ಆ್ಯಪ್ನಗರ

ಪ್ರಧಾನಿಯನ್ನು ಏಕವಚನದಲ್ಲಿ ಟೀಕಿಸಿದ ಡಿಕೆಸು

ಬೆಂಗಳೂರು ಗ್ರಾಮಾಂತರ ಕ್ಷೇತ್ರ ಮೈತ್ರಿಕೂಟ ಅಭ್ಯರ್ಥಿ ಡಿಕೆಸುರೇಶ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರೆ...

Vijaya Karnataka 23 Mar 2019, 5:00 am
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರ ಮೈತ್ರಿಕೂಟ ಅಭ್ಯರ್ಥಿ ಡಿ.ಕೆ.ಸುರೇಶ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರೆ.
Vijaya Karnataka Web dkusa is the singular critic of the prime minister
ಪ್ರಧಾನಿಯನ್ನು ಏಕವಚನದಲ್ಲಿ ಟೀಕಿಸಿದ ಡಿಕೆಸು


ಕೆಂಗಲ್‌ ಬಳಿಯ ಖಾಸಗಿ ಕಲ್ಯಾಣ ಮಂಟಪದಲ್ಲಿ ಗುರುವಾರ ಸಂಜೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಕಾರ‍್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,'' ಪ್ರಧಾನಿ ಮೋದಿ ಬಾಂಬ್‌ ಹಾಕ್ತಾನೆ, ದೇಶ ಉಳುಸ್ತಾನೆ ಅಂತ ಜನ ಮಾತಾಡ್ಕೊಳ್ಳುತ್ತಿದ್ದಾರೆ. ಆದರೆ, ಕಳೆದ 70 ವರ್ಷಗಳ ಅವಧಿಯಲ್ಲಿ ಕಾಂಗ್ರೆಸ್‌ ಸೇರಿದಂತೆ ಜಾತ್ಯಾತೀತ ಪಕ್ಷಗಳು ದೇಶದ ಹಿತ ದೃಷ್ಟಿಯಿಂದ ಅನೇಕ ಬಾರಿ ಸರ್ಜಿಕಲ್‌ ಸ್ಟ್ರೈಕ್‌ ನಡೆಸಿವೆ,'' ಎಂದು ಅವರು ಹೇಳಿದರು.

ಮಾಧ್ಯಮಗಳ ಮೇಲೂ ಕೆಂಡ: ಖಾಸಗಿ ಮಾಧ್ಯಮಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಚ್ಚು ಪ್ರಚಾರ ನೀಡುತ್ತಿವೆ. ದೇಶ ಸಂಕಷ್ಟದ ಸ್ಥಿತಿಯಲ್ಲಿದ್ದ ಕಾಂಗ್ರೆಸ್‌ ಸೇರಿದಂತೆ ಜಾತ್ಯಾತೀತ ಪಕ್ಷಗಳು ಸರ್ಜಿಕಲ್‌ ಸ್ಟ್ರೈಕ್‌ ಮಾಡಿದೆ. ಆದರೆ, ಎಂದೂ ಕೂಡ ರಾಜಕೀಯವಾಗಿ ಬಳಕೆ ಮಾಡಿಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಠೇವಣಿ ಕಳೆಯಿರಿ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಠೇವಣಿ ಇಲ್ಲದಂತೆ ಮಾಡಬೇಕು. ಆಮೂಲಕ ಮತ್ತೆ ಬಿಜೆಪಿ ಮೇಲಕ್ಕೆ ಎಳದಂತೆ ಮಾಡಬೇಕು ಎಂದು ಕಾರ‍್ಯಕರ್ತರಲ್ಲಿ ಮನವಿ ಮಾಡಿದರು.

ಹೆಚ್ಚಿನ ಅಂತರದಿಂದ ಗೆಲ್ಲಿಸಿ: ಶಾಸಕ ಎ.ಮಂಜು ಮಾತನಾಡಿ, ಚನ್ನಪಟ್ಟಣ ಇಂದು ರಾಜ್ಯದಲ್ಲೇ ಪ್ರತಿಷ್ಠೆಯ ಕ್ಷೇತ್ರ. ಜತೆಗೆ ಇದು ಸಿಎಂ ಕುಮಾರಸ್ವಾಮಿ ಪ್ರತಿನಿಧಿಸುವ ಕ್ಷೇತ್ರವಾಗಿದ್ದು ರಾಜ್ಯದ ದೃಷ್ಟಿ ಇದರ ಮೇಲಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ‍್ಯಕರ್ತರು ಒಗ್ಗೂಡಿ ಮೈತ್ರಿ ಅಭ್ಯರ್ಥಿ ಡಿ.ಕೆ.ಸುರೇಶ್‌ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಈ ವೇಳೆ ಮಾಜಿ ಶಾಸಕ ಅಶ್ವಥ್‌, ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ, ಬಮೂಲ್‌ ನಿರ್ದೇಶಕ ಲಿಂಗೇಶ್‌ ಕುಮಾರ್‌, ಜೆಡಿಎಸ್‌ ತಾಲೂಕು ಅಧ್ಯಕ್ಷ ಜಯಮುತ್ತು, ನಗರ ಅಧ್ಯಕ್ಷ ರಾಂಪುರ ರಾಜಣ್ಣ, ಜಿಲ್ಲಾಧ್ಯಕ್ಷ ಗಂಗಾಧರ್‌, ಕಾಂಗ್ರೆಸ್‌ನ ನಗರ ಅಧ್ಯಕ್ಷ ವೀರೇಗೌಡ, ಗ್ರಾಮಾಂತರ ಅಧ್ಯಕ್ಷ ಶಿವಮಾಧು, ಯುವ ಮುಖಂಡ ಮಲ್ಲೇಶ್‌ ಸೇರಿದಂತೆ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ