ಆ್ಯಪ್ನಗರ

ರೈತ ಸಂಘದಿಂದ ಚುನಾವಣೆ ಬಹಿಷ್ಕಾರ: ಎಚ್ಚರಿಕೆ

ನಗರದ ಕೃಷಿ ಮಾರುಕಟ್ಟೆಯಲ್ಲಿರುವ ಅವ್ಯವಸ್ಥೆ ಸರಿಪಡಿಸದಿದ್ದರೆ ರೈತ ಸಂಘದಿಂದ ಚುನಾವಣೆ ಬಹಿಷ್ಕಾರ ನಿರ್ಣಯ ಕೈಗೊಳ್ಳಬೇಕಾಗುತ್ತದೆ ಎಂದು ಸಂಘಟನೆ ಮುಖಂಡರು ಜಿಲ್ಲಾಢಳಿತಕ್ಕ ಎಚ್ಚರಿಕೆ ನೀಡಿದರು.

Vijaya Karnataka 25 Mar 2018, 4:03 pm
ರಾಮನಗರ: ನಗರದ ಕೃಷಿ ಮಾರುಕಟ್ಟೆಯಲ್ಲಿರುವ ಅವ್ಯವಸ್ಥೆ ಸರಿಪಡಿಸದಿದ್ದರೆ ರೈತ ಸಂಘದಿಂದ ಚುನಾವಣೆ ಬಹಿಷ್ಕಾರ ನಿರ್ಣಯ ಕೈಗೊಳ್ಳಬೇಕಾಗುತ್ತದೆ ಎಂದು ಸಂಘಟನೆ ಮುಖಂಡರು ಜಿಲ್ಲಾಢಳಿತಕ್ಕ ಎಚ್ಚರಿಕೆ ನೀಡಿದರು.
Vijaya Karnataka Web election boycott of farmers union warn
ರೈತ ಸಂಘದಿಂದ ಚುನಾವಣೆ ಬಹಿಷ್ಕಾರ: ಎಚ್ಚರಿಕೆ


ಸಿಗದ ಪರಿಹಾರ:
ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಮುಖಂಡ ಎಂ.ಡಿ.ಶಿವಕುಮಾರ್‌,'ನಗರ ಎಪಿಎಂಸಿಯಲ್ಲಿ ರೈತರ ಶೋಷಣೆ ಮಾಡಲಾಗುತ್ತಿದೆ. ಈ ಬಗ್ಗೆ ಹಲವಾರು ಬಾರಿ ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಸಮಸ್ಯೆಗಳು ನಿವಾರಣೆಯಾಗಿಲ್ಲ,'ಎಂದು ತಿಳಿಸಿದರು.

ಯಾವುದೇ ಕ್ರಮವಿಲ್ಲ: 'ರಾಮನಗರ ಮಾರುಕಟ್ಟೆಗೆ ಜಿಲ್ಲೆಯ ವಿವಿಧೆಡೆಗಳಿಂದ ಮತ್ತು ಬೆಂಗಳೂರಿನಿಂದ ತರಕಾರಿ ಸೇರಿದಂತೆ ಇತರೆ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲು ವ್ಯಾಪಾರಿಗಳು, ಮಾರಲು ರೈತರು ಬರುತ್ತಾರೆ. ಆದರೆ ಇಲ್ಲಿ ರೈತರ ಸಂಕಷ್ಟವನ್ನು ಕೇಳುವವರೇ ಇಲ್ಲದಂತಾಗಿದೆ. ಬಿಳಿ ಚೀಟಿ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ರೈತರು ನೇರವಾಗಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ. ಮಧ್ಯವರ್ತಿಗಳ ಜತೆ ಶಾಮೀಲಾಗಿ ಅಧಿಕಾರಿಗಳು ರೈತರಿಗೆ ಅನುಕೂಲವಾಗುವ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ,'ಎಂದು ಆರೋಪಿಸಿದರು.

ರಶೀದಿ ವ್ಯವಸ್ಥೆ:
'ನೂತನ ಜಿಲ್ಲಾಧಿಕಾರಿ ಇಲ್ಲಿನ ಸಮಸ್ಯೆಗಳನ್ನು ಕೂಡಲೇ ಗಮನಕ್ಕೆ ತೆಗೆದುಕೊಂಡು, ರೈತರಿಗೆ ಮುಕ್ತ ಮಾರಾಟ ವ್ಯವಸ್ಥೆ ಜಾರಿಗೆ ತರಬೇಕು. ಲೈಸೆæನ್ಸ್‌ ಪಡೆದ ವರ್ತಕರು ಮಾತ್ರ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು. ಸೊಪ್ಪು ಮಾರಾಟ ಮಾಡುವ ರೈತರಿಗೆ ಪ್ರತ್ಯೇಕ ಸ್ಥಳಾವಕಾಶ ಮಾಡಿಕೊಡಬೇಕು. ಯಾವುದೇ ಕೃಷಿ ಉತ್ಪನ್ನ ಮಾರಾಟಕ್ಕೂ ಅಧಿಕೃತ ರಶೀದಿಯನ್ನು ನೀಡುವ ವ್ಯವಸ್ಥೆ ಕಟ್ಟುನಿಟ್ಟಾಗಿ ಜಾರಿಯಾಗಬೇಕು,'ಎಂದು ಒತ್ತಾಯಿಸಿದರು.

'ತುರ್ತಾಗಿ ಬಿಳಿ ಚೀಟಿ ದಂಧೆಯನ್ನು ತಡೆಯಬೇಕು. ತಿಂಗಳ ಕೊನೆ ಭಾನುವಾರವೂ ರೈತರಿಗೆ ಮಾರುಕಟ್ಟೆಯಲ್ಲಿ ಮಾರಾಟ ವ್ಯವಸ್ಥೆ ಮಾಡಿಕೊಡಬೇಕು,' ಎಂದು ಆಗ್ರಹಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ,' ಸಮಸ್ಯೆಗಳನ್ನು ಪರಿಹಾರ ಮಾಡಲು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು,' ಎಂದು ಭರವಸೆಯನ್ನು ನೀಡಿದರು.

ಈ ವೇಳೆ ರೈತ ಸಂಘದ ಮುಖಂಡರಾದ ಸಂಪತ್‌ಕುಮಾರ್‌, ಕೆಂಪಯ್ಯ, ಆನಂದ್‌, ಜನಾರ್ಧನ್‌, ಆರ್‌.ಕಿಶೋರ್‌ ಕುಮಾರ್‌, ಕೆ.ಲಕ್ಷ್ಮೀನಾರಾಯಣ, ಮಂಜುನಾಥ್‌ .ಜೆ, ಮುಂತಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ