ಆ್ಯಪ್ನಗರ

ಧರ್ಮದ ಹೆಸರಿನಲ್ಲಿ ರಾಜಕಾರಣ, ದೇಶದಲ್ಲಿ ಅಭದ್ರತೆಗೆ ಕಾರಣ: ಡಿಕೆ ಸುರೇಶ್‌

ಭಾರತದಲ್ಲಿಇಂದು ಧರ್ಮದ ಹೆಸರಿನಲ್ಲಿ ಭಾವನೆಗಳನ್ನು ಮುಂದಿಟ್ಟುಕೊಂಡು ಜನರ ಜೀವನದ ಜತೆ ಆಟವಾಡುತ್ತಿದ್ದಾರೆ. ಹಿಂದುತ್ವದ ಹೆಸರಿನಲ್ಲಿ ಸಂವಿಧಾನ ತಿದ್ದುಪಡಿ ಮಾಡುವ ಯತ್ನಗಳು ನಡೆಯುತ್ತಿವೆ. ಅಲ್ಪಸಂಖ್ಯಾತರು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ

Vijaya Karnataka Web 23 Jun 2022, 10:51 am
ಬಿಡದಿ: ಧರ್ಮದ ಹೆಸರಿನಲ್ಲಿರಾಜಕಾರಣದಿಂದ ದೇಶಕ್ಕಿಂದು ಅಭದ್ರತೆ ಕಾಡುತ್ತಿದೆ. ದೇಶವನ್ನು ಈ ಪರಿಸ್ಥಿತಿಯಿಂದ ಪಾರು ಮಾಡಲು ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕಾಗಿದೆ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದರು.
Vijaya Karnataka Web ಡಿಕೆ ಸುರೇಶ್‌
ಡಿಕೆ ಸುರೇಶ್‌


ಬಿಡದಿ ಬಳಿಯ ಮ್ಯಾಗ್ನೋಲಿಯಾ ರೆಸಾರ್ಟ್‌ನಲ್ ಲಿಬುಧವಾರ ಜಿಲ್ಲಾಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರದಲ್ಲಿ ಮಾತನಾಡಿದರು.

ಪಿಎಂ ಫಸಲ್‌ ಬಿಮಾ ಯೋಜನೆಯಡಿ ಬೆಳೆ ವಿಮೆ ನೋಂದಣಿ ಆರಂಭ : ಜು.31 ಕೊನೆಯ ದಿನ

ಭಾರತದಲ್ಲಿಇಂದು ಧರ್ಮದ ಹೆಸರಿನಲ್ಲಿ ಭಾವನೆಗಳನ್ನು ಮುಂದಿಟ್ಟುಕೊಂಡು ಜನರ ಜೀವನದ ಜತೆ ಆಟವಾಡುತ್ತಿದ್ದಾರೆ. ಹಿಂದುತ್ವದ ಹೆಸರಿನಲ್ಲಿ ಸಂವಿಧಾನ ತಿದ್ದುಪಡಿ ಮಾಡುವ ಯತ್ನಗಳು ನಡೆಯುತ್ತಿವೆ. ಅಲ್ಪಸಂಖ್ಯಾತರು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ದೂರಿದರು.

ಕೃಷಿಕರು, ಯುವಕರು, ಆರ್ಥಿಕವಾಗಿ ದುರ್ಬ ಲರನ್ನು ಈ ದುರಾಡಳಿತದಿಂದ ರಕ್ಷಿಸಬೇಕಾಗಿದೆ. ನಿರುದ್ಯೋಗ ಸಮಸ್ಯೆ ನಿವಾರಣೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿಈ ಎಲ್ಲಾವಿಚಾರಗಳನ್ನು ಪ್ರಮುಖವಾಗಿ ಇರಿಸಿಕೊಂಡು ನವ ಸಂಕಲ್ಪ ಚಿಂತನಾ ಶಿಬಿರದಲ್ಲಿಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಸಲಹೆಗಳನ್ನು ಪಡೆಯುವುದಾಗಿ ತಿಳಿಸಿದರು. ಬಿಜೆಪಿ ದುರಾಡಳಿತದ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಾರತ್‌ ಜೋಡೋ ಎಂಬ ಅಭಿಯಾನ ಕೈಗೊಂಡಿದ್ದು, ಅಕ್ಟೋಬರ್‌ 2 ರಿಂದ ಪಾದಯಾತ್ರೆ ನಡೆಸಲು ಉದ್ದೇಶಿಸಿದ್ದಾರೆ. ಸುಮಾರು 8 ತಿಂಗಳ ಕಾಲ ನಡೆಯುವ ಈ ಅಭಿಯಾನದಲ್ಲಿಅವರು 3800 ಕಿ.ಮೀ. ಪಾದಯಾತ್ರೆ ನಡೆಸಲಿದ್ದಾರೆ ಎಂದು ವಿವರಿಸಿದರು

ದಬ್ಬಾಳಿಕೆ, ದೌರ್ಜನ್ಯ ಖಂಡನೀಯ: ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆ ವಿಚಾರದಲ್ಲಿನಾಯಕ ರಾಹುಲ್‌ ಗಾಂಧಿಯವರನ್ನು ಇ.ಡಿ ವಿಚಾರಣೆಗೆ ಕರೆದಿರುವುದರ ಬಗ್ಗೆ ಬೇಸರವಿಲ್ಲ. ಆದರೆ ಅವರನ್ನು ನಡೆಸಿಕೊಳ್ಳುತ್ತಿರುವ ರೀತಿ, ಕಾಂಗ್ರೆಸ್ಸಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆ ನಾವು ಖಂಡಿನೀಯ ಎಂದರು.

ಬೆಂಗಳೂರು ಮೈಸೂರು ದಶಪಥ: ಹೆದ್ದಾರಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಕೆ, ಅಪಘಾತ ಮಾಡಿದವರು ತಪ್ಪಿಸಿಕೊಳ್ಳೋದು ಕಷ್ಟ!

ಪ್ರಧಾನಿ ನರೇಂದ್ರ ಮೋದಿಗಿಂತ ಹೆಚ್ಚು ಸುಳ್ಳು ಹೇಳುವ ಫ್ಯಾಕ್ಟರಿ ಬಿಡದಿಯಲ್ಲಿದೆ. ಇವರಿಗೆ ನಿಮ್ಮ ಕೊಡುಗೆ ಏನೆಂದು ಕೇಳಿದರೆ ಬೆಂಗಳೂರು ಕಟ್ಟಿದ್ದು ನಾವೇ ಎಂದು ಹೇಳುತ್ತಾರೆ. ಸುಳ್ಳಿನ ಜತೆಗೆ ಈ ಫ್ಯಾಕ್ಟರಿ (ಎಚ್‌.ಡಿ. ಕುಮಾರಸ್ವಾಮಿ) ಕಣ್ಣೀರನ್ನು ಸುರಿಸುತ್ತದೆ ಎಂದು ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕುರಿತು ಲೇವಡಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ