ಆ್ಯಪ್ನಗರ

ಬಸ್‌ ಡಿಕ್ಕಿ ಹೊಡೆದ ಬೈಕ್‌ ಸವಾರ ಸಾವು

ರಸ್ತೆಯಲ್ಲಿ ತಿರುವು ಪಡೆಯುತ್ತಿದ್ದ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬಿಡದಿಯ ಕೆಂಚನಕುಪ್ಪೆ ಗೇಟ್‌ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಂಗಳವಾರ ಸಂಭವಿಸಿದೆ.

Vijaya Karnataka 16 Jan 2019, 5:00 am
ಬಿಡದಿ: ರಸ್ತೆಯಲ್ಲಿ ತಿರುವು ಪಡೆಯುತ್ತಿದ್ದ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬಿಡದಿಯ ಕೆಂಚನಕುಪ್ಪೆ ಗೇಟ್‌ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಂಗಳವಾರ ಸಂಭವಿಸಿದೆ.
Vijaya Karnataka Web bike rider killed in bus accident
ಬಸ್‌ ಡಿಕ್ಕಿ ಹೊಡೆದ ಬೈಕ್‌ ಸವಾರ ಸಾವು


ಬಿಡದಿಯ ಕೆಂಚನಕುಪ್ಪೆ ಸಮೀಪದ ತಮ್ಮಣ್ಣನದೊಡ್ಡಿ ನಿವಾಸಿ ಟಿ.ಕೆ.ಶಿವರಾಜು(27) ಎಂಬುವರು ಅಪಘಾತದಲ್ಲಿ ಮೃತಪಟ್ಟಿರುವ ವ್ಯಕ್ತಿ. ಮೃತ ಶಿವರಾಜು ಅವರು ಕೆಂಚನಕುಪ್ಪೆ ಗ್ರಾಮದ ಕಡೆಯಿಂದ ರಾಮನಗರದ ಕಡೆಗೆ ಹೋಗಲು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಯು ಟರ್ನ್‌ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಮೈಸೂರು ಕಡೆಯಿಂದ ಅತೀ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್‌ ಬೈಕ್‌ಗೆ ಅಪ್ಪಳಿಸಿತು.

ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರ ಸುಮಾರು 20 ಅಡಿಯಷ್ಟು ದೂರ ಹಾರಿ ಕೆಳಕ್ಕೆ ಬಿದ್ದು ತಲೆಗೆ ತೀವ್ರವಾಗಿ ಪೆಟ್ಟಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತಕ್ಕೆ ಬಸ್‌ ಚಾಲಕನ ಅಜಾಗರೂಕತೆ ಚಾಲನೆ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ಈ ಸಂಬಂಧ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ