ಆ್ಯಪ್ನಗರ

ಅರ್ಕಾವತಿ ಕಲುಷಿತ ತಡೆಗೆ ಡಿಸಿ ಅರ್ಚನಾ ಸೂಚನೆ

ಅರ್ಕಾವತಿ ನದಿಗೆ ಕಲುಷಿತ ನೀರು ತಡೆಯಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾ ಅಧಿಕಾರಿಗಳಿಗೆ ಸೂಚಿಸಿದರು.

Vijaya Karnataka 19 Sep 2019, 3:38 pm
ರಾಮನಗರ: ಅರ್ಕಾವತಿ ನದಿಗೆ ಕಲುಷಿತ ನೀರು ತಡೆಯಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾ ಅಧಿಕಾರಿಗಳಿಗೆ ಸೂಚಿಸಿದರು.
Vijaya Karnataka Web dc archaeological notice on contamination barrier
ಅರ್ಕಾವತಿ ಕಲುಷಿತ ತಡೆಗೆ ಡಿಸಿ ಅರ್ಚನಾ ಸೂಚನೆ


ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ನಗರಸಭೆ ಕಲುಷಿತ ನೀರು ಹರಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಹೋಟೆಲ್‌ಗಳು, ಕಾರ್ಖಾನೆಗಳು ಹಾಗೂ ರೇಷ್ಮೆ ನೂಲು ಬಿಚ್ಚುವ ಘಟಕಗಳು ಕಡ್ಡಾಯವಾಗಿ ನೀರು ಶುದ್ಧೀಕರಣ ಘಟಕ ಸ್ಥಾಪಿಸಿ ನಂತರ ಸ್ವಚ್ಛ ನೀರನ್ನಷ್ಟೆ ಒಳ ಚರಂಡಿಗೆ ಹರಿಸಬೇಕು ಎಂದರು.

ಕೈಗಾರಿಕಾ ಪ್ರದೇಶಗಳಲ್ಲಿಕಡ್ಡಾಯವಾಗಿ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಯಾಗಿರಬೇಕು. ಒಳ ಚರಂಡಿಯಿದ್ದರೂ ತೆರೆದ ಚರಂಡಿಗಳಿಗೆ ತ್ಯಾಜ್ಯ ನೀರನ್ನು ಹರಿಸುತ್ತಿರುವುದನ್ನು ತಡೆಯುವಂತೆ ಸೂಚಿಸಿದರು.

ಮುಂದಿನ ಜಿಲ್ಲಾಮಟ್ಟದ ಸಮಿತಿ ಸಭೆಯೊಳಗೆ ಅರ್ಕಾವತಿ ನದಿಗೆ ಎಲ್ಲಿಯೂ ಕಲುಷಿತ ನೀರು ಹರಿಯದಂತೆ ತಡೆದಿರುವ ಬಗ್ಗೆ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಸೂಚಿಸಿದರು.

ಸಭೆಯಲ್ಲಿನಗರಸಭೆ ಅಧಿಕಾರಿಗಳು, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸೇರಿದಂತೆ ನಾನಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ