ಆ್ಯಪ್ನಗರ

ಕೊಲೆ ಘಟನೆಯ ಕುಟುಂಬಕ್ಕೆ ರಕ್ಷಣೆ ನೀಡಲು ಆಗ್ರಹ

ಕನಕಪುರ ತಾಲೂಕಿನ ಕಲ್ಲಿಗೌಡನದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿದ ಕರ್ನಾಟಕ ಕ್ಷ ತ್ರಿಯ ಒಕ್ಕೂಟದ ಸದಸ್ಯರು ಒಕ್ಕೂಟದ ಅಧ್ಯಕ್ಷ ಉದಯ್‌ಸಿಂಗ್‌ ನೇತೃತ್ವ ದಲ್ಲಿ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದರು.

Vijaya Karnataka 18 Dec 2018, 5:00 am
ಕನಕಪುರ: ಕನಕಪುರ ತಾಲೂಕಿನ ಕಲ್ಲಿಗೌಡನದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿದ ಕರ್ನಾಟಕ ಕ್ಷ ತ್ರಿಯ ಒಕ್ಕೂಟದ ಸದಸ್ಯರು ಒಕ್ಕೂಟದ ಅಧ್ಯಕ್ಷ ಉದಯ್‌ಸಿಂಗ್‌ ನೇತೃತ್ವ ದಲ್ಲಿ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದರು.
Vijaya Karnataka Web demanded to protection murder incident family
ಕೊಲೆ ಘಟನೆಯ ಕುಟುಂಬಕ್ಕೆ ರಕ್ಷಣೆ ನೀಡಲು ಆಗ್ರಹ


ಗ್ರಾಮದಲ್ಲಿ ನಡೆದ ಸಿದ್ಧರಾಜು ಮತ್ತು ಸಾಕಮ್ಮ ರವರ ಹತ್ಯೆ ಹಿನ್ನೆಲೆಯಲ್ಲಿ ಸಾಕಮ್ಮನ ಅತ್ತೆ, ಮಾವ, ಮತ್ತು ಲಕ್ಷ್ಮಿಯವರನ್ನು ಭೇಟಿ ಮಾಡಿದ ವೇಳೆ ಮಾತನಾಡಿ

ಜೋಡಿ ಕೊಲೆ ಸಂಧರ್ಭದಲ್ಲಿ ನಡೆದಿರುವ ಹಲ್ಲೆ ದಾಳಿ ಘಟನೆಗಳು ಕಾನೂನು ಸುವ್ಯವಸ್ಥೆ ಬಗ್ಗೆ ಆತಂಕ ಮೂಡುವಂತೆ ಮಾಡಿದ್ದು ಪೊಲೀಸರು ದೂರುದಾರರಾದ ಲಕ್ಷ್ಮಿ ಮತ್ತವರ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಆರೋಪಿಗಳನ್ನು ಬಂಧಿಸಲು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ವಿಳಂಬವಾದರೆ ಬೆಂಗಳೂರಿನ ರೇಸ್‌ಕೋರ್ಸ್‌ ಗಾಂಧಿ ಪ್ರತಿಮೆ ಬಳಿ ರಾಜ್ಯದ ಸಾವಿರಾರು ಮಂದಿ ಒಕ್ಕೂಟದಿಂದ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.

ಕೋಡಿಹಳ್ಳಿ ಆರಕ್ಷ ಕ ನಿರೀಕ್ಷ ಕ ಕೃಷ್ಣಕುಮಾರ್‌ರನ್ನು ಭೇಟಿ ಮಾಡಿ ಕೊಲೆ ಮತ್ತು ಹಲ್ಲೆ ನಡೆಸಿದವರ ಮೇಲೆ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ