ಆ್ಯಪ್ನಗರ

ಅಬಕಾರಿ ದಾಳಿ: ಅಕ್ರಮ ಮದ್ಯ ವಶ

ಲೋಕಸಭೆ ಚುನಾವಣಾ ಹೊಸ್ತಿಲಿನಲ್ಲಿಯೇ ಅಬಕಾರಿ ಇಲಾಖೆ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಅಕ್ರಮ ಮದ್ಯ ವಶಪಡಿಸಿಕೊಂಡಿದ್ದಾರೆ...

Vijaya Karnataka 15 Mar 2019, 5:00 am
ರಾಮನಗರ: ಲೋಕಸಭೆ ಚುನಾವಣಾ ಹೊಸ್ತಿಲಿನಲ್ಲಿಯೇ ಅಬಕಾರಿ ಇಲಾಖೆ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಅಕ್ರಮ ಮದ್ಯ ವಶಪಡಿಸಿಕೊಂಡಿದ್ದಾರೆ.
Vijaya Karnataka Web excise attack illegal liquor detention
ಅಬಕಾರಿ ದಾಳಿ: ಅಕ್ರಮ ಮದ್ಯ ವಶ


ಚನ್ನಪಟ್ಟಣದ ಅಬಕಾರಿ ವಲಯ ವ್ಯಾಪಿಯ ವಿವಿಧೆಡೆ ಬುಧವಾರ ದಾಳಿ ನಡೆಸಿರುವ ಇಲಾಖೆ, ಅಕ್ರಮ ಮದ್ಯ ಸಗಾಣೆ ಮಾಡುತ್ತಿದ್ದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದೆ. ಅದರಲಿದ್ದ 19.440 ಲೀಟರ್‌ ಮದ್ಯ ಹಾಗೂ 6.500 ಲೀಟರ್‌ ಬಿಯರ್‌ ಅನ್ನು ವಶಪಡಿಸಿಕೊಂಡು ಪ್ರಕರಣ ದಾಖಲು ಮಾಡಿದೆ. ಒಟ್ಟು 67,850 ರೂ ಮೌಲ್ಯದ ವಸ್ತುಗಳನ್ನು ಅಬಕಾರಿ ಇಲಾಖೆಯು ವಶ ಪಡಿಸಿಕೊಂಡಿದೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ದಾಳಿ ವೇಳೆ, ಅಬಕಾರಿ ಇನ್ಸೆಪೆಕ್ಟರ್‌ ವಿ.ಆಶಾ, ಸಬ್‌ ಇನ್ಸೆಪೆಕ್ಟರ್‌ ರಾಜೇಂದ್ರ, ಸಿಬ್ಬಂದಿಗಳಾದ ರಮೇಶ್‌, ವಸಂತ್‌ ಕುಮಾರ್‌ ಸೇರಿದಂತೆ ಇನ್ನಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ