ರಾಮನಗರ: ಈ ವರ್ಷ ಯಾವ ಖಾಸಗಿ ಶಿಕ್ಷಣ ಸಂಸ್ಥೆಗಳೂ ಶಾಲಾ ಶುಲ್ಕವನ್ನು ಹೆಚ್ಚಿಸಬಾರದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಬುಧವಾರ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಲಾಕ್ಡೌನ್ ಸಂದರ್ಭದಲ್ಲಿ ಜನರು ಸಾಕಷ್ಟು ಸಂಕಷ್ಟಕ್ಕೊಳಗಾಗಿದ್ದಾರೆ. ಇಂತಹ ಸಮಯದಲ್ಲಿ ಖಾಸಗಿ ಶಾಲೆಗಳು ಯಾವುದೇ ಕಾರಣಕ್ಕೂ ಶುಲ್ಕವನ್ನು ಹೆಚ್ಚಿಸಬಾರದು ಎಂದು ಹೇಳಿದ್ದಾರೆ. ಇದೇ ವೇಳೆ ಶಿಕ್ಷಕರನ್ನು ಕೆಲಸದಿಂದಲೂ ತೆಗೆಯಬಾರದು ಎಂದು ಸಚಿವರು ಹೇಳಿದ್ದಾರೆ.
ರಾಮನಗರ: 11 ಮಂದಿ ಗುಣಮುಖ, ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ, 14
ಇನ್ನು ಎಸ್ಎಸ್ಎಲ್ಸಿ ಪರೀಕ್ಷೆ ಮೌಲ್ಯ ಮಾಪನದ ವಿಚಾರದಲ್ಲಿ ಹಬ್ಬಿರುವ ಊಹಾಪೋಹಗಳು ಸಾಮಾನ್ಯವಾಗಿದ್ದು, ಅವನ್ನೆಲ್ಲ ಕೇಳಿ ಅಭ್ಯಾಸವಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಅಲ್ಲದೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದಕ್ಕೆ ವಿರೋಧ ಪಕ್ಷದ ನಾಯಕರ ವಿರೋಧವಿಲ್ಲ. ನಾನು ಎಲ್ಲರ ಜೊತೆ ಮಾತನಾಡಿದ್ದೇನೆ. ಎಲ್ಲರೂ ಪರೀಕ್ಷೆ ನಡೆಸುವ ಪರವಾಗಿದ್ದಾರೆ ಎಂದು ಹೇಳಿದರು. ಇನ್ನು ಆನ್ಲೈನ್ ಶಿಕ್ಷಣದ ಕುರಿತು ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ನಾವು ತಾತ್ಕಾಲಿಕವಾಗಿ ಮಾರ್ಗಸೂಚಿ ಸಿದ್ಧಪಡಿಸಿದ್ದೇವೆ. ಈ ಸಂಬಂಧ ತಜ್ಞರ ತಂಡವೂ ರಚನೆಯಾಗಿದ್ದು, ಶೀಘ್ರದಲ್ಲೇ ಸೂಕ್ತ ನಿರ್ಧಾರ ಪ್ರಕಟವಾಗುತ್ತೆ ಎಂದರು.
ಕೊರೊನಾ ವೈರಸ್ ತಡೆಗೆ ಪೊಲೀಸರ ಬುದ್ಧಿವಂತಿಕೆ..! ಠಾಣೆಗೆ ಸಾರ್ವಜನಿಕರಿಗೆ ನೋ ಎಂಟ್ರಿ..!
ಇನ್ನು ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೆ ಆಗಸ್ಟ್ನಲ್ಲಿ ಪರೀಕ್ಷೆ ನಡೆಯಲಿದ್ದು, ಅವರನ್ನು ಫ್ರೆಷರ್ಸ್ ಎಂದು ಪರಿಗಣಿಸಲಾಗುತ್ತದೆ. ಇದೇ ವೇಳೆ ಖಾಸಗಿ ಶಾಲೆಯ ಶಿಕ್ಷಕರಿಗೆ ಸಂಬಳದ ಕೊರತೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಸಚಿವ ಸುರೇಶ್ ಕುಮಾರ್, ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳು ಕೇಳಿ ಬಂದಿವೆ. ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದ ನಂತರ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಟಿಪ್ಪರ್ - ಬೈಕ್ ನಡುವೆ ಅಪಘಾತ: ಬ್ಯಾಂಕ್ ಉದ್ಯೋಗಿ ಸ್ಥಳದಲ್ಲೇ ಸಾವು
ಬುಧವಾರ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಲಾಕ್ಡೌನ್ ಸಂದರ್ಭದಲ್ಲಿ ಜನರು ಸಾಕಷ್ಟು ಸಂಕಷ್ಟಕ್ಕೊಳಗಾಗಿದ್ದಾರೆ. ಇಂತಹ ಸಮಯದಲ್ಲಿ ಖಾಸಗಿ ಶಾಲೆಗಳು ಯಾವುದೇ ಕಾರಣಕ್ಕೂ ಶುಲ್ಕವನ್ನು ಹೆಚ್ಚಿಸಬಾರದು ಎಂದು ಹೇಳಿದ್ದಾರೆ. ಇದೇ ವೇಳೆ ಶಿಕ್ಷಕರನ್ನು ಕೆಲಸದಿಂದಲೂ ತೆಗೆಯಬಾರದು ಎಂದು ಸಚಿವರು ಹೇಳಿದ್ದಾರೆ.
ರಾಮನಗರ: 11 ಮಂದಿ ಗುಣಮುಖ, ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ, 14
ಇನ್ನು ಎಸ್ಎಸ್ಎಲ್ಸಿ ಪರೀಕ್ಷೆ ಮೌಲ್ಯ ಮಾಪನದ ವಿಚಾರದಲ್ಲಿ ಹಬ್ಬಿರುವ ಊಹಾಪೋಹಗಳು ಸಾಮಾನ್ಯವಾಗಿದ್ದು, ಅವನ್ನೆಲ್ಲ ಕೇಳಿ ಅಭ್ಯಾಸವಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಅಲ್ಲದೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದಕ್ಕೆ ವಿರೋಧ ಪಕ್ಷದ ನಾಯಕರ ವಿರೋಧವಿಲ್ಲ. ನಾನು ಎಲ್ಲರ ಜೊತೆ ಮಾತನಾಡಿದ್ದೇನೆ. ಎಲ್ಲರೂ ಪರೀಕ್ಷೆ ನಡೆಸುವ ಪರವಾಗಿದ್ದಾರೆ ಎಂದು ಹೇಳಿದರು. ಇನ್ನು ಆನ್ಲೈನ್ ಶಿಕ್ಷಣದ ಕುರಿತು ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ನಾವು ತಾತ್ಕಾಲಿಕವಾಗಿ ಮಾರ್ಗಸೂಚಿ ಸಿದ್ಧಪಡಿಸಿದ್ದೇವೆ. ಈ ಸಂಬಂಧ ತಜ್ಞರ ತಂಡವೂ ರಚನೆಯಾಗಿದ್ದು, ಶೀಘ್ರದಲ್ಲೇ ಸೂಕ್ತ ನಿರ್ಧಾರ ಪ್ರಕಟವಾಗುತ್ತೆ ಎಂದರು.
ಕೊರೊನಾ ವೈರಸ್ ತಡೆಗೆ ಪೊಲೀಸರ ಬುದ್ಧಿವಂತಿಕೆ..! ಠಾಣೆಗೆ ಸಾರ್ವಜನಿಕರಿಗೆ ನೋ ಎಂಟ್ರಿ..!
ಇನ್ನು ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೆ ಆಗಸ್ಟ್ನಲ್ಲಿ ಪರೀಕ್ಷೆ ನಡೆಯಲಿದ್ದು, ಅವರನ್ನು ಫ್ರೆಷರ್ಸ್ ಎಂದು ಪರಿಗಣಿಸಲಾಗುತ್ತದೆ. ಇದೇ ವೇಳೆ ಖಾಸಗಿ ಶಾಲೆಯ ಶಿಕ್ಷಕರಿಗೆ ಸಂಬಳದ ಕೊರತೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಸಚಿವ ಸುರೇಶ್ ಕುಮಾರ್, ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳು ಕೇಳಿ ಬಂದಿವೆ. ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದ ನಂತರ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಟಿಪ್ಪರ್ - ಬೈಕ್ ನಡುವೆ ಅಪಘಾತ: ಬ್ಯಾಂಕ್ ಉದ್ಯೋಗಿ ಸ್ಥಳದಲ್ಲೇ ಸಾವು