊಬ್ಬರನ್ನು ಕಾಡಾನೆಯೊಂದು ತುಳಿದು ಸಾಯಿಸಿದ ದುರ್ಘಟನೆ ನೇರಳಹಟ್ಟಿ ಕೆರೆ ಸಮೀಪದ ಕಾಡಂಚಿನಲ್ಲಿ ಸಂಭವಿಸಿದೆ.
Vijaya Karnataka Web an unknown woman was killed
ಅಪರಿಚಿತ ಮಹಿಳೆಯ ತುಳಿದು ಸಾಯಿಸಿದ ಕಾಡಾನೆ


ಸುಮಾರು 40 ವರ್ಷದ ಮಹಿಳೆ ಹಸಿರು ಬಣ್ಣದ ವಸ್ತ್ರವನ್ನು ಧರಿಸಿದ್ದಾರೆ. ಮಾನಸಿಕ ಅಸ್ವಸ್ಥೆಯಾಗಿರಬಹುದು ಎಂದು ಶಂಕಿಸಲಾಗಿರುವ ಈ ಮಹಿಳೆ ಕಳೆದ ಎರಡು ಮೂರು ದಿನಗಳ ಹಿಂದೆ ಕಾಡಂಚಿನ ಬಳಿ ನಡೆದು ಹೋಗುತ್ತಿದ್ದಾಗ ಎದುರಿನಿಂದ ಬಂದ ಕಾಡಾನೆ ತುಳಿದು ಸಾಯಿಸಿದೆ. ಗ್ರಾಮಸ್ಥರು ನೀಡಿದ ಮಾಹಿತಿ ಆಧಾರದ ಮೇರೆಗೆ ಮಹಿಳೆಯ ಶವವನ್ನು ಬೆಂಗಳೂರು ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಯಾರೂ ವಾರಸುದಾರರು ಇಲ್ಲದ ಕಾರಣ ಪೊಲೀಸ್‌ ಇಲಾಖೆ ವತಿಯಿಂದಲೇ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಸಬ್‌ಇನ್ಸ್‌ಪೆಕ್ಟರ್‌ ಕೃಷ್ಣಕುಮಾರ್‌ ತಿಳಿಸಿದ್ದಾರೆ.

ಸ್ಥಳಕ್ಕೆ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು, ಎ.ಎಸ್‌.ಐ. ಗಣೇಶ್‌ ಮತ್ತವರ ಸಿಬ್ಬಂದಿ, ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ