ಆ್ಯಪ್ನಗರ

ಮುಖ್ಯ ಪೇದೆ ಮೇಲೆ ಹಲ್ಲೆ

ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದರ ಜತೆಗೆ ಮುಖ್ಯ ಪೇದೆ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ...

Vijaya Karnataka 10 Jul 2018, 3:42 pm
ಚನ್ನಪಟ್ಟಣ: ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದರ ಜತೆಗೆ ಮುಖ್ಯ ಪೇದೆ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web attack on the main constable
ಮುಖ್ಯ ಪೇದೆ ಮೇಲೆ ಹಲ್ಲೆ


ಮಧುಗಿರಿ ನಿವಾಸಿ ಮುಜಾಯಿದ್‌ ಪಾಷ್‌(26)ಬಂಧಿತ ಆರೋಪಿ. ಪಟ್ಟಣದ ಹೆದ್ದಾರಿಯಲ್ಲಿ ದ್ವಿಚಕ್ರವಾಹನದಲ್ಲಿ ಬರುವಾಗ ಈ ಘಟನೆ ನಡೆದಿದೆ. ಜೀಯೋ ಕಂಪನಿಯಲ್ಲಿ ಸರ್ವೆಯರ್‌ ಆಗಿದ್ದು, ಮಂಡ್ಯದಿಂದ ಬೆಂಗಳೂರಿಗೆ ಹೋಗುತ್ತಿದ್ದ ಈತ ದೊಡ್ಡಮಳೂರು ಬಳಿ ಒನ್‌ವೈಯಲ್ಲಿ ಬಂದಿದ್ದಾನೆ. ಸ್ಥಳದಲ್ಲೇ ಇದ್ದ ಸಂಚಾರಿ ಮುಖ್ಯ ಪೇದೆ ರಮೇಶ್‌ ತಡೆದು ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಪ್ರಶ್ನಿಸಿ ದಂಡ ಕಟ್ಟುವಂತೆ ಹೇಳಿದಾಗ ಮಾತಿನ ಚಕಮಕಿ ನಡೆದು ಪೇದೆ ಕೊರಳಿಗೆ ಕೈ ಹಾಕಿ ಹಲ್ಲೆ ನಡೆಸಿದ್ದಾನೆ.

ಸಂಚಾರಿ ಪೊಲೀಸ್‌ ಮೇಲೆ ಹಲ್ಲೆ ನಡೆಸಿದ ಘಟನೆ ನೋಡಿದ ಸ್ಥಳೀಯರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣದ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ