ಆ್ಯಪ್ನಗರ

ಪ್ರವಾಸೋದ್ಯಮಕ್ಕೆ ಬಜೆಟ್‌ನಲ್ಲಿ ₹5 ಸಾವಿರ ಕೋಟಿ ಕೊಡೋದಾಗಿ ಸಿಎಂ ಹೇಳಿದ್ದಾರೆ: ಸಿಪಿ ಯೋಗೇಶ್ವರ್

ಕೇಂದ್ರ ಬಜೆಟ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು ರಾಜ್ಯದ ಸಮಗ್ರ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ, ಪ್ರಮುಖವಾಗಿ ರಸ್ತೆಗಳು, ಮೆಟ್ರೋ 2ನೇ ಹಂತ, ಮೂಲಸೌಕರ್ಯ ಕಲ್ಪಿಸಲು ಭರಪೂರ ಅನುದಾನ ಸಿಕ್ಕಿದೆ. ಕೊರೊನಾ ದೇಶವನ್ನು ಆರ್ಥಿಕವಾಗಿ ಜರ್ಜರಿತವಾಗಿಸಿದ್ದರೂ ಕೇಂದ್ರದ ಕಟ್ಟುನಿಟ್ಟಿನ ಆಡಳಿತ ದೇಶವನ್ನು ದಿವಾಳಿಯಾಗುವತ್ತ ದೂಡದೆ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಸಚಿವ ಸಿ.ಪಿ.ಯೋಗೇಶ್ವರ್‌ ಹೇಳಿದರು.

Vijaya Karnataka Web 15 Feb 2021, 9:10 am
ಚನ್ನಪಟ್ಟಣ: ಪ್ರವಾಸೋದ್ಯಮ ಇಲಾಖೆಗೆ ಈ ಸಾಲಿನ ಬಜೆಟ್‌ನಲ್ಲಿ 5ಸಾವಿರ ಕೋಟಿ ರೂ. ಮೀಸಲಿಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್‌ ಹೇಳಿದರು.
Vijaya Karnataka Web CP yogeshwar


ಪಟ್ಟಣದ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಕೇಂದ್ರ ಪ್ರವಾಸೋದ್ಯಮ ಸಚಿವರನ್ನೂ ಭೇಟಿ ಮಾಡಿ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದ್ದು, ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಅಲ್ಲದೇ ರಾಮನಗರ ಜಿಲ್ಲೆಯಲ್ಲಿ ಹಲವು ಪ್ರವಾಸಿ ತಾಣಗಳಿದ್ದು, ಅವುಗಳೆಲ್ಲವನ್ನೂ ಅಭಿವೃದ್ಧಿಪಡಿಸಿ ರಾಜ್ಯದಲ್ಲೇ ಜಿಲ್ಲೆಯನ್ನು ಪ್ರಮುಖ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಈ ಸಂಬಂಧ ಮುಂದಿನ ವಾರ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುತ್ತದೆ ಎಂದರು.
‘ಮೀಸಲಾತಿ’ ವಿಚಾರವಾಗಿ ಬಿಜೆಪಿಗೆ ಪ್ರಶ್ನೆಗಳ ಬಾಣಬಿಟ್ಟ ಸಿದ್ದರಾಮಯ್ಯ..! ಉತ್ತರಿಸುವುದೇ ಕಮಲ ಪಾಳಯ?
ಕೇಂದ್ರ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ
ಕೇಂದ್ರ ಬಜೆಟ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು ರಾಜ್ಯದ ಸಮಗ್ರ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ, ಪ್ರಮುಖವಾಗಿ ರಸ್ತೆಗಳು, ಮೆಟ್ರೋ 2ನೇ ಹಂತ, ಮೂಲಸೌಕರ್ಯ ಕಲ್ಪಿಸಲು ಭರಪೂರ ಅನುದಾನ ಸಿಕ್ಕಿದೆ. ಕೊರೊನಾ ದೇಶವನ್ನು ಆರ್ಥಿಕವಾಗಿ ಜರ್ಜರಿತವಾಗಿಸಿದ್ದರೂ ಕೇಂದ್ರದ ಕಟ್ಟುನಿಟ್ಟಿನ ಆಡಳಿತ ದೇಶವನ್ನು ದಿವಾಳಿಯಾಗುವತ್ತ ದೂಡದೆ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಹೇಳಿದರು.
ಹೆಣ್ಮಕ್ಕಳ ಪಾಲಿಗೆ ಮುಳುವಾದ ಲಾಕ್‌ಡೌನ್‌..! ಅಪ್ರಾಪ್ತೆಯರ ಮೇಲೆ ಹೆಚ್ಚಾಯ್ತು ಲೈಂಗಿಕ ದೌರ್ಜನ್ಯ..!
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಚನ್ನಪಟ್ಟಣ ನನ್ನ ಕಾರ್ಯಕ್ಷೇತ್ರ, ಅದರಲ್ಲಿ ಯಾವುದೇ ಸಂಶಯ ಬೇಡ ಎಂದು ಸ್ಪಷ್ಟಪಡಿಸಿದರು. ಮುಂದಿನ ಚುನಾವಣೆಗೆ ಹುಣಸೂರಿನಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನುವ ಮಾತು ಸತ್ಯಕ್ಕೆ ದೂರ, ಅಲ್ಲಿಗೆ ನಾನು ಏತಕ್ಕೆ ಹೋಗಲಿ, ಈ ಕ್ಷೇತ್ರದಲ್ಲೇ ಇರುತ್ತೇನೆ ಎಂದು ಹೇಳಿದರು.
ಬಿಜೆಪಿ ಮುಖಂಡನಿಗೆ ಮಸಿ ಬಳಿದವರಿಗೆ ₹1 ಲಕ್ಷ ಘೋಷಿಸಿದ್ದ ಹಣವನ್ನು ಬಡಮಕ್ಕಳಿಗೆ ನೀಡಿದ ಪ್ರತಿಭಾ ಕುಳಾಯಿ
ವಿದ್ಯುತ್‌ ವಾಹನಗಳಿಗೆ ಆದ್ಯತೆ:ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಪೆಟ್ರೋಲ್‌ ಡೀಸೆಲ್‌ ಬೆಲೆ ಅಂತರಾಷ್ಟ್ರೀಯ ಮಾರುಕಟ್ಟೆಯ ಬದಲಾವಣೆಯ ಮೇಲೆ ನಿಂತಿದೆ, ದೇಶ ವಿದ್ಯುತ್‌ ಸ್ವಾವಲಂಭನೆ ಸಾಧಿಸಿದೆ. ವಿದ್ಯುತ್‌ ಚಾಲಿತ ವಾಹನಗಳ ಹೆಚ್ಚಿನ ಬಳಕೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತಿದೆ. ಜನತೆ ವಿದ್ಯುತ್‌ ಚಾಲಿತ ವಾಹನಗಳ ಬಳಕೆ ಮಾಡಿದರೆ ಪೆಟ್ರೋಲ್‌ ಬೆಲೆ ತಾನೇ ಇಳಿಕೆಯಾಗುತ್ತದೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ