ಆ್ಯಪ್ನಗರ

ಕಾರು ಡಿಕ್ಕಿ: ಸ್ಥಳದಲ್ಲೇ ಪಾದಚಾರಿ ಸಾವು

ತಾಲೂಕಿನ ಕೆಂಗಲ್‌ನ ಬೆಂಗಳೂರು ಮೈಸೂರು ಹೆದ್ದಾರಿಯ ಬಳಿ ರಸ್ತೆ ದಾಟಲು ನಿಂತ್ತಿದ್ದ ವ್ಯಕ್ತಿಗೆ ಅತಿವೇಗವಾಗಿ ಬಂದ ಇನೋವಾ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ...

Vijaya Karnataka 5 Mar 2019, 5:00 am
ಚನ್ನಪಟ್ಟಣ: ತಾಲೂಕಿನ ಕೆಂಗಲ್‌ನ ಬೆಂಗಳೂರು ಮೈಸೂರು ಹೆದ್ದಾರಿಯ ಬಳಿ ರಸ್ತೆ ದಾಟಲು ನಿಂತ್ತಿದ್ದ ವ್ಯಕ್ತಿಗೆ ಅತಿವೇಗವಾಗಿ ಬಂದ ಇನೋವಾ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
Vijaya Karnataka Web car collision pedestrian death on the spot
ಕಾರು ಡಿಕ್ಕಿ: ಸ್ಥಳದಲ್ಲೇ ಪಾದಚಾರಿ ಸಾವು


ತಾಲೂಕಿನ ಹನುಮಂತ ನಗರದ (ಕೆಂಗಲ್‌) ನಿವಾಸಿ ಹೊನ್ನಗಾಲಯ್ಯ ಎಂಬುವರ ಮಗ ಬೊಮ್ಮಯ್ಯ (34) ಮೃತ ವ್ಯಕ್ತಿ. ಈತ ಹೋಟೆಲ್‌ನಲ್ಲಿ ಟೀ ಕುಡಿಯಲು ಹೋಗುವ ಸಂದರ್ಭದಲ್ಲಿ ರಸ್ತೆ ದಾಟಲು ನಿಂತಿದ್ದಾನೆ. ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಹೊರಟ್ಟಿದ್ದ ಇನೋವಾ ಕಾರು ಚಾಲಕನ ಅಜಾಗರೂಕತೆಯಿಂದ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ತಲೆ ಹಾಗೂ ಎದೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಅಪಘಾತ ಮಾಡಿದ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದು, ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ. ಈ ಪ್ರಕರಣದ ಬಗ್ಗೆ ಸಂಚಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ