ಆ್ಯಪ್ನಗರ

ನೀತಿಸಂಹಿತೆ: ಮಹಾನ್‌ ನಾಯಕರ ಸರಳ ಜನ್ಮ ದಿನಾಚರಣೆ

ಲೋಕಸಭಾ ಚುನಾವಣೆಯ ಹಿನ್ನೆæ್ನ್ನಲೆಯಲ್ಲಿ ನೀತಿಸಂಹಿತೆ ಇರುವುದರಿಂದ ಮೇಲಾಧಿಕಾರಿಗಳ ಆದೇಶದಂತೆ ಮಹಾನ್‌ ನಾಯಕರ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವುದು ಎಂದು ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕಿರಣ್‌ ಹೇಳಿದರು.

Vijaya Karnataka 30 Mar 2019, 5:00 am
ಚನ್ನಪಟ್ಟಣ: ಲೋಕಸಭಾ ಚುನಾವಣೆಯ ಹಿನ್ನೆæ್ನ್ನಲೆಯಲ್ಲಿ ನೀತಿಸಂಹಿತೆ ಇರುವುದರಿಂದ ಮೇಲಾಧಿಕಾರಿಗಳ ಆದೇಶದಂತೆ ಮಹಾನ್‌ ನಾಯಕರ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವುದು ಎಂದು ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕಿರಣ್‌ ಹೇಳಿದರು.
Vijaya Karnataka Web election ethics simple birthday celebration of great leaders
ನೀತಿಸಂಹಿತೆ: ಮಹಾನ್‌ ನಾಯಕರ ಸರಳ ಜನ್ಮ ದಿನಾಚರಣೆ


ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್‌ ರಾಮ್‌ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್‌ ಜನ್ಮ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ತಾಲೂಕು ದಂಡಾಧಿಕಾರಿ ಅದೇಶಾನುಸಾರ ಮಹಾನ್‌ ಗಣ್ಯ ನಾಯಕರ ಜನ್ಮದಿನಾಚರಣೆಗೆ ನೀತಿ ಸಂಹಿತೆ ಅಡ್ಡಿಯಾಗಿರುವುದರಿಂದ ಅದ್ದೂರಿ ಆಚರಣೆ ಕೈಬಿಟ್ಟು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಹಾಗೂ ವಿವಿಧ ಸಮುದಾಯದ ಮುಖಂಡರ ಸಹಕಾರದಲ್ಲಿ ಆಚರಿಸಲಾಗುವುದು ಎಂದರು.

ಏ.5 ರಂದು ಡಾ. ಬಾಬು ಜಗಜೀವನ್‌ ರಾಮ್‌ ಜಯಂತಿ ಹಾಗೂ ಏ. 14 ರಂದು. ಬಿ.ಆರ್‌.ಅಂಬೇಡ್ಕರ್‌ ಜಯಂತಿಯನ್ನು ನಿಗದಿತ ದಿನಾಂಕ ಹಾಗೂ ನಿಗದಿತ ಸಮಯದಲ್ಲಿ ಆಚರಣೆ ಮಾಡಲು ಮುಖಂಡರು ಸಲಹೆ, ಸಹಕಾರವನ್ನು ನೀಡುವಂತೆ ತಿಳಿಸಿದರು.

ತಾ.ಪಂ. ಸಹಾಯಕ ನಿರ್ದೇಶಕ ಲೋಕೇಶ್‌ ಮಾತನಾಡಿ, ಡಾ. ಬಾಬು ಜಗಜೀವನ್‌ ರಾಮ್‌ ಹಾಗೂ ಡಾ. ಬಿ.ಆರ್‌.ಅಂಬೇಡ್ಕರ್‌ ಜನ್ಮದಿನೋತ್ಸವವನ್ನು ಕಚೇರಿಯಲ್ಲಿಯೇ ಅರ್ಥಪೂರ್ಣವಾಗಿ ಆಚರಣೆ ಮಾಡಲು ಸಿದ್ಧತೆ ಮಾಡಿಕೊಳ್ಳುವುದಾಗಿ ತಿಳಿಸಿದರು.

ತಾಲೂಕು ದಲಿತ ಹಿರಿಯ ಮುಖಂಡ ಸಿದ್ದರಾಮಯ್ಯ ಮಾತನಾಡಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್‌ ರಾಮ್‌ ಜನ್ಮ ಜಯಂತಿ ಹಾಗೂ ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್‌ ಜನ್ಮ ಜಯಂತಿಯನ್ನು ಸರಳವಾದರೂ ಅರ್ಥಗರ್ಭಿತವಾಗಿ ಆಚರಣೆ ಮಾಡುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಕಚೇರಿಯ ಶಿರಸ್ತೆದಾರ ಮಹದೇವಯ್ಯ, ಅಕ್ಷ ರ ದಾಸೋಹ ನಿರ್ದೇಶಕ ಸಿದ್ದರಾಜು, ಸಮಾಜ ಕಲಾಣ ಇಲಾಖೆಯ ಸಿದ್ದೇಗೌಡ, ವೇದಮೂರ್ತಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಜಯರಾಮು, ತಾ.ಪಂ. ವ್ಯವಸ್ಥಾಪಕ ಸತೀಶ್‌, ಮೀನುಗಾರಿಕೆ ಇಲಾಖೆಯ ಗಸ್ತಿಗಾರ್‌ ದಲಿತ ಹಿರಿಯ ಮುಖಂಡ ವೆಂಕಟಚಲಯ್ಯ, ಸಮತ ಸೈನಿಕ ದಳದ ತಾಲೂಕು ಅಧ್ಯಕ್ಷ ಚಕ್ಕೆರೆ ಲೋಕೇಶ್‌, ದಲಿತ ಸಂಘರ್ಷ ಸಮಿತಿ ಸಂಚಾಲಕ ವೆಂಕಟೇಶ್‌ (ಶೇಟು), ಆದಿ ಚಾಂಬವ ಸಂಘದ ತಾಲೂಕು ಅಧ್ಯಕ್ಷ ಮಹದೇವು ಹಾಗೂ ಹಲವಾರು ಮಂದಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ