ಆ್ಯಪ್ನಗರ

ಪಿಎಂ ಕಿಸಾನ್‌ ಸಮ್ಮಾನ್‌ ಮೊಬೈಲ್‌ ಆ್ಯಪ್‌ ಬಳಕೆಗೆ ಡಿಸಿ ರಾಜೇಂದ್ರ ಕರೆ

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಲ್ಲಿ ರೈತರು 6 ಸಾವಿರ ರೂ...

Vijaya Karnataka 1 Jul 2019, 5:00 am
ರಾಮನಗರ: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಲ್ಲಿ ರೈತರು 6 ಸಾವಿರ ರೂ. ಪಡೆಯಲು ಕಂದಾಯ ಇಲಾಖೆ ಭೂಮಿ ಉಸ್ತುವಾರಿ ಕೋಶದ ಸಹಯೋಗದೊಂದಿಗೆ ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ. ಕೆ. ರಾಜೇಂದ್ರ ತಿಳಿಸಿದರು.
Vijaya Karnataka Web dc rajendra calls for use of pm kisan samman mobile app
ಪಿಎಂ ಕಿಸಾನ್‌ ಸಮ್ಮಾನ್‌ ಮೊಬೈಲ್‌ ಆ್ಯಪ್‌ ಬಳಕೆಗೆ ಡಿಸಿ ರಾಜೇಂದ್ರ ಕರೆ


ಈ ಮೊಬೈಲ್‌ ಆ್ಯಪ್‌ ಅನ್ನು ಗೂಗಲ್‌ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್‌ ಮಾಡಿಕೊಂಡು ಸ್ವಯಂ ದೃಢೀಕರಣ ಪತ್ರದಲ್ಲಿ ಅಗತ್ಯ ಮಾಹಿತಿ ಭರ್ತಿ ಮಾಡಿ ಮೊಬೈಲ್‌ ಮೂಲಕವೇ ಫೋಟೊ ತೆಗೆದು ರೈತರೇ ಅಪ್‌ಲೋಡ್‌ ಮಾಡಬಹುದಾಗಿದೆ ಎಂದು ಹೇಳಿದರು.

ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಮತ್ತು ರೈತರು ಬಳಸಬಹುದಾಗಿದೆ. ಈ ತಂತ್ರಾಂಶದಲ್ಲಿ ತಮ್ಮ ಜುಮೀನು ಇರುವ ಜಿಲ್ಲೆ, ತಾಲೂಕು, ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿ ನಂತರ ತಮ್ಮ ಮೊಬೈಲ್‌ ನಂಬರ್‌ ಅನ್ನು ದಾಖಲಿಸಿ ಮುಂದುವರಿಯಬೇಕು. ಮುಂದಿನ ಹಂತದಲ್ಲಿ ನಾಲ್ಕು ಸಂಖ್ಯೆಯ ಪಾಸ್‌ವರ್ಡ್‌ ನಂಬರ್‌ ದಾಖಲಿಸಬೇಕು. ನಂತರ ಗ್ರಾಮವನ್ನು ಆಯ್ಕೆ ಮಾಡಿ ಮಾಡಬೇಕು ಎಂದು ಹೇಳಿದರು.

ಈ ಹಂತದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ಭೂ ದಾಖಲೆಗಳ ವಿವರಗಳು ನೇರವಾಗಿ ಭೂಮಿ ದತ್ತಾಂಶದಿಂದ ಮೊಬೈಲ್‌ಗೆ ಡೌನ್‌ಲೋಡ್‌ ಆಗುತ್ತದೆ. ಸರ್ವೆ ಸಂಖ್ಯೆ ದಾಖಲಿಸಿ ಸ್ವಾಧೀನದಾರನ ಹೆಸರನ್ನು ಆಯ್ಕೆ ಮಾಡಬೇಕು. ವರ್ಗ, ಸಣ್ಣ, ಅತಿ ಸಣ್ಣ ಹಿಡುವಳಿದಾರ ಮಾಹಿತಿಯನ್ನು ಆಯ್ಕೆ ಮಾಡಿ ದೃಢೀಕರಿಸಿದ ನಂತರ ಆಧಾರ್‌ ಮಾಹಿತಿಯನ್ನು ದಾಖಲಿಸಬೇಕು ಅಥವಾ ಆಧಾರ್‌ ಮಾಹಿತಿಯನ್ನು ನೇರವಾಗಿ ಆಧಾರ್‌ ಕಾರ್ಡ್‌ ನಲ್ಲಿರುವ ಕ್ಯೂಆರ್‌ ಕೋಡ್‌ ಅನ್ನು ಮೊಬೈಲ್‌ನಿಂದ ಸ್ಕ್ಯಾ‌ನ್‌ ಮಾಡುವ ಮೂಲಕವು ಸ್ವಯಂಚಾಲಿತವಾಗಿ ಆಧಾರ್‌ ವಿವರ ದಾಖಲಿಸುವ ಸೌಲಭ್ಯವು ಇದೆ ಎಂದು ತಿಳಿಸಿದರು.

ಮೊಬೈಲ್‌ ಸಂಖ್ಯೆ, ಬ್ಯಾಂಕ್‌ ವಿವರ, ಐಎಫ್‌ಎಸ್ಸಿ ಸಂಖ್ಯೆ ನಮೂದಿಸುವ ಮೂಲಕ ಸ್ವಯಂ ಚಾಲಿತವಾಗಿ ಬ್ಯಾಂಕ್‌ ಮತ್ತು ಬ್ರಾಂಚ್‌ ಹೆಸರು ಆಯ್ಕೆಯಾಗುವಂತೆ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.

ಪಿಂಚಣಿದಾರರು, ಆದಾಯ ತೆರಿಗೆ ಪಾವತಿದಾರರ ಕುಟುಂಬ, ಸಾಂಧಾನಿಕ ಹುದ್ದೆ ಹೊಂದಿದ ಮಾಜಿ ಅಥವಾ ಹಾಲಿ ಕುಟುಂಬ, ಸಾಂಸ್ಥಿಕ ಭೂಮಾಲೀಕರ ಕುಟುಂಬ ಹಾಗೂ ವೈದ್ಯರು, ವಕೀಲರರು, ಅಭಿಯಂತರರು ಸೇರಿದಂತೆ ಇತರೆ ವೃತ್ತಿಪರರು ಈ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ