ಆ್ಯಪ್ನಗರ

ಆಟೊಗೆ ಕಾರು ಡಿಕ್ಕಿ: ಎಂಟು ಮಂದಿಗೆ ಗಾಯ

ಸರಕಾರಿ ಎಂಜಿನಿರಿಂಗ್‌ ಕಾಲೇಜು ಸಮೀಪದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಮೂರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.

Vijaya Karnataka 24 Jan 2019, 5:00 am
ರಾಮನಗರ: ಸರಕಾರಿ ಎಂಜಿನಿರಿಂಗ್‌ ಕಾಲೇಜು ಸಮೀಪದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಮೂರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.
Vijaya Karnataka Web auto collides with auto eight injured
ಆಟೊಗೆ ಕಾರು ಡಿಕ್ಕಿ: ಎಂಟು ಮಂದಿಗೆ ಗಾಯ


ಮೈಸೂರು ಕಡೆಗೆ ಹೋಗುತ್ತಿದ್ದ ಕೇರಳ ನೊಂದಣಿ ಸಂಖ್ಯೆಯಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ದಾಟಿ ಎದುರಿಂದ (ಚನ್ನಪಟ್ಟಣದಿಂದ ರಾಮನಗರಕೆÜ್ಕ) ಬರುತ್ತಿದ್ದ ಆಪೆ ಆಟೋಗೆ ಡಿಕ್ಕಿ ಹೊಡೆದಿದೆ. ಆಟೋ ಚಾಲಕ ಸಹಿತ ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಮೂರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿದ್ದ ದಂಪತಿಗಳಿಗೆ ಯಾವುದೇ ಗಾಯಗೊಳಗಾಗಿಲ್ಲ. ಈ ಸಂಬಂಧ ರಾಮನಗರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಿಂದ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಮೈಸೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುವ ವಾಹನ ಸವಾರರು ಸುಮಾರು 30 ನಿಮಿಷಗಳಿಗೂ ಹೆಚ್ಚಿನ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರು. ಏಕಮುಖ ಸಂಚಾರದ ಮೂಲಕ ಸುಗಮ ಸಂಚಾರಕ್ಕೆ ಪೊಲೀಸರು ಅನುಕೂಲ ಮಾಡಿಕೊಟ್ಟಿದ್ದರು.

ಅಪಾಘತಕ್ಕೆ ವಿಭಜಕವೇ ಕಾರಣ:
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ರಸ್ತೆ ವಿಭಜಕಗಳು ಇದ್ದೂ ಉಪಯೋಗಕ್ಕಿಲ್ಲದಂತಾಗಿವೆ. ಎದುರಿನಿಂದ ಬರುವ ವಾಹನಗಳಿಂದ ವಿರುದ್ಧ ದಿಕ್ಕಿನಲ್ಲಿ ಬರುವ ವಾಹನಗಳಿಗೆ ತೊಂದರೆಯಾಗದಿರಲಿ ಎಂಬ ಉದ್ಧೇಶದಿಂದಲೇ ರಸ್ತೆ ವಿಭಜಕ ಹಾಕಲಾಗುತ್ತದೆ. ಆದರೆ, ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ರಸ್ತೆ ವಿಭಜಕಗಳು ವಾಹನಗಳನ್ನು ತಡೆದು ನಿಲ್ಲಿಸುವ ಶಕ್ತಿಯಿಲ್ಲದಿರುವುದರಿಂದ ಅವು ಇದ್ದೂ ಇಲ್ಲದಂತಾಗಿದೆ. ನಿಯಂತ್ರಣ ಕಳೆದುಕೊಳ್ಳುವ ವಾಹನಗಳು ಸುಲಭವಾಗಿ ವಿಭಜಕ ದಾಟಿ ಎದುರಿನ ರಸ್ತೆಗೆ ಜಿಗಿಯುವುದರಿಂದ ಹಾನಿ ಪ್ರಮಾಣ ಹೆಚ್ಚುತ್ತಿದೆ. ಇನ್ನಾದರೂ ಹೆದ್ದಾರಿ ಪ್ರಾಧಿಕಾರ ಎಚ್ಚೆತ್ತುಕೊಳ್ಳಬೇಕು ಎಂಬುದು ಜನರು ಆಗ್ರಹ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ