ಆ್ಯಪ್ನಗರ

ರಾಮನಗರದಲ್ಲಿ ಟ್ರ್ಯಾಕ್ಟರ್‌ಗೆ ಖಾಸಗಿ ಬಸ್‌ ಡಿಕ್ಕಿ: 12 ಮಂದಿಗೆ ಗಾಯ

ರಾಮನಗರದ ಮಾಗಡಿ ಬಳಿಯ ತಿರುಮಲೆ ಹೊನ್ನಾಪುರ ಕೆರೆ ಟ್ರಾಕ್ಟರ್ರ್‌ ಹಾಗೂ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡಿದ್ದಾರೆ. ಗಾಯಳುಗಳನ್ನು ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

Vijaya Karnataka Web 12 Nov 2019, 10:11 pm
ರಾಮನಗರ : ಟ್ರಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡ ಘಟನೆ ನಡೆದಿದೆ. ಮಾಗಡಿ ಬಳಿಯ ತಿರುಮಲೆ ಹೊನ್ನಾಪುರ ಕೆರೆ ಬಳಿ ಸಿದ್ದಲಿಂಗೇಶ್ವರ ಬಸ್ ಪಲ್ಟಿ ಹೊಡೆದಿದೆ. ಬೆಂಗಳೂರಿನಿಂದ ಮಾಗಡಿಗೆ ಬರುತ್ತಿದ್ದ ಬಸ್ ಇದಾಗಿದ್ದು, ಬಸ್ ನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು.
Vijaya Karnataka Web bus accident ramanagar
ಬಸ್‌ ಪಲ್ಟಿಯಾಗಿ ಬಿದ್ದಿರುವುದು


ಹತ್ತು ಮಂದಿಗೆ ಗಾಯಗಳಾಗಿದ್ದು,‌ಇದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಳುಗಳನ್ನು ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬಸ್ ಮೇಲೆತ್ತುವ ರಕ್ಷಣಾ ಕಾರ್ಯ ಪ್ರಗತಿಯಲ್ಲಿದ್ದು, ಮಾಗಡಿ ಟೌನ್ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ. ಬಸ್‌ಗೆ - ಟ್ರ್ಯಾಕ್ಟರ್ ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಟೈರುಗಳೆಲ್ಲ ಕಳಚಿಕೊಂಡಿವೆ. ಬಸ್‌ ,ಪಲ್ಟಿಯಾಗಿದ್ದು ಬಹುತೇಕ ಜಖಂಗೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ