DK Suresh: ಕಾಂಗ್ರೆಸ್ಗೆ ಅಧಿಕಾರ ಮುಖ್ಯವಲ್ಲ; ದಲಿತ ಸಿಎಂ ಮಾಡಲು ನಮ್ಮಿಂದ ಮಾತ್ರ ಸಾಧ್ಯ: ಡಿಕೆ ಸುರೇಶ್
DK Suresh On Dalit CM - ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಇನ್ನೇನು ಕೆಲವೇ ತಿಂಗಳಿದ್ದು, ಈಗಾಗಲೇ ರಾಜಕೀಯ ರಂಗೇರಿದೆ. ಈ ಹಿನ್ನೆಲೆ ರಾಮನಗರದಲ್ಲಿ ಮಾತನಾಡಿದ ಸಂಸದ ಡಿಕೆ ಸುರೇಶ್ ಅವರು, ಕಾಂಗ್ರೆಸ್ಗೆ ಅಧಿಕಾರ ಮುಖ್ಯವಲ್ಲ, ಮುಂದೊಂದು ದಿನ ರಾಜ್ಯದಲ್ಲಿ ದಲಿತರೊಬ್ಬರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಕಲ್ಪಿಸಲು ಕಾಂಗ್ರೆಸ್ನಿಂದ ಮಾತ್ರ ಸಾಧ್ಯ ಎಂದರು.
ಹೈಲೈಟ್ಸ್:
- ಕಾಂಗ್ರೆಸ್ಗೆ ಅಧಿಕಾರ ಮುಖ್ಯವಲ್ಲ ಎಂದ ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್
- ರಾಜ್ಯದಲ್ಲಿ ದಲಿತರನ್ನು ಸಿಎಂ ಆಗಿಸಲು ಕಾಂಗ್ರೆಸ್ನಿಂದ ಮಾತ್ರ ಸಾಧ್ಯ ಎಂದ ಸಂಸದ
- ಆಂತರಿಕ ಭಿನ್ನಾಭಿಪ್ರಾಯದಿಂದ ಕಾಂಗ್ರೆಸ್ ರಾಂನಗರದಲ್ಲಿ ಮೂರು ಕ್ಷೇತ್ರ ಕಳೆದುಕೊಂಡಿದ್ದೇವೆ ಎಂದ ಡಿಕೆ ಸುರೇಶ್
ರಾಮನಗರ: ಮುಂದೊಂದು ದಿನ ರಾಜ್ಯದಲ್ಲಿ ದಲಿತರೊಬ್ಬರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಕಲ್ಪಿಸಲು ಕಾಂಗ್ರೆಸ್ನಿಂದ ಮಾತ್ರ ಸಾಧ್ಯ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ರಾಮನಗರ ಜಿಲ್ಲಾ ಕಾಂಗ್ರೆಸ್ನ ಪರಿಶಿಷ್ಟ ಜಾತಿ ವಿಭಾಗ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಮತ್ತು ಪಂಜಾಬ್ನಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್. ಆದರೆ, ಆ ರಾಜ್ಯಗಳಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿಲ್ಲ. ಕಾಂಗ್ರೆಸ್ಗೆ ಅಧಿಕಾರ ಮುಖ್ಯವಲ್ಲ, ಶೋಷಿತ ವರ್ಗಗಳಿಗೆ ರಾಜಕೀಯ ಅವಕಾಶ ಕಲ್ಪಿಸಿಕೊಡುವುದೇ ಮುಖ್ಯ ಎಂದರು.
ಕಾಂಗ್ರೆಸ್ ತೆಗೆದುಕೊಂಡ ನಿರ್ಣಯ, ನಿಲುವುಗಳು ಶೋಷಿತರು ಮತ್ತು ಬಡವರ ಪರವಾಗಿವೆ. ಆದರೆ, ಬಂಡವಾಳ ಶಾಹಿಗಳು ಇಂದು ಕಾಂಗ್ರೆಸ್ ಅನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದೆ ಎಂದು ಹೇಳಿದರು.
ಆಂತರಿಕ ಭಿನ್ನಾಭಿಪ್ರಾಯ ಕಾರಣ!
ಜಿಲ್ಲೆಯಲ್ಲಿ ಕಾಂಗ್ರೆಸ್ ಶಕ್ತಿಯುತವಾಗಿದೆ. ಆದರೂ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕನಕಪುರದಲ್ಲಿ ಮಾತ್ರ ಕಾಂಗ್ರೆಸ್ ಶಾಸಕರಿದ್ದಾರೆ. ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ, ಸಂಕುಚಿತ ಮನೋಭಾವ ಉಳಿದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಸೋಲಿಗೆ ಕಾರಣವಾಗಿದೆ ಎಂದರು.
ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ದಲಿತ ಸಮುದಾಯಗಳ ಮತದಾರರಿದ್ದಾರೆ. ಪರಿಶಿಷ್ಟ ಜಾತಿ ವಿಭಾಗಕ್ಕೆ ನೇಮಕವಾಗಿರುವ ಪದಾಧಿಕಾರಿಗಳು ಬಿಜೆಪಿಯ ದುರಾಡಳಿತದ ಬಗ್ಗೆ ಮತದಾರರ ಗಮನ ಸೆಳೆಯಬೇಕು. ಪರಿಶಿಷ್ಟ ಜಾತಿ, ಪಂಗಡಕ್ಕೆ ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ಸದಾಶಿವ ಆಯೋಗವನ್ನು ರಚಿಸಿದ್ದು ಕಾಂಗ್ರೆಸ್ ಎಂಬ ವಿಚಾರವನ್ನು ಸಮುದಾಯದ ಮತದಾರರಲ್ಲಿ ಜಾಗೃತಿ ಮೂಡಿಸಿ, ಪಕ್ಷವನ್ನು ಸಂಘಟಿಸಿ ಎಂದು ಸೂಚಿಸಿದರು.
ಬೃಹತ್ ಸಮಾವೇಶ!
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ.ಜಾತಿ ವಿಭಾಗ ಅಧ್ಯಕ್ಷ ಧರ್ಮಸೇನಾ ಮತನಾಡಿ, ಪಕ್ಷ ಸಂಘಟನೆ ಉದ್ದೇಶದಿಂದ ಜನವರಿ 8ರಂದು ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸಂಘಟನೆ ದೃಷ್ಟಿಯಿಂದ ಎಸ್ಸಿ, ಎಸ್ಟಿ ವಿಭಾಗದ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಪ್ರತಿಯೊಬ್ಬ ಪದಾಧಿಕಾರಿಯೂ ತಮ್ಮ ಜವಾಬ್ದಾರಿ ಅರಿತು ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಎಂದು ಕಿವಿಮಾತು ಹೇಳಿದರು.
ಕಾಂಗ್ರೆಸ್ ದೀನ ದಲಿತರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ರೂಪಿಸಿತು. ಉಳುವವನೇ ಭೂಮಿಯ ಒಡೆಯ, ಜೀತ ಮುಕ್ತ ಪದ್ಧತಿ, ಮದ್ಯಪಾನ ನಿಷೇಧದಂತಹ ಮಹತ್ವದ ಕಾರ್ಯಕ್ರಮಗಳನ್ನು ನೀಡಿ ಸಮಾನತೆ ತರುವ ಕೆಲಸ ಮಾಡಿತು. ಎಸ್ಎಂ ಕೃಷ್ಣ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಸದಾಶಿವ ಆಯೋಗ ರಚನೆಗೆ ಅಂಕಿತ ಹಾಕಲಾಯಿತು. ಇಂತಹ ಒಂದು ಕಾರ್ಯಕ್ರಮವನ್ನು ನೀಡಲು ಬಿಜೆಪಿಗೆ ಸಾಧ್ಯವಾಗಲಿಲ್ಲ ಎಂದು ಟೀಕಿಸಿದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ನೂತನ ಅಧ್ಯಕ್ಷ ನರಸಿಂಹಯ್ಯ, ಪರಿಶಿಷ್ಟ ಜಾತಿ ವಿಭಾಗದ ನಿರ್ಗಮಿತ ಅಧ್ಯಕ್ಷ ರಾಂಪುರ ನಾಗೇಶ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಪದಾಧಿಕಾರಿಗಳು ಮತ್ತು ಬ್ಲಾಕ್ ಅಧ್ಯಕ್ಷರಿಗೆ ಪದವಿ ಪ್ರಮಾಣ ಪತ್ರ ವಿತರಿಸಲಾಯಿತು.
ವಿಧಾನ ಪರಿಷತ್ ಸದಸ್ಯರಾದ ಸಿಎಂ ಲಿಂಗಪ್ಪ, ಎಸ್ ರವಿ, ಮಾಜಿ ಶಾಸಕರಾದ ಎಚ್ಸಿ ಬಾಲಕೃಷ್ಣ, ಕೆ ರಾಜು, ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ, ಜಿಪಂ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೀಪಾ ಮುನಿರಾಜು, ಮುಖಂಡರಾದ ಪ್ರಸನ್ನ ಪಿ ಗೌಡ, ಕೆ ಶೇಷಾದ್ರಿ, ಗಾಣಕಲ್ ನಟರಾಜ್, ಎಲ್ಎನ್ ಸ್ವಾಮಿ, ಬಿಡದಿ ಪುರಸಭೆ ಸದಸ್ಯ ರಾಮಚಂದ್ರಯ್ಯ ಮತ್ತಿತರರು ಉಪಸ್ಥಿತರಿದ್ದರು.
ಕಾಂಗ್ರೆಸ್ ತೆಗೆದುಕೊಂಡ ನಿರ್ಣಯ, ನಿಲುವುಗಳು ಶೋಷಿತರು ಮತ್ತು ಬಡವರ ಪರವಾಗಿವೆ. ಆದರೆ, ಬಂಡವಾಳ ಶಾಹಿಗಳು ಇಂದು ಕಾಂಗ್ರೆಸ್ ಅನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದೆ ಎಂದು ಹೇಳಿದರು.
ಆಂತರಿಕ ಭಿನ್ನಾಭಿಪ್ರಾಯ ಕಾರಣ!
ಜಿಲ್ಲೆಯಲ್ಲಿ ಕಾಂಗ್ರೆಸ್ ಶಕ್ತಿಯುತವಾಗಿದೆ. ಆದರೂ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕನಕಪುರದಲ್ಲಿ ಮಾತ್ರ ಕಾಂಗ್ರೆಸ್ ಶಾಸಕರಿದ್ದಾರೆ. ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ, ಸಂಕುಚಿತ ಮನೋಭಾವ ಉಳಿದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಸೋಲಿಗೆ ಕಾರಣವಾಗಿದೆ ಎಂದರು.
ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ದಲಿತ ಸಮುದಾಯಗಳ ಮತದಾರರಿದ್ದಾರೆ. ಪರಿಶಿಷ್ಟ ಜಾತಿ ವಿಭಾಗಕ್ಕೆ ನೇಮಕವಾಗಿರುವ ಪದಾಧಿಕಾರಿಗಳು ಬಿಜೆಪಿಯ ದುರಾಡಳಿತದ ಬಗ್ಗೆ ಮತದಾರರ ಗಮನ ಸೆಳೆಯಬೇಕು. ಪರಿಶಿಷ್ಟ ಜಾತಿ, ಪಂಗಡಕ್ಕೆ ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ಸದಾಶಿವ ಆಯೋಗವನ್ನು ರಚಿಸಿದ್ದು ಕಾಂಗ್ರೆಸ್ ಎಂಬ ವಿಚಾರವನ್ನು ಸಮುದಾಯದ ಮತದಾರರಲ್ಲಿ ಜಾಗೃತಿ ಮೂಡಿಸಿ, ಪಕ್ಷವನ್ನು ಸಂಘಟಿಸಿ ಎಂದು ಸೂಚಿಸಿದರು.
ಇಡಿ, ಐಟಿ, ಸಿಬಿಐ ಪ್ರಕರಣಗಳಿಗೆ ಡಿಕೆ ಶಿವಕುಮಾರ್ ಜಗ್ಗುವುದಿಲ್ಲ. ಮಾಯಾವತಿ ಅವರನ್ನ ಇಡಿ, ಐಟಿ ಬಿಡಲಿಲ್ಲ. ಪ್ರಬಲರನ್ನು ಹತ್ತಿಕ್ಕುವ ಕೆಲಸ ಬಿಜೆಪಿ ಮಾಡುತ್ತದೆ. 2023ರ ಚುನಾವಣೆಗೆ ಬಹಳ ಸಮಯವಿಲ್ಲ. ಮಾಧ್ಯಮಗಳ ಲೆಕ್ಕಾಚಾರಗಳ ಪ್ರಕಾರ ಫೆಬ್ರವರಿಯಲ್ಲಿ ರಾಜ್ಯದಲ್ಲೂ ಚುನಾವಣೆಗಳು ಘೋಷಣೆಯಾಗಬಹುದು.
ಬೃಹತ್ ಸಮಾವೇಶ!
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ.ಜಾತಿ ವಿಭಾಗ ಅಧ್ಯಕ್ಷ ಧರ್ಮಸೇನಾ ಮತನಾಡಿ, ಪಕ್ಷ ಸಂಘಟನೆ ಉದ್ದೇಶದಿಂದ ಜನವರಿ 8ರಂದು ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸಂಘಟನೆ ದೃಷ್ಟಿಯಿಂದ ಎಸ್ಸಿ, ಎಸ್ಟಿ ವಿಭಾಗದ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಪ್ರತಿಯೊಬ್ಬ ಪದಾಧಿಕಾರಿಯೂ ತಮ್ಮ ಜವಾಬ್ದಾರಿ ಅರಿತು ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಎಂದು ಕಿವಿಮಾತು ಹೇಳಿದರು.
ಕಾಂಗ್ರೆಸ್ ದೀನ ದಲಿತರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ರೂಪಿಸಿತು. ಉಳುವವನೇ ಭೂಮಿಯ ಒಡೆಯ, ಜೀತ ಮುಕ್ತ ಪದ್ಧತಿ, ಮದ್ಯಪಾನ ನಿಷೇಧದಂತಹ ಮಹತ್ವದ ಕಾರ್ಯಕ್ರಮಗಳನ್ನು ನೀಡಿ ಸಮಾನತೆ ತರುವ ಕೆಲಸ ಮಾಡಿತು. ಎಸ್ಎಂ ಕೃಷ್ಣ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಸದಾಶಿವ ಆಯೋಗ ರಚನೆಗೆ ಅಂಕಿತ ಹಾಕಲಾಯಿತು. ಇಂತಹ ಒಂದು ಕಾರ್ಯಕ್ರಮವನ್ನು ನೀಡಲು ಬಿಜೆಪಿಗೆ ಸಾಧ್ಯವಾಗಲಿಲ್ಲ ಎಂದು ಟೀಕಿಸಿದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ನೂತನ ಅಧ್ಯಕ್ಷ ನರಸಿಂಹಯ್ಯ, ಪರಿಶಿಷ್ಟ ಜಾತಿ ವಿಭಾಗದ ನಿರ್ಗಮಿತ ಅಧ್ಯಕ್ಷ ರಾಂಪುರ ನಾಗೇಶ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಪದಾಧಿಕಾರಿಗಳು ಮತ್ತು ಬ್ಲಾಕ್ ಅಧ್ಯಕ್ಷರಿಗೆ ಪದವಿ ಪ್ರಮಾಣ ಪತ್ರ ವಿತರಿಸಲಾಯಿತು.
ವಿಧಾನ ಪರಿಷತ್ ಸದಸ್ಯರಾದ ಸಿಎಂ ಲಿಂಗಪ್ಪ, ಎಸ್ ರವಿ, ಮಾಜಿ ಶಾಸಕರಾದ ಎಚ್ಸಿ ಬಾಲಕೃಷ್ಣ, ಕೆ ರಾಜು, ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ, ಜಿಪಂ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೀಪಾ ಮುನಿರಾಜು, ಮುಖಂಡರಾದ ಪ್ರಸನ್ನ ಪಿ ಗೌಡ, ಕೆ ಶೇಷಾದ್ರಿ, ಗಾಣಕಲ್ ನಟರಾಜ್, ಎಲ್ಎನ್ ಸ್ವಾಮಿ, ಬಿಡದಿ ಪುರಸಭೆ ಸದಸ್ಯ ರಾಮಚಂದ್ರಯ್ಯ ಮತ್ತಿತರರು ಉಪಸ್ಥಿತರಿದ್ದರು.