ಆ್ಯಪ್ನಗರ

ಮಾವಿನ ಮರಗಳಿಗೆ ಬೆಂಕಿ-ಫಸಲು ನಾಶ

ಮಾವಿನ ತೋಟಕ್ಕೆ ಬೆಂಕಿ ಬಿದ್ದ ಪರಿಣಾಮ ಸುಮಾರು 60ಕ್ಕೂ ಹೆಚ್ಚು ಮಾವಿನ ಮರಗಳು ಸುಟ್ಟು ಕರಕಲಾಗಿರುವ ಘಟನೆ ಬಿಡದಿ ಹೋಬಳಿ ಕಂಚುಗಾರನಹಳ್ಳಿ ಗ್ರಾಪಂ ...

Vijaya Karnataka 6 Jan 2019, 5:00 am
ಬಿಡದಿ: ಮಾವಿನ ತೋಟಕ್ಕೆ ಬೆಂಕಿ ಬಿದ್ದ ಪರಿಣಾಮ ಸುಮಾರು 60ಕ್ಕೂ ಹೆಚ್ಚು ಮಾವಿನ ಮರಗಳು ಸುಟ್ಟು ಕರಕಲಾಗಿರುವ ಘಟನೆ ಬಿಡದಿ ಹೋಬಳಿ ಕಂಚುಗಾರನಹಳ್ಳಿ ಗ್ರಾಪಂ ವ್ಯಾಪ್ತಿಯ ಸಿದ್ದಯ್ಯನದೊಡ್ಡಿ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
Vijaya Karnataka Web fire harvesting for mango trees
ಮಾವಿನ ಮರಗಳಿಗೆ ಬೆಂಕಿ-ಫಸಲು ನಾಶ


ಸಿದ್ದಯ್ಯನದೊಡ್ಡಿ ಗ್ರಾಮದ ನಾಗರತ್ನ ಪುಟ್ಟವೀರಯ್ಯ ಎಂಬುವರಿಗೆ ಸೇರಿದ ಮಾವಿನ ತೋಟದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹೂವು ಮತ್ತು ಹೀಚು ಕಾಯಿಯಿಂದ ಕೂಡಿದ್ದ ಮಾವಿನ ಮರಗಳು ಬೆಂಕಿಗಾಹುತಿಯಾಗಿವೆ. ಮಾವಿನ ತೋಟದಲ್ಲಿ ಮಧ್ಯಾಹ್ನ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ಕ್ಷ ಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆ ಮಾವಿನ ಮರಗಳನ್ನು ಸುಟ್ಟುಹಾಕಿದೆ. ಬೆಂಕಿ ನಂದಿಸಲು ಸ್ಥಳೀಯರು ಪ್ರಯತ್ನಿಸಿದರಾದರೂ ಪ್ರಯೋಜನವಾಗಲಿಲ್ಲ.

ಮಾವಿನ ತೋಟವನ್ನೇ ಅವಲಂಬಿಸಿದ್ದ ಕುಟುಂಬ ಅಗ್ನಿ ದುರಂತದಿಂದ ಸಂಕಷ್ಟಕ್ಕೆ ಸಿಲುಕಿದೆ. ಇನ್ನು ಮೂರು ತಿಂಗಳಲ್ಲಿ ಮಾವಿನ ಫಸಲು ಕೈ ಸೇರುತ್ತಿತ್ತು. ಆದರೆ, ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಾಕಿದ್ದಾರೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದು ನಾಗರತ್ನಮ್ಮ ಅಳಲು ತೋಡಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ