ಆ್ಯಪ್ನಗರ

ಸಮ್ಮಿಶ್ರ ಸರಕಾರದಲ್ಲಿ ದೂರವಾಣಿ ಕದ್ದಾಲಿಕೆ ಆಗಿಲ್ಲ: ಡಿಕೆಶಿ

ದೂರವಾಣಿ ಕದ್ದಾಲಿಕೆ ವಿಚಾರ ಈಗ ರಾಜ್ಯದೆಲ್ಲೆಡೆ ಚರ್ಚೆಯಾಗುತ್ತಿದೆ. ಈ ಕುರಿತು ಆರೋಪ-ಪ್ರತ್ಯಾರೋಪಗಳು ಜೋರಾಗಿ ಸಾಗಿವೆ. ಈಗ ಡಿಕೆ ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

Vijaya Karnataka Web 14 Aug 2019, 7:02 pm
ರಾಮನಗರ: ಕಾಂಗ್ರೆಸ್‌, ಜೆಡಿಎಸ್‌ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ದೂರವಾಣಿ ಕದ್ದಾಲಿಕೆ ಮಾಡಿಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.
Vijaya Karnataka Web ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್


ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಂಗಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್‌ ಆರೋಪಗಳನ್ನು ತಳ್ಳಿ ಹಾಕಿದರು.

ನಮ್ಮ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಯಾವುದೇ ಕದ್ದಾಲಿಕೆ ನಡೆದಿಲ್ಲ. ನಮ್ಮ ಸರಕಾರದಲ್ಲಿ ಗೃಹ ಸಚಿವರಾಗಲಿ, ಮುಖ್ಯಮಂತ್ರಿಯಾಗಲಿ ಯಾರೂ ಪೋನ್ ಕದ್ದಾಲಿಕೆ ಮಾಡಿಲ್ಲ. ಅಥವಾ ಆದೇಶಿಸಿಲ್ಲ ಎಂದು ತಿಳಿಸಿದರು.

ಈಗ ಬಿಜೆಪಿ ಸರಕಾರವಿದೆ. ಬೇಕಾದರೇ ತನಿಖೆ ನಡೆಸಲಿ ಎಂದು ಸವಾಲು ಹಾಕಿದರು.

ಫೋನ್ ಕದ್ದಾಲಿಕೆಯ ಬಗ್ಗೆ ಎಚ್‌ ವಿಶ್ವನಾಥ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲ್ಲ. ಅವರು ಏನು ಬೇಕಾದರೂ ಹೇಳಲಿ ಎಂದರು.

ಬಿಜೆಪಿಯವರು ಅನರ್ಹ ಶಾಸಕರಿಗೆ ಗೋರಿ ಕಟ್ಟುತ್ತಿದ್ದಾರೆ. ಆಮೇಲೆ ನಾವು ಕೂಡ ಹೋಗಿ ಪೂಜೆ ಮಾಡಿಕೊಂಡು ಬರುತ್ತೇವೆ. ಎಂದು ತಮ್ಮದೇ ಶೈಲಿಯಲ್ಲಿ ಎಚ್‌ ವಿಶ್ವನಾಥ್‌ಗೆ ಮಾಜಿ ಸಚಿವ ಶಿವಕುಮಾರ್ ಟಾಂಗ್‌ ಕೊಟ್ಟರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ