ಆ್ಯಪ್ನಗರ

ಬೀದಿನಾಯಿಗಳ ದಾಳಿ: ಕುರಿ ಸಾವು

ತಾಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ಪುಟ್ಟಸ್ವಾಮಿ ಎಂಬುವರ ಕುರಿಯನ್ನು ಬೀದಿ ನಾಯಿಗಳು ದಾಳಿ ನಡೆಸಿ ಕಚ್ಚಿ ಸಾಯಿಸಿವೆ.

Vijaya Karnataka 22 Nov 2018, 3:41 pm
ಚನ್ನಪಟ್ಟಣ: ತಾಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ಪುಟ್ಟಸ್ವಾಮಿ ಎಂಬುವರ ಕುರಿಯನ್ನು ಬೀದಿ ನಾಯಿಗಳು ದಾಳಿ ನಡೆಸಿ ಕಚ್ಚಿ ಸಾಯಿಸಿವೆ.
Vijaya Karnataka Web beadday attack the death of the sheep
ಬೀದಿನಾಯಿಗಳ ದಾಳಿ: ಕುರಿ ಸಾವು


ಮನೆಯ ಕೊಟ್ಟಿಗೆಯಲ್ಲಿ ದ್ದ ಕುರಿಯನ್ನು ಬೀದಿ ನಾಯಿಗಳು ಕಚ್ಚಿ ಸಾಯಿಸಿದ್ದು ಗ್ರಾಮಸ್ಥರು ಘಟನೆಯಿಂದ ಆತಂಕಕ್ಕೆ ಒಳಗಾಗಿದ್ದಾರೆ. ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಹಿಂಡಾಗಿ ಗ್ರಾಮದಲ್ಲಿ ಸಂಚರಿಸಿ ರೈತರ ಮನೆ ಮುಂದೆ ಇರುವ ಸಣ್ಣ ಕರು, ಮೇಕೆ, ಕುರಿ, ಕೋಳಿಗಳನ್ನು ಕಚ್ಚಿ ಸಾಯಿಸುತ್ತಿದ್ದು, ಇದರಿಂದ ರಸ್ತೆಗಳಲ್ಲಿ ವೃದ್ಧರು, ಮಹಿಳೆಯರು, ಮಕ್ಕಳು ಗ್ರಾಮದ ಬೀದಿಗಳಲ್ಲಿ ಭಯದ ವಾತಾವರಣದಲ್ಲಿ ತಿರುಗಾಡಬೇಕಾದ ಪರಿಸ್ಥಿತಿ ಉಂಟಾಗಿದೆ.

ಕೋಳಿ ಅಂಗಡಿಗಳ ತ್ಯಾಜ್ಯ ತಿಂದ ನಾಯಿಗಳು ಮನುಷ್ಯರ ಮೇಲೂ ಆಕ್ರಮಣಕಾರಿಯಾಗಿ ಎರಗುತ್ತಿದ್ದು ಕಡಿವಾಣ ಹಾಕಲು ಕ್ರಮಕೈಗೊಳ್ಳುವಂತೆ ಗ್ರಾ.ಪಂ. ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮದ ಮುಖಂಡ ಹೋಟಲ್‌ ನಾಗರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ