ಆ್ಯಪ್ನಗರ

ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಣೆಗೆ ಚಾಲನೆ

ಕೇಂದ್ರ ಹಾಗೂ ರಾಜ್ಯ ಸರಕಾರಗಳ ಆಶ್ರಯದ ಆಯುಸ್ಮಾನ್‌ ಭಾರತ ಹಾಗೂ ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಣೆ ಕಾರ್ಯಕ್ರಮ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಾಲನೆಗೊಂಡಿದೆ.

Vijaya Karnataka 30 Mar 2019, 5:00 am
ಚನ್ನಪಟ್ಟಣ: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಆಶ್ರಯದ ಆಯುಸ್ಮಾನ್‌ ಭಾರತ ಹಾಗೂ ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಣೆ ಕಾರ್ಯಕ್ರಮ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಾಲನೆಗೊಂಡಿದೆ.
Vijaya Karnataka Web ayusman india and health karnataka card distribution
ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಣೆಗೆ ಚಾಲನೆ


ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿಸಂಹಿತೆ ಅಡ್ಡವಾದ್ದರಿಂದ ಆರೋಗ್ಯ ಕಾರ್ಡ್‌ಗಳನ್ನು ವಿತರಣೆ ಮಾಡದಂತೆ ಚುನಾವಣಾಧಿಕಾರಿಗಳು ಆದೇಶ ನೀಡಿದ್ದರಿಂದ ಕಾರ್ಡ್‌ ವಿತರಣೆಯನ್ನು ತಡೆ ಹಿಡಿಯಲಾಗಿತು. ಕೇಂದ್ರ ಚುನಾವಣಾ ಆಯೋಗದಿಂದಲೇ ಆರೋಗ್ಯ ಸೇವೆಯಲ್ಲಿ ಯಾವುದೇ ರೀತಿಯ ನೀತಿ ಸಂಹಿತೆಯ ತಡೆ ಇಲ್ಲ ಎಂದು ಖಾತ್ರಿಪಡಿಸಿದೆ. ಅಲ್ಲದೆ ತಾಲೂಕು ಮಟ್ಟದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾತ್ರ ನೀಡಲಾಗುತ್ತಿದ್ದ ಆರೋಗ್ಯ ಕಾರ್ಡ್‌ಗಳನ್ನು ಪಟ್ಟಣದ ವಿವಿಧ ಪ್ರಮುಖ ಸೈಬರ್‌ಗಳಲ್ಲಿಯೂ ಪಡೆಯಬಹುದಾಗಿದ್ದು, ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕಾಗಿದೆ ಎಂದು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ. ಅಶೋಕ್‌ ವೆಂಕೋಬರಾವ್‌ ತಿಳಿಸಿದರು.

ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಆರೋಗ್ಯ ಕಾರ್ಡ್‌ ಮಾಡಿಕೊಡಲಾಗುತ್ತಿದೆ. ಪ್ರತಿ ದಿನ 30 ಮಂದಿಗೆ ಮಾತ್ರ ಕಾರ್ಡ್‌ ವಿತರಣೆ ಮಾಡಲಾಗುತ್ತಿದ್ದು, ಅನಾವಶ್ಯಕವಾಗಿ ತಮ್ಮ ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ, ಪ್ರತಿಯೊಬ್ಬರಿಗೂ ಸಿಗುವ ಆರೋಗ್ಯ ಕಾರ್ಡ್‌ಗಳನ್ನು ಯಾವುದೇ ರೀತಿಯ ಗೊಂದಲಗಳನ್ನು ಸೃಷ್ಟಿಮಾಡಿಕೊಳ್ಳದೆ ಪಡೆಯಬಹುದಾಗಿದೆ ಎಂದರು.

ಹಳದಿ ಕಾರ್ಡ್‌ಗಳನ್ನು ಹೊಂದಿರುವವರು ಆರೋಗ್ಯ ಕಾರ್ಡ್‌ ರೀತಿಯೇ ಹಳದಿಕಾರ್ಡ್‌ ಆಗಿದ್ದು ತುರ್ತು ಸಂದರ್ಭದಲ್ಲಿ ಹಳದಿ ಕಾರ್ಡ್‌ಗಳನ್ನು ಸಂಬಂಧಿಸಿದ ವೈದ್ಯರ ಸಲಹೆ ಮೇರೆಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ