ಆ್ಯಪ್ನಗರ

ಚಿರತೆ ದಾಳಿಗೆ ಮಾಗಡಿ ವೃದ್ಧೆ ಬಲಿ: ಕುಟುಂಬಕ್ಕೆ 7.5 ಲಕ್ಷ ರೂ. ಪರಿಹಾರ ಪತ್ರ ವಿತರಣೆ

ಗಂಗಮ್ಮ ಮೇಲೆ ದಾಳಿ ಮಾಡಿದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಮತ್ತು ಜಿಲ್ಲಾಡಳಿತ ಎಲ್ಲ ಪ್ರಯತ್ನ ಮಾಡುತ್ತಿದೆ. ಈಗಾಗಲೇ 15 ಬೋನುಗಳನ್ನು ಇಟ್ಟು ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಸನ್ನದ್ಧ ಸ್ಥಿತಿಯಲ್ಲಿ ಇದ್ದಾರೆ.

Vijaya Karnataka Web 22 May 2020, 3:01 pm
ರಾಮನಗರ: ಮಾಗಡಿ ತಾಲೂಕಿನಲ್ಲಿ ಚಿರತೆ ದಾಳಿಗೆ ಬಲಿಯಾದ ಗಂಗಮ್ಮ (68) ಕುಟುಂಬದವರಿಗೆ ಸಾಂತ್ವನ ಹೇಳಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, 7.5 ಲಕ್ಷ ರೂ. ಪರಿಹಾರದ ಆದೇಶ ಪತ್ರವನ್ನು ಹಸ್ತಾಂತರಿಸಿದರು.
Vijaya Karnataka Web ಅಶ್ವತ್ಥನಾರಾಯಣ
ಅಶ್ವತ್ಥನಾರಾಯಣ


ಮಾಗಡಿಯ ಕೊತ್ತಗೊಂಡನಹಳ್ಳಿಯ ಗಂಗಮ್ಮ ಅವರ ಮನೆಗೆ ಶುಕ್ರವಾರ ಭೇಟಿ ನೀಡಿದ ಡಾ. ಅಶ್ವತ್ಥನಾರಾಯಣ, ಅವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಸಮಾಧಾನ ಹೇಳಿದರು.

ಪರಿಹಾರ ಹಣ ಬಿಡುಗಡೆ ಸಂಬಂಧ ಅರಣ್ಯ ಇಲಾಖೆಯ ಜ್ಞಾಪನಾ ಪತ್ರವನ್ನು ವಿತರಿಸಿ, ಎರಡು ಮೂರು ದಿನದೊಳಗೆ ಹಣ ಆನ್‌ಲೈನ್‌ ಮೂಲಕ ಖಾತೆಗೆ ಜಮೆ ಆಗಲಿದೆ ಎಂದು ಕುಟುಂಬದವರಿಗೆ ಭರವಸೆ ನೀಡಿದರು.

ಗಂಗಮ್ಮ ಅವರನ್ನು ಚಿರತೆ ಕೊಂದುಹಾಕಿದ ಸ್ಥಳಕ್ಕೆ ಭೇಟಿ ನೀಡಿದ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಜತೆಯಲ್ಲಿದ್ದ ಪರಿಸರ ತಜ್ಞ ಸಂಜಯ್‌ ಗುಬ್ಬಿ ಚಿರತೆಯ ಚಲನ ವಲನದ ಬಗ್ಗೆ ಹೆಚ್ಚಿನ ಮಾಹಿತಿ ಒದಗಿಸಿದರು.

"ಗಂಗಮ್ಮ ಮೇಲೆ ದಾಳಿ ಮಾಡಿದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಮತ್ತು ಜಿಲ್ಲಾಡಳಿತ ಎಲ್ಲ ಪ್ರಯತ್ನ ಮಾಡುತ್ತಿದೆ. ಈಗಾಗಲೇ 15 ಬೋನುಗಳನ್ನು ಇಟ್ಟು ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಸನ್ನದ್ಧ ಸ್ಥಿತಿಯಲ್ಲಿ ಇದ್ದಾರೆ. ಚಿರತೆಯ ಚಲನವಲನ ಗಮನಿಸಲು ಡ್ರೋಣ್ ಬಳಕೆ ಮಾಡಲಾಗುವುದು. ಜನತೆ ಆತಂಕ ಪಡುವ ಅಗತ್ಯವಿಲ್ಲ" ಎಂದು ಡಿಸಿಎಂ ಡಾ. ಅಶ್ವತ್ಥನಾರಾಯಣ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ