ಆ್ಯಪ್ನಗರ

ಇನ್ನೂ ಜೈಲಿನಲ್ಲಿರುವ ಡಿಕೆ ಶಿವಕುಮಾರ್: ಮನನೊಂದ ಹುಚ್ಚು ಅಭಿಮಾನಿ ಆತ್ಮಹತ್ಯೆ

ಇಡಿ ಅಧಿಕಾರಿಗಳ ವಶದಲ್ಲಿರುವ ಡಿಕೆ ಶಿವಕುಮಾರ್ ಇನ್ನೂ ಜೈಲಿನಲ್ಲಿದ್ದಾರೆ. ಇದರಿಂದ ಮನನೊಂದ ಅವರ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕನಕಪುರ ಬಂಡೆ ಖ್ಯಾತಿಯ ಡಿಕೆಶಿ ಕ್ಷೇತ್ರದಲ್ಲೇ ಈ ಘಟನೆ ನಡೆದಿದೆ.

Vijaya Karnataka Web 10 Oct 2019, 6:27 pm
ರಾಮನಗರ: ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಹುಚ್ಚು ಅಭಿಮಾನಿಯೊಬ್ಬ ಮದ್ಯಕ್ಕೆ ವಿಷ ಬೆರೆಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Vijaya Karnataka Web dk shivakumar fan suicide

ಕನಕಪುರ ತಾಲೂಕಿನ ದೊಡ್ಡಕೊಪ್ಪ ಗ್ರಾಮದ ನಿವಾಸಿ ಮಹದೇವ (43) ಎಂಬುವವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಡಿಕೆಶಿ ಇಡಿ ವಶಕ್ಕೆ ಹೋದ ದಿನದಿಂದಲೂ ನಾನು ಮಾಜಿ ಸಚಿವ ಡಿಕೆ ಶಿವಕುಮಾರ್‌ ಅವರನ್ನು ಬಿಡುಗಡೆ‌ ಮಾಡಿಸುತ್ತೇನೆ ಎಂದು ಕೂಗಾಡುತ್ತಲೇ ಇದ್ದ. ಆದರೆ, ಬುಧವಾರ ರಾತ್ರಿ ಕಂಠಪೂರ್ತಿ ಕುಡಿದು, ಜತೆಗೆ ವಿಷ ಸೇವಿಸಿದ್ದಾನೆ ಎನ್ನಲಾಗಿದೆ.

ಕುಡಿದ ಮತ್ತಿನಲ್ಲಿಯೂ ಡಿಕೆಶಿ ಬಿಡುಗಡೆಯಾಗಿಯೇ ಆಗುತ್ತಾರೆ ಎಂದು ಮೃತ ಮಹದೇವ ಹೇಳುತ್ತಿದ್ದ. ಬುಧವಾರ ರಾತ್ರಿ ಕನಕ ಕ್ಲಿನಿಕ್ ಗೆ ಹೋಗುವಷ್ಟರಲ್ಲಿ ಡಿಕೆಶಿ ಅಭಿಮಾನಿ ಮೃತ ಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದರು ಎಂದು ತಿಳಿದುಬಂದಿದೆ.

ಡಿಕೆ ಶಿವಕುಮಾರ್ ಬಿಡುಗಡೆಯಾಗದ ಹಿನ್ನಲೆಯಲ್ಲಿಯೇ ಮನನೊಂದು ಮಹದೇವ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ಆಪ್ತರು 'ವಿಜಯ ಕರ್ನಾಟಕ'ಕ್ಕೆ ಖಚಿತ ಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ