ಆ್ಯಪ್ನಗರ

ಮೇಕೆದಾಟು ಪಾದಯಾತ್ರೆಯಲ್ಲಿ ಕೋವಿಡ್‌ ನಿಯಮ ಉಲ್ಲಂಘನೆ; ಮತ್ತೆ 41 ಮಂದಿ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್ ಮುಖಂಡರ ವಿರುದ್ಧ ದಾಖಲಾದ ಎರಡನೇ ಎಫ್‌ಐಆರ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ಕೃಷ್ಣ ಭೈರೇಗೌಡ, ಹೆಚ್ ಆಂಜನೇಯ, ನಾರಾಯಣಸ್ವಾಮಿ, ಮೋಟಮ್ಮ, ಪಿ.ಟಿ,ಪರಮೇಶ್ವರ ನಾಯ್ಕ್, ಧೃವನಾರಾಯಣ, ಆರ್ ನರೇಂದ್ರ, ಅಂಜಲಿ ನಿಂಬಾಳ್ಕರ್, ಲಕ್ಷ್ಮಿ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ಮಧು ಬಂಗಾರಪ್ಪ, ಐವನ್ ಡಿಸೋಜ, ಕುಸುಮಾ, ಶರತ್ ಬಚ್ಚೇಗೌಡ, ಪ್ರಿಯಾಕೃಷ್ಣಾ ,ಸಲೀಂ ಅಹಮದ್, ಎಂ.ಬಿ.ಪಾಟೀಲ್, ಉಮಾಶ್ರಿ, ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ನಲಪಾಡ್ ಹ್ಯಾರೀಸ್, ಟಿ ಬಿ ಜಯಚಂದ್ರ, ಸತೀಶ್ ಜಾರಕಿಹೊಳಿ ಸೇರಿದಂತೆ ಒಟ್ಟು 41 ಮಂದಿಯ ಹೆಸರಿದೆ

Reported byಇರ್ಷಾದ್ ಉಪ್ಪಿನಂಗಡಿ | Vijaya Karnataka Web 11 Jan 2022, 1:48 pm
ಬೆಂಗಳೂರು: ಕಾಂಗ್ರೆಸ್‌ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಒಟ್ಟು 41 ಮತ್ತೆ ಎಫ್ಐಆರ್ ದಾಖಲಾಗಿದೆ.
Vijaya Karnataka Web Fir Against Congress Leaders


ರಾಮನಗರ ಜಿಲ್ಲೆಯ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಭಾನುವಾರ ವೀಕೆಂಡ್ ಕರ್ಫ್ಯೂ ಉಲ್ಲಂಘನೆ ಮಾಡಿದ್ದಕ್ಕಾಗಿ 30 ಮಂದಿ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿತ್ತು. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ಇದೀಗ ಮತ್ತೆ ಎರಡನೇ ಎಫ್ಐಆರ್ ಕಾಂಗ್ರೆಸ್ ಮುಖಂಡರ ವಿರುದ್ಧ ದಾಖಲಾಗಿದೆ. ಎರಡನೇ ಎಫ್‌ಐಆರ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ಕೃಷ್ಣ ಭೈರೇಗೌಡ, ಹೆಚ್ ಆಂಜನೇಯ, ನಾರಾಯಣಸ್ವಾಮಿ, ಮೋಟಮ್ಮ, ಪಿ.ಟಿ,ಪರಮೇಶ್ವರ ನಾಯ್ಕ್, ಧೃವನಾರಾಯಣ, ಆರ್ ನರೇಂದ್ರ, ಪುಟ್ಟರಂಗ ಶೆಟ್ಟಿ, ವೀಣಾ ಅಚ್ಚಯ್ಯ, ಅಂಜಲಿ ನಿಂಬಾಳ್ಕರ್, ಲಕ್ಷ್ಮಿ ಹೆಬ್ಬಾಳ್ಕರ್, ಕೀರ್ತಿರಾಜ ಯುವ ಕಾಂಗ್ರೆಸ್, ಬಿ.ಶ್ರೀನಿವಾಸ್, ಶಿವರಾಜ್ ತಂಗಡಗಿ, ಮಧು ಬಂಗಾರಪ್ಪ, ಐವನ್ ಡಿಸೋಜ, ಕುಸುಮಾ, ಶರತ್ ಬಚ್ಚೇಗೌಡ, ಪ್ರಿಯಾಕೃಷ್ಣಾ ,ಸಲೀಂ ಅಹಮದ್, ಪದ್ಮಾವತಿ ಮಾಜಿ ಮೇಯರ್, ಎಂ.ಬಿ.ಪಾಟೀಲ್, ಡಾ.ರಂಗನಾಥ್, ಉಮಾಶ್ರಿ, ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ರವಿ.ಎಸ್ ಎಂ.ಎಲ್.ಸಿ, ನಲಪಾಡ್ ಹ್ಯಾರೀಸ್, ಟಿ ಬಿ ಜಯಚಂದ್ರ, ಸತೀಶ್ ಜಾರಕಿಹೊಳಿ ಸೇರಿದಂತೆ ಒಟ್ಟು 41 ಮುಖಂಡರ ವಿರುದ್ಧ ದಾಖಲಿಸಲಾಗಿದೆ.
ಕೋವಿಡ್ ನಿಯಮ ಉಲ್ಲಂಘನೆ; ರೇಣುಕಾಚಾರ್ಯ ವರ್ತನೆ ಸಮರ್ಥಿಸಿಕೊಂಡ ಅಶ್ವತ್ಥ್‌ ನಾರಾಯಣ್‌!
ಕನಕಪುರ ತಾಲೂಕಿನಲ್ಲಿ ಸರ್ಕಾರ ಕೋವಿಡ್ ಪ್ರಯುಕ್ತ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸದೆ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಪಾಲಿಸದೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮದ ಕಲಂಗಳನ್ನು, ಉಲಂಘಿಸಿದ್ದಲ್ಲದೇ, ಅಕ್ರಮ ಕೂಟ ರಚಿಸಿಕೊಂಡು ಸಾರ್ವಜನಿಕರಿಗೆ ತೊಂದರೆಯನ್ನು ಉಂಟು ಮಾಡಿದ್ದಾರೆ ಎಂದು ಎಫ್ಐಆರ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ತಮ್ಮ ಈ ರೀತಿಯ ಅಜಾಗರೂಕತೆಯ ಕೃತ್ಯಗಳಿಂದ ಸಾರ್ವಜನಿಕರ ಆರೋಗ್ಯ ಹಾಗೂ ಜೀವಕ್ಕೆ ಅಪಾಯವಾಗುವ ರೀತಿಯಲ್ಲಿ ಪಾದಯಾತ್ರೆ ಮಾಡಿರುತ್ತಾರೆ ಎಂಬ ಕಾರಣಕ್ಕಾಗಿ ಭಾರತ ದಂಡ ಸಂಹಿತೆ ಕಲಂ 141, 143, 290, 336, 149 ಅನ್ವಯ ದೂರು ದಾಖಲಿಸಲಾಗಿದೆ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ