ಆ್ಯಪ್ನಗರ

ಕ್ಷೀಣವಾಗುತ್ತಿರುವ ಸಾಹಿತ್ಯ ಚಟುವಟಿಕೆ

ಇತ್ತೀಚಿನ ದಿನಗಳಲ್ಲಿ ಸಾಹಿತ್ಯ ಚಟುವಟಿಕೆ ದಿನದಿಂದ ದಿನಕ್ಕೆ ಕ್ಷೀಣವಾಗುತ್ತಿದ್ದು, ಅದನ್ನು ಕಾಪಾಡುವಲ್ಲಿ ಎಲ್ಲರೂ ಕೈ ಜೋಡಿಸಬೇಕಿದೆ ಎಂದು ತಾಲೂಕು ಕಸಾಪ ಅಧ್ಯಕ್ಷೆ ಕಲ್ಪನಾ ಶಿವಣ್ಣ ಹೇಳಿದರು.

Vijaya Karnataka 19 Jan 2019, 5:00 am
ಮಾಗಡಿ: ಇತ್ತೀಚಿನ ದಿನಗಳಲ್ಲಿ ಸಾಹಿತ್ಯ ಚಟುವಟಿಕೆ ದಿನದಿಂದ ದಿನಕ್ಕೆ ಕ್ಷೀಣವಾಗುತ್ತಿದ್ದು, ಅದನ್ನು ಕಾಪಾಡುವಲ್ಲಿ ಎಲ್ಲರೂ ಕೈ ಜೋಡಿಸಬೇಕಿದೆ ಎಂದು ತಾಲೂಕು ಕಸಾಪ ಅಧ್ಯಕ್ಷೆ ಕಲ್ಪನಾ ಶಿವಣ್ಣ ಹೇಳಿದರು.
Vijaya Karnataka Web decreasing literary activity
ಕ್ಷೀಣವಾಗುತ್ತಿರುವ ಸಾಹಿತ್ಯ ಚಟುವಟಿಕೆ


ಸುಗ್ಗಿ ಹಬ್ಬ ಎಂದೇ ಕರೆಯಲ್ಪಡುವ ಸಂಕ್ರಾಂತಿ ಹಬ್ಬದ ಹಿನ್ನ್ನೆಲೆಯಲ್ಲಿ ಪಟ್ಟಣದಲ್ಲಿ ಪ್ರತಿಭಾ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಸಂಕ್ರಾಂತಿ ಕವಿಗೋಷ್ಠಿಯಲ್ಲಿ ಮಾತನಾಡಿ, ಸಂಕ್ರಾಂತಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ ಏರ್ಪಡಿಸಿರುವ ಕವಿಗೋಷ್ಠಿ ವಿಶಿಷ್ಟವಾಗಿದೆ.

ಇಂದಿನ ಜೀವನ ಶೈಲಿಯಲ್ಲಿ ಕಾರ್ಯಒತ್ತಡದಿಂದ ನಾವು ಮಾನಸಿಕ ನೆಮ್ಮದಿ ಕಳೆದುಕೊಳ್ಳುತ್ತಿದ್ದೇವೆ. ಸಾಹಿತ್ಯಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಶಾಂತಿ ಮತ್ತು ನೆಮ್ಮದಿಯನ್ನು ಕಂಡುಕೊಳ್ಳುವ ಪ್ರಯತ್ನ ಮಾಡಬೇಕಿದೆ ಎಂದರು.

ಪ್ರತಿಭಾ ಕೇಂದ್ರದ ಅಧ್ಯಕ್ಷ ಪಾನ್ಯಂ ನಟರಾಜ್‌ ಮಾತನಾಡಿ, ಪ್ರತಿಯೊಬ್ಬ ಮನುಷ್ಯನಲ್ಲಿಯೂ ಸಹ ಒಂದೊಂದು ಕಲೆ ಇರುತ್ತದೆ. ಅದನ್ನು ಕೆಲವರು ಮಾತ್ರ ಹೊರ ಹೊಮ್ಮಿಸುತ್ತಾರೆ. ಇನ್ನು ಕೆಲವರು ಹಿಂಜರಿಕೆ, ಕೀಳಿರಿಮೆಯಿಂದ ವೇದಿಕೆಗಳಲ್ಲಿ ಪ್ರಚುರ ಪಡಿಸದೇ ಎಲೆ ಮರೆ ಕಾಯಿಯಂತೆ ಇರುತ್ತಾರೆ. ಬಹಳಷ್ಟು ಮಂದಿ ತಾವು ರಚಿಸಿದ ಕವಿತೆ, ಕವನಗಳನ್ನು ಪುಸ್ತಕಕ್ಕೆ ಮಾತ್ರ ಸೀಮಿತಗೊಳಿಸಿರುತ್ತಾರೆ. ಪ್ರತಿಭೆ ಇದ್ದರೂ ಸೂಕ್ತ ವೇದಿಕೆ ಸಿಗದ ಪ್ರತಿಭಾವಂತರನ್ನು ಗುರುತಿಸಿ ಮುಖ್ಯ ವಾಹಿನಿಗೆ ತರಬೇಕು ಎನ್ನುವ ಉದ್ದೇಶದಿಂದ ವೇದಿಕೆ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಕ್ರಾಂತಿ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕವಿಗೋಷ್ಠಿಯಲ್ಲಿ ಹಲವು ಸಾಹಿತಿಗಳು ಸ್ವರಚಿತ ಕವನವನ್ನು ವಾಚಿಸಿದರೆ, ಬಹಳಷ್ಟು ಮಂದಿ ಜಾನಪದ ಗೀತೆಗಳನ್ನು ಹಾಡಿದರು.

ಕಾರ್ಯಕ್ರಮದಲ್ಲಿ ಸಾಹಿತಿಗಳಾದ ದೊಡ್ಡಬಾಣಗೆರೆ ಮಾರಣ್ಣ, ಡಿ.ರಾಮಚಂದ್ರು, ಕೆರೆಬೀದಿ ಶಿವಕುಮಾರ್‌, ಪದ್ಮನಾಭ್‌, ಎಂ.ಸಿ.ಗೋವಿಂದರಾಜ್‌, ರಾಮಚಂದ್ರ ಭಟ್ಟ, ಎಂ.ಶ್ರೀನಿವಾಸ್‌, ಕಡೇಮನೆ ಕುಮಾರ್‌, ಯೋಗೇಶ್‌, ರಘು, ಪ್ರಭಾವತ್ತಮ್ಮ, ವಿಜಯ ನಾಗೇಶ್‌, ವಸಂತಲಕ್ಷ್ಮೀ, ಸ್ಮಿತಾ ಸುನೀಲ್‌, ಶ್ರುತಿ, ಕಾವ್ಯ ಮತ್ತಿತರರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ